AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಸ್ಪರ್ಧಿಗೆ ಕಪಾಳ‌ಮೋಕ್ಷ ಮಾಡಿದ ಕೋಚ್: ವಿಡಿಯೋ ವೈರಲ್

Tokyo Olympics 2020: ಸದ್ಯ ಜರ್ಮನಿ ಕೋಚ್​ನ ಕಪಾಳ ಮೋಕ್ಷದ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಕೆಲವರು ತರಬೇತುದಾರನ ನಡೆಯನ್ನು ಸಮರ್ಥಿಸಿದ್ದಾರೆ. ಇನ್ನು ಕೆಲವರು ಈ ರೀತಿಯ ವರ್ತನೆಯ ಸ್ಪರ್ಧಿಗಳ ಮೇಲೆ ಮತ್ತಷ್ಟು ಒತ್ತಡವನ್ನು ಉಂಟು ಮಾಡುತ್ತದೆ ಎಂದಿದ್ದಾರೆ.

Tokyo Olympics: ಸ್ಪರ್ಧಿಗೆ ಕಪಾಳ‌ಮೋಕ್ಷ ಮಾಡಿದ ಕೋಚ್: ವಿಡಿಯೋ ವೈರಲ್
coach slaps German athlete
TV9 Web
| Edited By: |

Updated on: Jul 28, 2021 | 10:44 PM

Share

ಹಲವು ಕೌತುಕಗಳಿಗೆ ಸಾಕ್ಷಿಯಾಗಿರುವ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಮಂಗಳವಾರ ಅನಿರೀಕ್ಷಿತ ಘಟನೆಯೊಂದು ನಡೆಯಿತು. ಸಾಮಾನ್ಯವಾಗಿ ಕೋಚ್ ಪಂದ್ಯದ ಆರಂಭಕ್ಕೂ ಮುನ್ನ ತನ್ನ ಸ್ಪರ್ಧಿಗೆ ಬೆನ್ನು ತಟ್ಟಿ ಪ್ರೋತ್ಸಾಹ ನೀಡುತ್ತಾರೆ. ಆದರೆ ಜರ್ಮನಿಯ ಕೋಚ್ ಸ್ಪರ್ಧಿಗೆ ಕಪಾಳಕ್ಕೆ ಬಾರಿಸುವುದನ್ನು ನೋಡಿ ಎಲ್ಲರೂ ದಂಗಾಗಿದ್ದರು.

ಜುಡೋ ಸ್ಪರ್ಧಿ ಮಾರ್ಟಿನಾ ಟ್ರಾಜ್ಡೋಸ್ ಕಣಕ್ಕಿಳಿಯುವ ಮುನ್ನ ಕೋಚ್ ಕಪಾಳ ಮೋಕ್ಷ ಮಾಡಿದ್ದರು. ಸ್ಪರ್ಧಿಯ ಹಿಂದೆಯೇ ಬಂದ ಕೋಚ್ ಆಕೆಯ ಬಟ್ಟೆಯ ಕಾಲರ್​ ಹಿಡಿದು ಅಲುಗಾಡಿಸಿ ಕೆನ್ನೆಗೆ ಬಾರಿಸಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಬಗ್ಗೆ ಕೆಲವರಿಂದ ಅಪಸ್ವರಗಳು ಕೇಳಿ ಬರುತ್ತಿದ್ದಂತೆ, ಕಪಾಳಮೋಕ್ಷಕ್ಕೊಳಗಾದ ಟ್ರಾಜ್ಡೋಸ್ ತನ್ನ ಕೋಚ್ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಪಂದ್ಯದ ವೇಳೆ ಎಚ್ಚರವಾಗಿರಲು, ನನ್ನನ್ನು ರೊಚ್ಚಿಗೆಬ್ಬಿಸಲು ಕೋಚ್​ಗೆ ಹಾಗೆ ಮಾಡುವಂತೆ ನಾನೇ ಕೇಳಿದ್ದೆ. ದಯವಿಟ್ಟು ಅವರನ್ನು ದೂಷಿಸಬೇಡಿ. ಕಿಚ್ಚಿನಿಂದ ಹೋರಾಡಲು ನನ್ನನ್ನು ಪ್ರೇರೆಪಿಸಲು ಹೀಗೆ ಮಾಡಲಾಗಿದೆ ಎಂದು ಟ್ರಾಜ್ಡೋಸ್ ತಿಳಿಸಿದ್ದಾರೆ.

ಸದ್ಯ ಜರ್ಮನಿ ಕೋಚ್​ನ ಕಪಾಳ ಮೋಕ್ಷದ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಕೆಲವರು ತರಬೇತುದಾರನ ನಡೆಯನ್ನು ಸಮರ್ಥಿಸಿದ್ದಾರೆ. ಇನ್ನು ಕೆಲವರು ಈ ರೀತಿಯ ವರ್ತನೆಯ ಸ್ಪರ್ಧಿಗಳ ಮೇಲೆ ಮತ್ತಷ್ಟು ಒತ್ತಡವನ್ನು ಉಂಟು ಮಾಡುತ್ತದೆ ಎಂದಿದ್ದಾರೆ. ಇದಾಗ್ಯೂ ಈ ಪಂದ್ಯದಲ್ಲಿ ಹಂಗೇರಿಯಾದ ಓಜ್ಬಾಸ್ ವಿರುದ್ದ ಟ್ರಾಜ್ಡೋಸ್ ಸೋಲನುಭವಿಸಿದ್ದಾರೆ.

ಇದನ್ನೂ ಓದಿ: ಮದ್ಯಪಾನ ಮಾಡಿ ಶತಕ ಸಿಡಿಸಿದ್ದ ಗ್ಯಾರಿ ಸೋಬರ್ಸ್​..!

ಇದನ್ನೂ ಓದಿ: ಸೂರ್ಯಕುಮಾರ್ ಯಾದವ್​ಗೆ ಅವಕಾಶ ಕೈತಪ್ಪುವ ಆತಂಕ

(Tokyo Olympics 2020: Judo coach slaps German athlete. Here is why)

Follow Us
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ