Tokyo Olympics: ಮಾಡು ಇಲ್ಲವೇ ಮಡಿ ಪಂದ್ಯ ಗೆದ್ದ ಭಾರತದ ವನಿತೆಯರ ಹಾಕಿ ತಂಡ; ಪದಕದಾಸೆ ಜೀವಂತ

Indian Women Hockey Team: ಭಾರತದ ಮಹಿಳೆಯರ ಹಾಕಿ ತಂಡವು ಐರ್ಲೆಂಡ್ ವಿರುದ್ಧದ ಪಂದ್ಯವನ್ನು ಗೆದ್ದು ಕ್ವಾರ್ಟರ್ ಫೈನಲ್ ಆಸೆಯನ್ನು ಜೀವಂತವಾಗಿಟ್ಟಿದೆ.

Tokyo Olympics: ಮಾಡು ಇಲ್ಲವೇ ಮಡಿ ಪಂದ್ಯ ಗೆದ್ದ ಭಾರತದ ವನಿತೆಯರ ಹಾಕಿ ತಂಡ; ಪದಕದಾಸೆ ಜೀವಂತ
ಐರ್ಲೆಂಡ್ ವಿರುದ್ಧ 1-0 ಗೆಲುವು ದಾಖಲಿಸಿದ ಭಾರತದ ಮಹಿಳೆಯರ ಹಾಕಿ ತಂಡ (ಚಿತ್ರ ಕೃಪೆ: ಹಾಕಿ ಇಂಡಿಯಾ)
Follow us
| Updated By: shivaprasad.hs

Updated on:Jul 30, 2021 | 11:54 AM

ಟೊಕಿಯೊ ಒಲಂಪಿಕ್ಸ್: ಭಾರತದ ವನಿತೆಯರ ಹಾಕಿ ತಂಡವು ನಿರ್ಣಾಯಕವಾಗಿದ್ದ ಐರ್ಲೆಂಡ್ ವಿರುದ್ಧದ ಪಂದ್ಯವನ್ನು ಗೆದ್ದು ಕ್ವಾರ್ಟರ್ ಫೈನಲ್ ಆಸೆಯನ್ನು ಜೀವಂತವಾಗಿಟ್ಟಿದೆ. ಇಂದು (ಶುಕ್ರವಾರ) ‘ಓಯ್ ಹಾಕಿ ಕ್ರೀಡಾಂಗಣದ ಉತ್ತರ ಪಿಚ್​’ನಲ್ಲಿ ನಡೆದ ಪಂದ್ಯದಲ್ಲಿ ರಾಣಿ-ರಾಮ್​ಪಾಲ್ ನೇತೃತ್ವದ ಮಹಿಳೆಯರ ತಂಡ 1-0 ಗೋಲುಗಳಿಂದ ಐರ್ಲೆಂಡ್ ತಂಡವನ್ನು ಮಣಿಸಿತು. ಈ ಮೊದಲು ಗ್ರೂಪ್ ಹಂತದದ ಮೊದಲ ಮೂರು ಪಂದ್ಯಗಳಲ್ಲಿ ಭಾರತ ಸೋಲನುಭವಿಸಿತ್ತು. ಈಗ ಗೆಲುವಿನ ಹಾದಿಗೆ ಮರಳಿದೆ.

ಪಂದ್ಯದ ಮೊದಲಾರ್ಧದಲ್ಲಿ ಪ್ರಬಲ ಪೈಪೋಟಿ ನಡೆಸಿದ ಎರಡೂ ತಂಡಗಳು ಹಲವು ಬಾರಿ ಪ್ರಯತ್ನ ಪಟ್ಟರೂ ಗೋಲು ದಾಖಲಿಸಲು ಸಾಧ್ಯವಾಗಿರಲಿಲ್ಲ. ದ್ವಿತೀಯಾರ್ಧದಲ್ಲೂ ಮೂರನೇ ಅವಧಿಯಲ್ಲಿ ಯಾವುದೇ ಗೋಲು ದಾಖಲಾಗಿರಲಿಲ್ಲ. ನಾಲ್ಕನೇ ಅವಧಿಯಲ್ಲಿ ಭಾರತದ ತಂಡವು ಒತ್ತಡವನ್ನು ಹಿಮ್ಮೆಟ್ಟಿ ಆಟದ ಮುಕ್ತಾಯಕ್ಕೆ ಕೊನೆಯ ಮೂರು ನಿಮಿಷಗಳಿರುವಾಗ ಗೋಲು ದಾಖಲಿಸಿತು. ಕೊನೆಯಲ್ಲಿ ಭಾರತದ ಗೆಲುವಿನ ನಗುವಿಗೆ ಕಾರಣವಾಗಿದ್ದು ನವನೀತ್ ಕೌರ್ ದಾಖಲಿಸಿದ ಗೋಲು. ಅದಕ್ಕೆ ಪ್ರತಿಯಾಗಿ ಐರ್ಲೆಂಡ್ ವನಿತೆಯರು ಬಹಳ ಪ್ರಯತ್ನಪಟ್ಟರೂ ಗೋಲು ದಾಖಲಾಗಲಿಲ್ಲ. ಕೊನೆಯಲ್ಲಿ ಭಾರತವೇ ವಿಜಯದ ನಗೆ ಬೀರಿತು.

ಭಾರತದ ಅಧಿಕೃತ ಕ್ರೀಡಾ ಖಾತೆ ಎಸ್​ಎಐಎಮ್ ಹಂಚಿಕೊಂಡ ಟ್ವೀಟ್:

ಇತ್ತ ಬಾಕ್ಸಿಂಗ್​ನಲ್ಲಿ ಭಾರತಕ್ಕೆ ಪದಕವೊಂದು ಖಚಿತವಾಗಿದೆ. ಅಸ್ಸಾಂ ಮೂಲದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಸೆಮಿಫೈನಲ್​ಗೆ ಲಗ್ಗೆ ಇಟ್ಟಿದ್ದು, ಮೇರಿ ಕೋಮ್, ವಿಜೇಂದರ್ ಸಿಂಗ್ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಭಾರತದ ಭರವಸೆಯ ಷಟ್ಲರ್ ಪಿ.ವಿ.ಸಿಂಧು ಅವರು ಇಂದು ಕ್ವಾರ್ಟರ್ ಫೈನಲ್​ನಲ್ಲಿ ಸೆಣಸಲಿದ್ದಾರೆ.

ಇದನ್ನೂ ಓದಿ:

Tokyo Olympics: ಒಲಂಪಿಕ್ಸ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಚಿತಪಡಿಸಿದ ಲವ್ಲಿನಾ ಬೊರ್ಗೊಹೈನ್!

Tokyo Olympics: ಆರ್ಚರಿಯಲ್ಲಿ ಕೆ.ಪೆರೊವಾ ವಿರುದ್ಧ ಗೆಲುವು; ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟ ಭಾರತದ ದೀಪಿಕಾ ಕುಮಾರಿ

(Indian Women Hockey team won against Ireland and keeps hope of quarter final in Tokyo Olympics)

Published On - 11:52 am, Fri, 30 July 21

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ