AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sushil Kumar: ಕುಸ್ತಿ ಫೈನಲ್‌ನಲ್ಲಿ ರವಿ ದಹಿಯಾಗೆ ಸೋಲು; ತಿಹಾರ್ ಜೈಲಿನಲ್ಲಿ ಭಾವುಕರಾದ ಕುಸ್ತಿಪಟು ಸುಶೀಲ್ ಕುಮಾರ್

Sushil Kumar: ಒಲಿಂಪಿಕ್ ಕ್ರೀಡಾಕೂಟದಲ್ಲಿ ಹಾಲಿ ವಿಶ್ವ ಚಾಂಪಿಯನ್ ಜಾವೂರ್ ಉಗೆವ್ ವಿರುದ್ಧ ರವಿ ದಹಿಯಾ ಪುರುಷರ ಫ್ರೀಸ್ಟೈಲ್ 57 ಕೆಜಿ ವಿಭಾಗದಲ್ಲಿ ಪ್ರಶಸ್ತಿಯನ್ನು 4-7ರಿಂದ ಕಳೆದುಕೊಳ್ಳುವುದನ್ನು ನೋಡಿ ಭಾವುಕರಾಗಿದ್ದಾರೆ.

Sushil Kumar: ಕುಸ್ತಿ ಫೈನಲ್‌ನಲ್ಲಿ ರವಿ ದಹಿಯಾಗೆ ಸೋಲು; ತಿಹಾರ್ ಜೈಲಿನಲ್ಲಿ ಭಾವುಕರಾದ ಕುಸ್ತಿಪಟು ಸುಶೀಲ್ ಕುಮಾರ್
ಕುಸ್ತಿಪಟು ಸುಶೀಲ್ ಕುಮಾರ್
Follow us
TV9 Web
| Updated By: ಪೃಥ್ವಿಶಂಕರ

Updated on: Aug 05, 2021 | 7:22 PM

ಪ್ರಸ್ತುತ ಕೊಲೆ ಪ್ರಕರಣವೊಂದರಲ್ಲಿ ದೆಹಲಿಯ ತಿಹಾರ್ ಜೈಲಿನಲ್ಲಿರುವ ಕುಸ್ತಿಪಟು ಸುಶೀಲ್ ಕುಮಾರ್, ಒಲಿಂಪಿಕ್ ಕ್ರೀಡಾಕೂಟದಲ್ಲಿ ಹಾಲಿ ವಿಶ್ವ ಚಾಂಪಿಯನ್ ಜಾವೂರ್ ಉಗೆವ್ ವಿರುದ್ಧ ರವಿ ದಹಿಯಾ ಪುರುಷರ ಫ್ರೀಸ್ಟೈಲ್ 57 ಕೆಜಿ ವಿಭಾಗದಲ್ಲಿ ಪ್ರಶಸ್ತಿಯನ್ನು 4-7ರಿಂದ ಕಳೆದುಕೊಳ್ಳುವುದನ್ನು ನೋಡಿ ಭಾವುಕರಾಗಿದ್ದಾರೆ. ಆದಾಗ್ಯೂ, ದಹಿಯಾ ಬೆಳ್ಳಿ ಗೆದ್ದು ದಾಖಲೆಯ ಪುಸ್ತಕಗಳಲ್ಲಿ ಅವರ ಹೆಸರನ್ನು ಕೆತ್ತಿಸಿದರು. ಜೊತೆಗೆ ಒಲಿಂಪಿಕ್ ಪದಕ ಗೆದ್ದ ಐದನೇ ಭಾರತೀಯ ಕುಸ್ತಿಪಟು ಎನಿಸಿಕೊಂಡರು.

ಸುಶೀಲ್ ಕುಮಾರ್ ಒಲಿಂಪಿಕ್ಸ್‌ನಲ್ಲಿ ಫೈನಲ್ ತಲುಪಿದ ಭಾರತದ ಇನ್ನೊಬ್ಬ ಕುಸ್ತಿಪಟು. ಆದರೆ ಈಗ ಕೊಲೆ ಆರೋಪ ಹೊತ್ತು ತಿಹಾರ್​ ಜೈಲು ಸೇರಿದ್ದಾರೆ. ಸುಶೀಲ್ 2012 ರ ಲಂಡನ್ ಗೇಮ್ಸ್‌ನಲ್ಲಿ ಬೆಳ್ಳಿ ಗೆದ್ದಿದ್ದರು. ಅಲ್ಲದೇ 2012 ರ ಲಂಡನ್ ಗೇಮ್ಸ್‌ನಲ್ಲಿ ಯೋಗೇಶ್ವರ್ ದತ್ ಕೂಡ ಕಂಚು ಗೆದ್ದಿದ್ದರು. ಅದಕ್ಕೂ ಮುನ್ನ ಅಂದರೆ 2008 ರ ಬೀಜಿಂಗ್ ಕ್ರೀಡಾಕೂಟದಲ್ಲಿ ಸುಶೀಲ್ ಕಂಚು ಗೆದ್ದಿದ್ದರು.

23 ವರ್ಷದ ದಹಿಯಾ ಭಾರತದ ಕಿರಿಯ ಒಲಿಂಪಿಕ್ ಚಾಂಪಿಯನ್ ಆಗುವ ನಿರೀಕ್ಷೆಯಿತ್ತು ಆದರೆ ಅದು ಸಫಲವಾಗಲಿಲ್ಲ. ತಿಹಾರ್ ಜೈಲಿನ ಮೂಲಗಳ ಪ್ರಕಾರ, ಸುಶೀಲ್ ಕುಮಾರ್ ಮಧ್ಯಾಹ್ನದಿಂದ ದೂರದರ್ಶನ ಸೆಟ್ ಬಳಿ ಕುಳಿತು, ನಿರ್ಣಾಯಕ ಪಂದ್ಯವನ್ನು ನೋಡಲು ಕಾಯುತ್ತಿದ್ದರು. ಪಂದ್ಯದ ರೋಚಕತೆಯನ್ನು ಕಣ್ತುಂಬಿಕೊಳ್ಳುತ್ತಿದ ಸುಶೀಲ್, ರವಿ ದಹಿಯಾ ಫೈನಲ್​ನಲ್ಲಿ ಸೋತದನ್ನು ಕಂಡು ಭಾವುಕರಾದರು.

ಜುಲೈ 2 ರಂದು, ಜೈಲಿನ ಹೊರಗೆ ಕುಸ್ತಿ ಪಂದ್ಯಗಳು ಮತ್ತು ಇತರ ಘಟನೆಗಳ ಬಗ್ಗೆ ಅಪ್‌ಡೇಟ್ ಆಗಲು ತನಗೆ ದೂರದರ್ಶನವನ್ನು ಒದಗಿಸುವಂತೆ ಸುಶೀಲ್ ಜೈಲು ಅಧಿಕಾರಿಗಳನ್ನು ಒತ್ತಾಯಿಸಿದ್ದರು. ವಿನಂತಿಯನ್ನು ಪುರಸ್ಕರಿಸಿದ ಜೈಲು ಅಧಿಕಾರಿಗಳು ದೂರದರ್ಶನದ ವ್ಯವಸ್ಥೆ ಮಾಡಿಕೊಟ್ಟಿದ್ದರು.

ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!