AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics 2020: ರೋಯಿಂಗ್​ನಲ್ಲಿ ಸೆಮಿ ಫೈನಲ್​ಗೆ ಲಗ್ಗೆಯಿಟ್ಟ ಅರ್ಜುನ್-ಅರವಿಂದ್: ಮಹಿಳಾ ಶೂಟಿಂಗ್​ನಲ್ಲಿ ಹಿನ್ನಡೆ

ಭಾರತದ ಮಹಿಳಾ ಶೂಟರ್‌ಗಳು ಭಾರೀ ನಿರಾಸೆ ಮೂಡಿಸಿದ್ದಾರೆ. ಮನು ಭಾಕೆರ್ ಮತ್ತು ಯಶಸ್ವಿನಿ ಸಿಂಗ್ ದೇಸ್ವಾಲ್ ಇಂದು ನಡೆದ ಮಹಿಳೆಯರ 10 ಮೀ. ಪಿಸ್ತೂಲ್ ಅರ್ಹತಾ ಸುತ್ತಿನಲ್ಲಿ ಇಬ್ಬರೂ ಸಹ ಫೈನಲ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳುವಲ್ಲಿ ವಿಫಲರಾದರು.

Tokyo Olympics 2020: ರೋಯಿಂಗ್​ನಲ್ಲಿ ಸೆಮಿ ಫೈನಲ್​ಗೆ ಲಗ್ಗೆಯಿಟ್ಟ ಅರ್ಜುನ್-ಅರವಿಂದ್: ಮಹಿಳಾ ಶೂಟಿಂಗ್​ನಲ್ಲಿ ಹಿನ್ನಡೆ
Arjun Lal Jat and Arvind Singh
TV9 Web
| Edited By: |

Updated on:Jul 25, 2021 | 7:44 AM

Share

ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಎರಡನೇ ದಿನ ಭಾರತೀಯರು ಉತ್ತಮ ಆರಂಭ ಪಡೆದುಕೊಂಡಿದ್ದಾರೆ. ಪುರುಷರ ರೋಯಿಂಗ್​ನಲ್ಲಿ ಭಾರತದ ಅರ್ಜುನ್ ಜತ್ ಮತ್ತು ಅರವಿಂದ್ ಸಿಂಗ್ ಸೆಮಿ ಫೈನಲ್​ಗೆ ಪ್ರವೇಶ ಪಡೆದಿದ್ದಾರೆ.

ಇತ್ತ ಜಿಮ್ನಾಸ್ಟಿಕ್​ನಲ್ಲಿ ಪ್ರಣಿತಿ ನಾಯಕ್ 10.633 ಅಂಕ ಸಂಪಾದಿಸಿದ್ದು ಟಾಪ್ 8 ನಲ್ಲಿ ಕಾಣಿಸುವ ಸಾಧ್ಯತೆ ಇದೆ. ಇದರ ಜೊತೆಗೆ ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ತನ್ನ ಅಭಿಯಾನ ಆರಂಭಿಸಿದ್ದು, ಇಸ್ರೆಲ್​ನ ಪೊಲಿಕರ್ವೊಪ ವಿರುದ್ಧ ಸೆಣೆಸಾಡುತ್ತಿದ್ದಾರೆ.

ಆದರೆ, ಭಾರತದ ಮಹಿಳಾ ಶೂಟರ್‌ಗಳು ಭಾರೀ ನಿರಾಸೆ ಮೂಡಿಸಿದ್ದಾರೆ. ಮನು ಭಾಕೆರ್ ಮತ್ತು ಯಶಸ್ವಿನಿ ಸಿಂಗ್ ದೇಸ್ವಾಲ್ ಇಂದು ನಡೆದ ಮಹಿಳೆಯರ 10 ಮೀ. ಪಿಸ್ತೂಲ್ ಅರ್ಹತಾ ಸುತ್ತಿನಲ್ಲಿ ಇಬ್ಬರೂ ಸಹ ಫೈನಲ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳುವಲ್ಲಿ ವಿಫಲರಾದರು.

ಅರ್ಹತಾ ಸುತ್ತಿನಲ್ಲಿ ಮನು ಭಾಕೆರ್ 12ನೇ ಸ್ಥಾನ ಪಡೆದುಕೊಂಡರೆ ಯಶಸ್ವಿನಿ ಸಿಂಗ್ ದೆಸ್ವಾಲ್ 13ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಅರ್ಹತಾ ಸುತ್ತಿನಲ್ಲಿ ಟಾಪ್ 8 ಸ್ಥಾನ ಪಡೆದ ಸ್ಪರ್ಧಿಗಳನ್ನು ಫೈನಲ್ ಸುತ್ತಿಗೆ ಆಯ್ಕೆ ಮಾಡಲಾಗುತ್ತದೆ. ಹೀಗಾಗಿ ಅರ್ಹತಾ ಸುತ್ತಿನಲ್ಲಿ ಭಾರತೀಯ ವನಿತೆಯರಾದ ಯಶಸ್ವಿನಿ ಮತ್ತು ಮನೋ ವಿಫಲರಾಗಿದ್ದಾರೆ.

ಮನು ಭಾಕೆರ್ 575 ಪಾಯಿಂಟ್ಸ್ ಗಳಿಸಿ ಅರ್ಹತಾ ಸುತ್ತಿನಲ್ಲಿ 12ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರೆ, ಯಶಸ್ವಿನಿ ಸಿಂಗ್ ದೆಸ್ವಾಲ್ 574 ಪಾಯಿಂಟ್ಸ್ ಗಳಿಸಿ 13ನೇ ಸ್ಥಾನ ಪಡೆದುಕೊಂಡರು.

IND vs SL: ಇಂದು ಟಿ-20 ಕ್ರಿಕೆಟ್​ಗೆ ಪದಾರ್ಪಣೆ ಮಾಡಲಿದ್ದಾರೆ ಈ ಸ್ಫೋಟಕ ಬ್ಯಾಟ್ಸ್​ಮನ್​?

Tokyo Olympics 2020: ಕ್ರೀಡಾಕೂಟದ ಎರಡನೇ ದಿನ ಭಾರತದ ಕೆಲ ಪ್ರಮುಖ ಸ್ಪರ್ಧಿಗಳು ಪದಕದ ಬೇಟೆ ಆರಂಭಿಸಲಿದ್ದಾರೆ

(Tokyo Olympics 2020 Indian team of Arjun Lal Jat and Arvind Singh qualified for the Mens Lightweight Double Sculls semifinal)

Published On - 7:43 am, Sun, 25 July 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್