AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

P.R. Sreejesh: ಭಾರತದ ಹಾಕಿ ತಾರೆ ಶ್ರೀಜೇಶ್‌ಗೆ ಭರ್ಜರಿ ಬಹುಮಾನ ಘೋಷಿಸಿದ ಕೇರಳ ಸರ್ಕಾರ

Indian Hockey Team: ಟೋಕಿಯೊ 2020 ಒಲಿಂಪಿಕ್ಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಭಾರತ ಹಾಕಿ ತಂಡವು ಸೆಮಿಫೈನಲ್ ಪ್ರವೇಶಿಸಿತ್ತು. ಇದಾಗ್ಯೂ ಅಂತಿಮ ಸುತ್ತಿಗೇರುವಲ್ಲಿ ಎಡವಿತ್ತು.

P.R. Sreejesh: ಭಾರತದ ಹಾಕಿ ತಾರೆ ಶ್ರೀಜೇಶ್‌ಗೆ ಭರ್ಜರಿ ಬಹುಮಾನ ಘೋಷಿಸಿದ ಕೇರಳ ಸರ್ಕಾರ
P R Sreejesh
TV9 Web
| Edited By: |

Updated on: Aug 12, 2021 | 2:35 PM

Share

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ತಂಡದ ಗೋಲ್ ಕೀಪರ್‌ ಪಿ.ಆರ್‌‌ ಶ್ರೀಜೇಶ್‌ (P.R. Sreejesh) ಅವರಿಗೆ 2 ಕೋಟಿ ರೂ. ನೀಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಘೋಷಿಸಿದ್ದಾರೆ. ಅಷ್ಟೇ ಅಲ್ಲದೆ, ಅವರಿಗೆ ಕ್ರೀಡಾ ಶಿಕ್ಷಣ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಬಡ್ತಿ ನೀಡುವುದಾಗಿ ತಿಳಿಸಿದ್ದಾರೆ. ಈ ಹಿಂದೆ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದ ಆಟಗಾರನಿಗೆ ಕೇರಳ ಸರ್ಕಾರ ಯಾವುದೇ ಪ್ರೋತ್ಸಾಹ ಧನ ಘೋಷಿಸಿಲ್ಲ ಎಂದು ಟೀಕೆಗಳು ವ್ಯಕ್ತವಾಗಿತ್ತು. ಇದೀಗ ಶ್ರೀಜೇಶ್ (Indian Hockey Team Goalkeeper) ಅವರಿಗೆ ತಮ್ಮ ಹುದ್ದೆಯಲ್ಲಿ ಬಡ್ತಿಯೊಂದಿಗೆ ಬಹುಮಾನ ಮೊತ್ತ ಘೋಷಿಸಲಾಗಿದೆ.

ಈ ಹಿಂದೆ ಪಿ.ಆರ್​ ಶ್ರೀಜೇಶ್ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಉಪನಿರ್ದೇಶಕ (ಕ್ರೀಡೆ) ಹುದ್ದೆಯನ್ನು ಹೊಂದಿದ್ದರು. ಇದೀಗ ಅವರನ್ನು ಜಂಟಿ ನಿರ್ದೇಶಕರಾಗಿ (ಕ್ರೀಡೆ) ಬಡ್ತಿ ನೀಡಲಾಗುವುದು ಎಂದು ಕೇರಳ ರಾಜ್ಯ ಸರ್ಕಾರ ಪ್ರಕಟಿಸಿದೆ. ಇದರ ಜೊತೆಗೆ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾಗವಹಿಸಿದ ಕೇರಳದ 8 ಕ್ರೀಡಾಪಟುಗಳಿಗೂ ಪ್ರೋತ್ಸಾಹ ಧನವಾಗಿ ತಲಾ 5 ಲಕ್ಷ ನೀಡುವುದಾಗಿ ಕೇರಳದ ಕ್ರೀಡಾ ಸಚಿವ ವಿ ಅಬ್ದುರಹಿಮಾನ್ ತಿಳಿಸಿದ್ದಾರೆ.

ಇದಕ್ಕೂ ಮುನ್ನ 41 ವರ್ಷಗಳ ಬಳಿಕ ಭಾರತ ಕಂಚಿನ ಪದಕ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದ ಗೋಲಿ ಶ್ರೀಜೇಶ್ ಅವರಿಗೆ ದುಬೈ ಮೂಲದ ಉದ್ಯಮಿ ವಿಪಿಎಸ್ ಹೆಲ್ತ್‌ಕೇರ್ ಮುಖ್ಯಸ್ಥ, ವ್ಯವಸ್ಥಾಪಕ ನಿರ್ದೇಶಕ ಡಾ. ಶಂಸೀರ್ ವಯಲಿಲ್ 1 ಕೋಟಿ ರೂ. ನಗದು ಬಹುಮಾನ ಘೋಷಿಸಿದ್ದರು. ಇದೀಗ ಕೇರಳ ಸರ್ಕಾರ ಕೂಡ ರಾಜ್ಯದ ಆಟಗಾರರಿಗೆ ಬಹುಮಾನ ಮೊತ್ತವನ್ನು ಘೋಷಿಸಿದೆ.

ಟೋಕಿಯೊ 2020 ಒಲಿಂಪಿಕ್ಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಭಾರತ ಹಾಕಿ ತಂಡವು ಸೆಮಿಫೈನಲ್ ಪ್ರವೇಶಿಸಿತ್ತು. ಇದಾಗ್ಯೂ ಅಂತಿಮ ಸುತ್ತಿಗೇರುವಲ್ಲಿ ಎಡವಿತ್ತು. ಅದಾಗ್ಯೂ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಜರ್ಮನಿಯನ್ನು 5-4 ಅಂತರದಿಂದ ಸೋಲಿಸಿ ಬರೋಬ್ಬರಿ 41 ವರ್ಷಗಳ ಬಳಿಕ ಭಾರತ ಹಾಕಿ ತಂಡ ಕಂಚಿನ ಪದಕಕ್ಕೆ ಕೊರೊಳ್ಳೊಡ್ಡಿತು.

ಇದನ್ನೂ ಓದಿ: India vs England 2nd Test: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಸಾಧ್ಯತೆ: ಪ್ಲೇಯಿಂಗ್ 11 ಹೀಗಿರಲಿದೆ

ಇದನ್ನೂ ಓದಿ: India vs England: 2ನೇ ಟೆಸ್ಟ್ ವೇಳೆ ಮಳೆಯಾಗಲಿದೆಯಾ? ಇಲ್ಲಿದೆ 5 ದಿನಗಳ ಸಂಪೂರ್ಣ ಹವಾಮಾನ ವರದಿ

ಇದನ್ನೂ ಓದಿ: Toyota Cars: ಜೋಳ ನೀಡಿ ಟೊಯೋಟಾ ಕಾರು ಖರೀದಿಸುವ ಅವಕಾಶ

(Kerala Government Announces Rs 2 Crore Cash Reward Men’s Hockey Team Goalkeeper P.R. Sreejesh)

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ