AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಮಹಿಳಾ ಹಾಕಿ ತಂಡದ ಕೋಚ್ ಕೊಡಗಿನ ಅಂಕಿತಾ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸನ್ಮಾನ

ಪದಕ‌ ಗೆಲ್ಲಲು ಸಾಧ್ಯವಾಗದಿದ್ದರೂ ಭಾರತೀಯರ ಮನಸ್ಸನ್ನು ಆ ಮಹಿಳಾ ತಂಡ ಗೆದ್ದಿದೆ. ಆ ತಂಡದ ತರಬೇತಿದಾರರಾದ ನಿಮಗೆ ತುಂಬು ಹೃದಯದ ಶುಭಾಶಯ ಕೋರುತ್ತೇನೆ.

ಭಾರತ ಮಹಿಳಾ ಹಾಕಿ ತಂಡದ ಕೋಚ್ ಕೊಡಗಿನ ಅಂಕಿತಾ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸನ್ಮಾನ
ಅಂಕಿತಾ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸನ್ಮಾನ
TV9 Web
| Edited By: |

Updated on: Aug 13, 2021 | 7:26 PM

Share

ಬೆಂಗಳೂರು: ಭಾರತೀಯ ಮಹಿಳಾ ಹಾಕಿ ತಂಡದ ತರಬೇತುದಾರರಲ್ಲಿ ಒಬ್ಬರಾದ ಕೋಚ್ ಅಂಕಿತಾ ಅವರನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಸನ್ಮಾನಿಸಿ ಗೌರವಿಸಿದರು. ಟೋಕಿಯೋ ಒಲಂಪಿಕ್ ಟೂರ್ನಿಯಲ್ಲಿ ಭಾರತ ಮಹಿಳಾ ಹಾಕಿ ತಂಡ ಅತ್ಯುತ್ತಮ ಪ್ರದರ್ಶನ ತೋರಿದೆ. ಪದಕ‌ ಗೆಲ್ಲಲು ಸಾಧ್ಯವಾಗದಿದ್ದರೂ ಭಾರತೀಯರ ಮನಸ್ಸನ್ನು ಆ ಮಹಿಳಾ ತಂಡ ಗೆದ್ದಿದೆ. ಆ ತಂಡದ ತರಬೇತಿದಾರರಾದ ನಿಮಗೆ ತುಂಬು ಹೃದಯದ ಶುಭಾಶಯ ಕೋರುತ್ತೇನೆ. ಕನ್ನಡದ ಯುವತಿ ಭಾರತ ತಂಡದ ಕೋಚ್ ಆಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಸಿಎಂ‌ ಹೇಳಿದರು.

ಅಂಕಿತ ಅವರು ಮಡಿಕೇರಿ ಮೂಲದವರು. ಇವರ ತರಬೇತಿಯಲ್ಲಿ ಪಳಗಿದ ದೇಶದ ಮಹಿಳಾ ಹಾಕಿ ತಂಡ ಬಲಿಷ್ಠವಾಗಿದೆ. ಕಳೆದ ಎರಡು ವರ್ಷಗಳಿಂದ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಅಂಕಿತಾ ತರಬೇತಿ ನೀಡುತ್ತಿದ್ದಾರೆ. ಹಲವಾರು ವರ್ಷಗಳ ಬಳಿಕ ಓಲಂಪಿಕ್ ನಲ್ಲಿ ಮಹಿಳಾ ತಂಡ ಸೆಮಿಫೈನಲ್ ಹಂತಕ್ಕೆ ತಲುಪಿ ಅಭೂತಪೂರ್ವ ಅಮೋಘ ಸಾಧನೆ ಮಾಡಿದೆ. ಒಟ್ಟು ಮೂರು ಜನ ಕೋಚ್ ಗಳ ಪೈಕಿ ಅಂಕಿತಾ ಒಬ್ಬರು. ಅವರು ಕನ್ನಡಿಗರು ಅಂಬುದು ಶ್ಲಾಘನೀಯ ಮತ್ತು ಹೆಮ್ಮೆ ಎಂದು ಸಿಎಂ‌ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಭಾರತದ ವನಿತೆಯರ ತಂಡವು ಇದೇ ಮೊದಲ ಬಾರಿಗೆ ಹಾಕಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದ ಸಾಧನೆ ಮಾಡಿತ್ತು. ಈ ಮೊದಲು ಮಾಸ್ಕೋದಲ್ಲಿ 1980ರಲ್ಲಿ ನಡೆದಿದ್ದ ಒಲಿಂಪಿಕ್ಸ್‌ನಲ್ಲಿ ಭಾರತ ತಂಡ ನಾಲ್ಕನೇ ಸ್ಥಾ ಪಡೆದಿತ್ತು. ಆದರೆ ಆ ಒಲಂಪಿಕ್ಸ್ ಗೆ ಹಲವು ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದವು‌. ಹಾಗಾಗಿ ಕೇವಲ ಆರು ತಂಡಗಳು ಹಾಕಿ ಪಂದ್ಯದಲ್ಲಿ ಭಾಗವಹಿಸಿದ್ದವು.

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್