AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day: ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾದ ಭಾರತದ ಒಲಿಂಪಿಕ್ ವೀರರು

ಪ್ರಧಾನಿ ಮೋದಿ ತಮ್ಮ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಒಲಿಂಪಿಕ್ಸ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಎಲ್ಲಾ ಕ್ರೀಡಾಳುಗಳಿಗೆ ಅಭಿನಂದನೆ ಸಲ್ಲಿಸಿದರು.

Independence Day: ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾದ ಭಾರತದ ಒಲಿಂಪಿಕ್ ವೀರರು
Independence Day
TV9 Web
| Updated By: Vinay Bhat|

Updated on:Aug 15, 2021 | 12:47 PM

Share

ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪುಕೋಟೆಯಲ್ಲಿ ಇಂದು 75ನೇ ಸ್ವಾತಂತ್ರ್ಯೋತ್ಸವದ (Independence Day) ಅಂಗವಾಗಿ ಪ್ರಧಾನಿ ಮೋದಿ (Narendra Modi) ಧ್ವಜಾರೋಹಣ ಕಾರ್ಯಕ್ರಮದಲ್ಲಿ ಈ ಬಾರಿಯ ಟೋಕಿಯೋ ಒಲಿಂಪಿಕ್ಸ್​ನಲ್ಲಿ (Tokyo Olympics) ಭಾರತಕ್ಕೆ ಪದಕ ತಂದುಕೊಟ್ಟ ವೀರರು ಭಾಗಿಯಾದರು. ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧೂ, ಜ್ವಾವೆಲಿನ್ ಥ್ರೋ ಸ್ಟಾರ್, ಚಿನ್ನದ ಹುಡುಗ ನೀರಜ್ ಚೋಪ್ರಾ, ವೈಟ್ ಲಿಫ್ಟರ್ ಮೀರಾಬಾಯಿ ಚಾನು, ಕುಸ್ತಿಪಟು ರವಿಕುಮಾರ್ ದಹಿಯಾ, ಬಜರಂಗ್ ಪೂನಿಯಾ ಸೇರಿದಂತೆ ಹಾಕಿ ಆಟಗಾರರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪ್ರಧಾನಿ ಮೋದಿ ತಮ್ಮ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಒಲಿಂಪಿಕ್ಸ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಎಲ್ಲಾ ಕ್ರೀಡಾಳುಗಳಿಗೆ ಅಭಿನಂದನೆ ಸಲ್ಲಿಸಿದರು. ಒಲಿಂಪಿಕ್ಸ್​ನಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ್ದ ಕ್ರೀಡಾಪಟುಗಳು ಇವತ್ತು ಇಲ್ಲಿದ್ದಾರೆ. ಅವರು ನಮ್ಮ ಹೃದಯ ಗೆದ್ದಿರುವುದಷ್ಟೇ ಅಲ್ಲ ಭವಿಷ್ಯದ ತಲೆಮಾರುಗಳಿಗೆ ಪ್ರೇರಣೆಯಾಗಿದ್ಧಾರೆ ಎಂದು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದರು.

ಇನ್ನೂ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿಯಾಗಿ ಶನಿವಾರ ಮಾತನಾಡಿದ ರಾಷ್ಟ್ರಪತಿ ರಾಮ್​ನಾಥ್​ ಕೋವಿಂದ್​ ಅವರು, ಇತ್ತೀಚೆಗೆ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತದ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ಮಾಡಿದ್ದಾರೆ. ಭಾರತದ 121 ವರ್ಷಗಳ ಒಲಿಂಪಿಕ್​ ಇತಿಹಾಸದಲ್ಲಿ ಅತಿ ಹೆಚ್ಚು ಪದಕಗಳನ್ನು ಗೆದ್ದಿದ್ದಾರೆ. ಹೆಣ್ಣುಮಕ್ಕಳು ಮಹತ್ವದ ಸೆಣೆಸಾಟ ತೋರಿಸಿದ್ದಾರೆ. ತಮ್ಮ ಹೆಣ್ಣುಮಕ್ಕಳಿಗೂ ಹೆಚ್ಚಿನ ಅವಕಾಶಗಳನ್ನು ಒದಗಿಸಬೇಕು” ಎಂದರು.

ಭಾರತಕ್ಕೆ ಈ ಒಲಿಂಪಿಕ್ಸ್ ತುಂಬಾನೆ ವಿಶೇಷವಾಗಿತ್ತು. ಯಾಕಂದ್ರೆ ಒಲಿಂಪಿಕ್ ವೊಂದರಲ್ಲಿ ಒಟ್ಟು 7 ಪದಕಗಳನ್ನು ಜಯಿಸಿ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತವು ಸಾರ್ವಕಾಲಿಕ ಶ್ರೇಷ್ಠ ಸಾಧನೆ ಮಾಡಿದೆ. ಜಾವಲಿನ್​ ಥ್ರೋನಲ್ಲಿ ಭಾರತದ ನೀರಜ್​​ ಚೋಪ್ರಾ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದರು. 120 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದ ಹೆಗ್ಗಳಿಕೆಗೆ ನೀರಜ್​ ಪಾತ್ರರಾಗಿದ್ದಾರೆ. ವೇಯ್ಟ್​​ ಲಿಫ್ಟಿಂಗ್​ ವಿಭಾಗದಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದರು.

ಅಂತೆಯೆ ಪುರುಷರ ಕುಸ್ತಿ ವಿಭಾಗದಲ್ಲಿ ರವಿಕುಮಾರ್​ ದಹಿಯಾ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. 65 ಕೆಜಿ ಪುರುಷರ ಕುಸ್ತಿ ವಿಭಾಗದಲ್ಲಿ ಭಜರಂಗ್​ ಪೂನಿಯಾ ಕಂಚಿನ ಪದಕಕ್ಕೆ ಕೊರಳೊಡ್ಡಿದರು. ದಶಕಗಳ ಬಳಿಕ ಒಲಿಂಪಿಕ್ ಟೂರ್ನಿಯಲ್ಲಿ ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು. ಭಾರತದ ಮಹಿಳಾ ಬಾಕ್ಸರ್ ಲವ್ಲಿನಾ ಬೊರ್ಗೊಹೇನ್ ಮಹಿಳೆಯರ ವೆಲ್ಟರ್ ವೇಟ್ ಕಂಚಿನ ಪದಕ ಪಡೆದರು. ಬ್ಯಾಡ್ಮಿಂಟನ್​​ ಮಹಿಳಾ ಸಿಂಗಲ್​ ವಿಭಾಗದಲ್ಲಿ ಪಿವಿ ಸಿಂಧೂ ಕಂಚಿನ ಪದಕಕ್ಕೆ ಮುತ್ತಿಟ್ಟರು.

ಕೆಂಪುಕೋಟೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಇಲ್ಲಿವೆ ಸುಂದರ ಕ್ಷಣದ ಫೋಟೋಗಳು

ಸ್ವಸಹಾಯ ಸಂಘಗಳಿಗೆ ಇ-ಕಾಮರ್ಸ್ ಮಾರುಕಟ್ಟೆ ಸೌಲಭ್ಯ, ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ: ಪ್ರಧಾನಿ ಮೋದಿ ಘೋಷಣೆ

(Neeraj Chopra Sindhu Mirabai Chanu highlight Indias Olympic contingent at 75th Independence Day celebrations)

Published On - 12:46 pm, Sun, 15 August 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ