AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepak Punia: ಕುಸ್ತಿಪಟು ದೀಪಕ್ ಪೂನಿಯಾ ಫೈನಲ್ ಕನಸು ಭಗ್ನ: ಅಮೆರಿಕದ ಕುಸ್ತಿಪಟು ವಿರುದ್ಧ ಸೋಲು

Tokyo Olympics:

Deepak Punia: ಕುಸ್ತಿಪಟು ದೀಪಕ್ ಪೂನಿಯಾ ಫೈನಲ್ ಕನಸು ಭಗ್ನ: ಅಮೆರಿಕದ ಕುಸ್ತಿಪಟು ವಿರುದ್ಧ ಸೋಲು
ದೀಪಕ್ ಪೂನಿಯಾ
TV9 Web
| Edited By: |

Updated on:Aug 04, 2021 | 4:27 PM

Share

ಭಾರತದ ರವಿ ದಹಿಯಾ ಟೋಕಿಯೊ ಒಲಿಂಪಿಕ್ಸ್ ನ ಕುಸ್ತಿ ವಿಭಾಗದಲ್ಲಿ ಪುರುಷರ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕದ ಭರವಸೆಯನ್ನು ಮೂಡಿಸಿದ್ದಾರೆ. ಮತ್ತೊಂದೆಡೆ, ಭಾರತದ ದೀಪಕ್ ಪೂನಿಯಾ ಪುರುಷರ 86 ಕೆಜಿ ವಿಭಾಗದಲ್ಲಿ ಫೈನಲ್​ಗೆ ತಲುಪಲು ಸಾಧ್ಯವಾಗಲಿಲ್ಲ. ಅವರು ಕೆಲವೇ ನಿಮಿಷಗಳಲ್ಲಿ ಅಮೆರಿಕದ ಕುಸ್ತಿಪಟುವಿನ ವಿರುದ್ಧದ ಪಂದ್ಯದಲ್ಲಿ ಸೋಲೊಪ್ಪಿಕೊಂಡರು. ಅಮೆರಿಕದ ಕುಸ್ತಿಪಟು ಭಾರತದ ದೀಪಕ್ ಪೂನಿಯಾ ವಿರುದ್ಧ ತಾಂತ್ರಿಕ ಶ್ರೇಷ್ಠತೆಯ ಆಧಾರದ ಮೇಲೆ 10-0 ಅಂತರದಿಂದ ಗೆಲುವು ಸಾಧಿಸಿದರು.

ತನ್ನ ಮೊದಲ ಒಲಿಂಪಿಕ್ಸ್ ಆಡುತ್ತಿರುವ ಪೂನಿಯಾ 86 ಕೆಜಿ ವಿಭಾಗದ ಸೆಮಿಫೈನಲ್‌ಗೆ ತಲುಪಿದ್ದರು. ಡಬಲ್ ಜೂನಿಯರ್ ವಿಶ್ವ ಚಾಂಪಿಯನ್ 2018 ರ ಹಿರಿಯ ವಿಶ್ವ ಚಾಂಪಿಯನ್ ಡೇವಿಡ್ ಟೇಲರ್ ವಿರುದ್ಧ ಪೂನಿಯಾ ಹೋರಾಡಬೇಕಿತ್ತು. ಟೇಲರ್ ಅಂತರಾಷ್ಟ್ರೀಯ ಸರ್ಕ್ಯೂಟ್‌ನಲ್ಲಿ ಅತ್ಯಂತ ನಿಪುಣ ಕುಸ್ತಿಪಟುಗಳಲ್ಲಿ ಒಬ್ಬರು. ಆದರೆ ಮಕುಹರಿ ಮೆಸ್ಸೆ ಹಾಲ್ ಎ ನಲ್ಲಿ ಬುಧವಾರ ನಡೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಅಮೆರಿಕದ ಡೇವಿಡ್ ಟೇಲರ್ ವಿರುದ್ಧ ಪುರುಷರ ಫ್ರೀಸ್ಟೈಲ್ 86 ಕೆಜಿ ವಿಭಾಗದ ಸೆಮಿಫೈನಲ್‌ನಲ್ಲಿ ಭಾರತದ ಗ್ರ್ಯಾಪ್ಲರ್ ದೀಪಕ್ ಪುನಿಯಾ 10-0 ಅಂತರದಿಂದ ಸೋಲು ಅನುಭವಿಸಿದರು.

ಟೇಲರ್ ಈಗ ಗುರುವಾರ ಬೆಳ್ಳಿ ಅಥವಾ ಚಿನ್ನಕ್ಕಾಗಿ ಸ್ಪರ್ಧಿಸಲಿದ್ದಾರೆ. ಬುಧವಾರ ಮುಂಜಾನೆ, ಭಾರತದ ಗ್ರ್ಯಾಪ್ಲರ್ ರವಿ ಕುಮಾರ್ ದಹಿಯಾ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಫ್ರೀಸ್ಟೈಲ್ 57 ಕೆಜಿ ವಿಭಾಗದ ಫೈನಲ್‌ಗೆ ಪ್ರವೇಶಿಸಿದ್ದಾರೆ. ದಹಿಯಾ ಈಗ ಗುರುವಾರ ಫೈನಲ್‌ನಲ್ಲಿ ಸ್ಪರ್ಧಿಸಲಿದ್ದಾರೆ. 2012 ರಲ್ಲಿ ಸುಶೀಲ್ ನಂತರ ಫೈನಲ್ ಪ್ರವೇಶಿಸಿದ ಮೊದಲ ಸ್ಪರ್ಧಿಯಾಗಿದ್ದಾರೆ. ಮೊದಲ ಅವಧಿಯಲ್ಲಿ ರವಿ ದಹಿಯಾ 2-1 ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾದರು ಮತ್ತು ಎರಡನೇ ಅವಧಿಯಲ್ಲಿ ಒತ್ತಡವು ಸಂಪೂರ್ಣವಾಗಿ ಸನಾಯೇವ್ ಮೇಲೆ ಇತ್ತು. ಅವರು ಪುನರಾಗಮನ ಮಾಡಿದರು, ಆದರೆ ದಹಿಯಾ ವಿರುದ್ಧ ಅವರಿಗೆ ಗೆಲ್ಲಲಾಗಲಿಲ್ಲ.

Published On - 4:11 pm, Wed, 4 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!