AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಭಾರತದ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಅವರ ಒಲಂಪಿಕ್ಸ್ ಪದಕದ ಕನಸು ಭಗ್ನ

Deepika Kumari: ಆರ್ಚರ್ ಸ್ಪರ್ಧೆಯಲ್ಲಿ ಪದಕದ ಭರವಸೆ ಹುಟ್ಟಿಸಿದ್ದ ಭಾರತದ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ. ಕ್ವಾರ್ಟರ್ ಫೈನಲ್​ನಲ್ಲಿ ಅವರು ದಕ್ಷಿಣ ಕೊರಿಯಾದ ವಿರುದ್ಧ ಸೋಲನುಭವಿಸಿದ್ದಾರೆ.

Tokyo Olympics: ಭಾರತದ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಅವರ ಒಲಂಪಿಕ್ಸ್ ಪದಕದ ಕನಸು ಭಗ್ನ
ಭಾರತದ ಆರ್ಚರ್ ಸ್ಪರ್ಧಿ ದೀಪಿಕಾ ಕುಮಾರಿ (ಸಾಂದರ್ಭಿಕ ಚಿತ್ರ, ಕೃಪೆ: Reuters)
TV9 Web
| Edited By: |

Updated on:Jul 30, 2021 | 12:35 PM

Share

ಟೊಕಿಯೊ ಒಲಂಪಿಕ್ಸ್: ಭಾರತಕ್ಕೆ ಆರ್ಚರ್ ಸ್ಪರ್ಧೆಯಲ್ಲಿ ಪದಕದ ಭರವಸೆ ಹುಟ್ಟಿಸಿದ್ದ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಸ್ಪರ್ಧೆಯಿಂದ ಹೊರ ಬಿದ್ದಿದ್ದಾರೆ. ದಕ್ಷಿಣ ಕೊರಿಯಾದ ಅನ್ ಸಾನ್ ಅವರಿಗೆ 6-0 ಅಂತರದಿಂದ ದೀಪಿಕಾ ಕುಮಾರಿ ಶರಣಾಗಿದ್ಧಾರೆ. ಉತ್ತಮವಾಗಿ ಅಭಿಯಾನ ಆರಂಭಿಸಿ ಗೆಲುವಿನೊಂದಿಗೆ ಮುನ್ನುಗ್ಗುತ್ತಿದ್ದ ದೀಪಿಕಾ ಅವರಿಗೆ ಕ್ವಾರ್ಟರ್ ಫೈನಲ್​ನಲ್ಲಿ ಅನ್ ಸಾನ್ ಅವರು ಬ್ರೇಕ್ ಹಾಕಿದ್ದಾರೆ. ಈ ಗೆಲುವಿನೊಂದಿಗೆ ಅನ್ ಸಾನ್ ಸೆಮಿಫೈನಲ್ ಪ್ರವೇಶಿಸಿದ್ದಾರೆ. ದೀಪಿಕಾ ಕುಮಾರಿ ಅವರಿಗೆ ಪದಕ ಗೆಲ್ಲಲು ಕೇವಲ ಮೂರು ಹೆಜ್ಜೆಗಳಿದ್ದವು. ಈ ಸೋಲಿನೊಂದಿಗೆ ಅವರ ಟೊಕಿಯೊ ಒಲಂಪಿಕ್ಸ್ ಅಭಿಯಾನ ಅಂತ್ಯವಾಗಿದೆ.

ದಕ್ಷಿಣ ಕೊರಿಯಾದ ಅನ್ ಸಾನ್ ಅವರು ಈಗಾಗಲೇ ಟೂರ್ನಿಯಲ್ಲಿ ಎರಡು ಪದಕಗಳಿಗೆ ಕೊರಳೊಡ್ಡಿದ್ದಾರೆ. ಮಹಿಳೆಯರ ಗುಂಪು ಸ್ಪರ್ಧೆಯಲ್ಲಿ ಹಾಗೂ ಮಿಶ್ರ ಗುಂಪು ಸ್ಪರ್ಧೆಯಲ್ಲಿ ಈಗಾಗಲೇ ಗೆಲುವು ಸಾಧಿಸಿ ಹ್ಯಾಟ್ರಿಕ್ ಪದಕ ಜಯಿಸುವ ಹಂಬಲದಲ್ಲಿರುವ ಅನ್ ಸಾನ್ ಅವರು ದೀಪಿಕಾ ವಿರುದ್ಧದ ಜಯದೊಂದಿಗೆ ಪ್ರಶಸ್ತಿಗೆ ಮತ್ತಷ್ಟು ಸನಿಹವಾಗಿದ್ದಾರೆ.

ಈ ಕುರಿತು ಭಾರತದ ಅಧಿಕೃತ ಒಲಂಪಿಕ್ಸ್ ಟ್ವಿಟರ್ ಖಾತೆ ಹಂಚಿಕೊಂಡ ಟ್ವೀಟ್:

ಭಾರತಕ್ಕೆ ಆರ್ಚರಿ ಸ್ಪರ್ಧೆಯಲ್ಲಿ ಮೊದಲ ಪದಕ ತಂದುಕೊಡುವ ಹುಮ್ಮಸ್ಸಿನಲ್ಲಿದ್ದ ದೀಪಿಕಾ ಅವರಿಗೆ ಈ ಪಂದ್ಯದಿಂದ ನಿರಾಸೆಯಾಗಿದೆ.

ಇದನ್ನೂ ಓದಿ: Tokyo Olympics: ಒಲಂಪಿಕ್ಸ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಚಿತಪಡಿಸಿದ ಲವ್ಲಿನಾ ಬೊರ್ಗೊಹೈನ್!

ಇದನ್ನೂ ಓದಿ: Tokyo Olympics: ಮಾಡು ಇಲ್ಲವೇ ಮಡಿ ಪಂದ್ಯ ಗೆದ್ದ ಭಾರತದ ವನಿತೆಯರ ಹಾಕಿ ತಂಡ; ಪದಕದಾಸೆ ಜೀವಂತ

(Indian Archer Deepika Kumari eliminated in quarter finals of Tokyo Olympics )

Published On - 12:21 pm, Fri, 30 July 21

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ