AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಮಾಡು ಇಲ್ಲವೇ ಮಡಿ ಪಂದ್ಯ ಗೆದ್ದ ಭಾರತದ ವನಿತೆಯರ ಹಾಕಿ ತಂಡ; ಪದಕದಾಸೆ ಜೀವಂತ

Indian Women Hockey Team: ಭಾರತದ ಮಹಿಳೆಯರ ಹಾಕಿ ತಂಡವು ಐರ್ಲೆಂಡ್ ವಿರುದ್ಧದ ಪಂದ್ಯವನ್ನು ಗೆದ್ದು ಕ್ವಾರ್ಟರ್ ಫೈನಲ್ ಆಸೆಯನ್ನು ಜೀವಂತವಾಗಿಟ್ಟಿದೆ.

Tokyo Olympics: ಮಾಡು ಇಲ್ಲವೇ ಮಡಿ ಪಂದ್ಯ ಗೆದ್ದ ಭಾರತದ ವನಿತೆಯರ ಹಾಕಿ ತಂಡ; ಪದಕದಾಸೆ ಜೀವಂತ
ಐರ್ಲೆಂಡ್ ವಿರುದ್ಧ 1-0 ಗೆಲುವು ದಾಖಲಿಸಿದ ಭಾರತದ ಮಹಿಳೆಯರ ಹಾಕಿ ತಂಡ (ಚಿತ್ರ ಕೃಪೆ: ಹಾಕಿ ಇಂಡಿಯಾ)
TV9 Web
| Updated By: shivaprasad.hs|

Updated on:Jul 30, 2021 | 11:54 AM

Share

ಟೊಕಿಯೊ ಒಲಂಪಿಕ್ಸ್: ಭಾರತದ ವನಿತೆಯರ ಹಾಕಿ ತಂಡವು ನಿರ್ಣಾಯಕವಾಗಿದ್ದ ಐರ್ಲೆಂಡ್ ವಿರುದ್ಧದ ಪಂದ್ಯವನ್ನು ಗೆದ್ದು ಕ್ವಾರ್ಟರ್ ಫೈನಲ್ ಆಸೆಯನ್ನು ಜೀವಂತವಾಗಿಟ್ಟಿದೆ. ಇಂದು (ಶುಕ್ರವಾರ) ‘ಓಯ್ ಹಾಕಿ ಕ್ರೀಡಾಂಗಣದ ಉತ್ತರ ಪಿಚ್​’ನಲ್ಲಿ ನಡೆದ ಪಂದ್ಯದಲ್ಲಿ ರಾಣಿ-ರಾಮ್​ಪಾಲ್ ನೇತೃತ್ವದ ಮಹಿಳೆಯರ ತಂಡ 1-0 ಗೋಲುಗಳಿಂದ ಐರ್ಲೆಂಡ್ ತಂಡವನ್ನು ಮಣಿಸಿತು. ಈ ಮೊದಲು ಗ್ರೂಪ್ ಹಂತದದ ಮೊದಲ ಮೂರು ಪಂದ್ಯಗಳಲ್ಲಿ ಭಾರತ ಸೋಲನುಭವಿಸಿತ್ತು. ಈಗ ಗೆಲುವಿನ ಹಾದಿಗೆ ಮರಳಿದೆ.

ಪಂದ್ಯದ ಮೊದಲಾರ್ಧದಲ್ಲಿ ಪ್ರಬಲ ಪೈಪೋಟಿ ನಡೆಸಿದ ಎರಡೂ ತಂಡಗಳು ಹಲವು ಬಾರಿ ಪ್ರಯತ್ನ ಪಟ್ಟರೂ ಗೋಲು ದಾಖಲಿಸಲು ಸಾಧ್ಯವಾಗಿರಲಿಲ್ಲ. ದ್ವಿತೀಯಾರ್ಧದಲ್ಲೂ ಮೂರನೇ ಅವಧಿಯಲ್ಲಿ ಯಾವುದೇ ಗೋಲು ದಾಖಲಾಗಿರಲಿಲ್ಲ. ನಾಲ್ಕನೇ ಅವಧಿಯಲ್ಲಿ ಭಾರತದ ತಂಡವು ಒತ್ತಡವನ್ನು ಹಿಮ್ಮೆಟ್ಟಿ ಆಟದ ಮುಕ್ತಾಯಕ್ಕೆ ಕೊನೆಯ ಮೂರು ನಿಮಿಷಗಳಿರುವಾಗ ಗೋಲು ದಾಖಲಿಸಿತು. ಕೊನೆಯಲ್ಲಿ ಭಾರತದ ಗೆಲುವಿನ ನಗುವಿಗೆ ಕಾರಣವಾಗಿದ್ದು ನವನೀತ್ ಕೌರ್ ದಾಖಲಿಸಿದ ಗೋಲು. ಅದಕ್ಕೆ ಪ್ರತಿಯಾಗಿ ಐರ್ಲೆಂಡ್ ವನಿತೆಯರು ಬಹಳ ಪ್ರಯತ್ನಪಟ್ಟರೂ ಗೋಲು ದಾಖಲಾಗಲಿಲ್ಲ. ಕೊನೆಯಲ್ಲಿ ಭಾರತವೇ ವಿಜಯದ ನಗೆ ಬೀರಿತು.

ಭಾರತದ ಅಧಿಕೃತ ಕ್ರೀಡಾ ಖಾತೆ ಎಸ್​ಎಐಎಮ್ ಹಂಚಿಕೊಂಡ ಟ್ವೀಟ್:

ಇತ್ತ ಬಾಕ್ಸಿಂಗ್​ನಲ್ಲಿ ಭಾರತಕ್ಕೆ ಪದಕವೊಂದು ಖಚಿತವಾಗಿದೆ. ಅಸ್ಸಾಂ ಮೂಲದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಸೆಮಿಫೈನಲ್​ಗೆ ಲಗ್ಗೆ ಇಟ್ಟಿದ್ದು, ಮೇರಿ ಕೋಮ್, ವಿಜೇಂದರ್ ಸಿಂಗ್ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಭಾರತದ ಭರವಸೆಯ ಷಟ್ಲರ್ ಪಿ.ವಿ.ಸಿಂಧು ಅವರು ಇಂದು ಕ್ವಾರ್ಟರ್ ಫೈನಲ್​ನಲ್ಲಿ ಸೆಣಸಲಿದ್ದಾರೆ.

ಇದನ್ನೂ ಓದಿ:

Tokyo Olympics: ಒಲಂಪಿಕ್ಸ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಚಿತಪಡಿಸಿದ ಲವ್ಲಿನಾ ಬೊರ್ಗೊಹೈನ್!

Tokyo Olympics: ಆರ್ಚರಿಯಲ್ಲಿ ಕೆ.ಪೆರೊವಾ ವಿರುದ್ಧ ಗೆಲುವು; ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟ ಭಾರತದ ದೀಪಿಕಾ ಕುಮಾರಿ

(Indian Women Hockey team won against Ireland and keeps hope of quarter final in Tokyo Olympics)

Published On - 11:52 am, Fri, 30 July 21

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ