AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aditi Ashok: ಟೋಕಿಯೋ ಒಲಿಂಪಿಕ್ಸ್​ನಲ್ಲಿ ಕನ್ನಡತಿಯ ಸರ್ವಶ್ರೇಷ್ಠ ಸಾಧನೆ

Tokyo Olympics 2020: ಟೋಕಿಯೋ ಒಲಿಂಪಿಕ್ಸ್​ನಲ್ಲಿ ಅದ್ಭುತ ಕೌಶಲ್ಯ ಮತ್ತು ಸಂಕಲ್ಪವನ್ನು ತೋರಿಸಿದ್ದೀರಿ . ಕೂದಲೆಳೆಯ ಅಂತರದಲ್ಲಿ ಪದಕವು ತಪ್ಪಿಹೋಗಿದೆ. ಆದರೆ ಎಲ್ಲಾ ಭಾರತೀಯರಿಗಿಂತ ನೀವು ತುಂಬಾ ದೂರ ಕ್ರಮಿಸಿದ್ದೀರಿ.

Aditi Ashok: ಟೋಕಿಯೋ ಒಲಿಂಪಿಕ್ಸ್​ನಲ್ಲಿ ಕನ್ನಡತಿಯ ಸರ್ವಶ್ರೇಷ್ಠ ಸಾಧನೆ
Aditi Ashok
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 07, 2021 | 3:56 PM

ಕಳೆದ ಒಂದು ಶತಮಾನಗಳಿಂದಲೂ ಭಾರತೀಯರು ಒಲಿಂಪಿಕ್ಸ್​ನಲ್ಲಿ (Tokyo Olympics 2020) ಭಾಗವಹಿಸುತ್ತಿದ್ದರೂ, ಕೆಲವೊಂದು ವಿಭಾಗಗಳಲ್ಲಿ ಯಾವುದೇ ಸ್ಪರ್ಧಾಳುಗಳು ಕಾಣಿಸಿಕೊಳ್ಳುತ್ತಿರಲಿಲ್ಲ. ಅದರಲ್ಲೂ ಗಾಲ್ಫ್ ವಿಭಾಗದಲ್ಲಿ ಆಗೊಮ್ಮೆ ಹೀಗೊಮ್ಮೆ ಹೆಸರುಗಳು ಕಂಡು ಬಂದರೂ ಮೊದಲ ಸುತ್ತಿನಲ್ಲೇ ನಿರ್ಗಮಿಸಿದವರೇ ಹೆಚ್ಚು. ಆದರೆ ಈ ಬಾರಿ ಗಾಲ್ಫ್ ಮೂಲಕ ಕೂಡ ಪದಕದ ನಿರೀಕ್ಷೆ ಹುಟ್ಟುಹಾಕಿದವರು ಕನ್ನಡತಿ ಅದಿತಿ ಅಶೋಕ್ (Aditi Ashok). ಹೌದು, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮೂಲದವರಾದ ಅದಿತಿ ಕುಟುಂಬ ಹಲವಾರು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಇತ್ತ 5ನೇ ವಯಸ್ಸಿನಿಂದಲೇ ಗಾಲ್ಫ್​ನತ್ತ ಮುಖ ಮಾಡಿದ್ದ 23ರ ಹರೆಯದ ಅದಿತಿ ಈ ಬಾರಿ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಅರ್ಹತೆ ಗಿಟ್ಟಿಸಿಕೊಂಡಿದ್ದರು. ಆರಂಭದಲ್ಲಿ ಭಾರತದಿಂದ ತೆರಳಿದ ನೂರಾರು ಸ್ಪರ್ಧಿಗಳಲ್ಲಿ ಮತ್ತೊಬ್ಬರು ಎಂಬಂತಿದ್ದ ಅದಿತಿ, ತಮ್ಮ ಆಟ ಶುರುವಾಗುತ್ತಿದ್ದಂತೆ ಮನೆ ಮಾತಾದರು. ಅದರಲ್ಲೂ ಅಂತಿಮ ಸುತ್ತು ಪ್ರವೇಶಿಸುವ ಮೂಲಕ ಗಾಲ್ಫ್ ವಿಭಾಗದಲ್ಲಿ ಪ್ರಶಸ್ತಿಯ ಆಸೆಯನ್ನು ಮೂಡಿಸಿದರು.

ಫೈನಲ್ ಸುತ್ತಿನಲ್ಲಿ ಪ್ರಶಸ್ತಿ ಗೆಲ್ಲಬಹುದಾದ ಫೇವರೇಟ್ ಆಟಗಾರ್ತಿಯರಲ್ಲಿ ಒಬ್ಬರಾಗಿದ್ದ ಅದಿತಿ ಕೂದಲೆಳೆಯ ಅಂತರದಲ್ಲಿ ಒಲಿಂಪಿಕ್ ಪದಕ ವಂಚಿತರಾದರು. ಈ ಸ್ಪರ್ಧೆಯಲ್ಲಿ 68 ಪ್ರಯತ್ನಗಳಲ್ಲಿ ನಾಲ್ಕನೆಯವರಾಗಿ ಉಳಿಯುವ ಮೂಲಕ ಕಂಚಿನ ಪ್ರಶಸ್ತಿಯನ್ನು ತಪ್ಪಿಸಿಕೊಂಡರು. ಆದರೆ ಭಾರತೀಯ ಆಟಗಾರ್ತಿಯೊಬ್ಬರು ಒಲಿಂಪಿಕ್ಸ್​ ಗಾಲ್ಫ್​ನಲ್ಲಿ ನಾಲ್ಕನೇ ಸ್ಥಾನ ಪಡೆಯುತ್ತಿರುವುದು ಇದೇ ಮೊದಲು.

ಅಂತಿಮ ಸುತ್ತಿನ ಪಂದ್ಯದಲ್ಲಿ ಎರಡು ಸ್ಟ್ರೋಕ್‍ಗಳಲ್ಲಿ 15 ಅಂಕ ಪಡೆಯುವ ಪ್ರಶಸ್ತಿ ವಂಚಿತರಾದರೂ, ಸರ್ವ ಶ್ರೇಷ್ಠ ಪ್ರದರ್ಶನದ ಮೂಲಕ ಬೆಂಗಳೂರಿನ ಯುವತಿ ಅಂತರಾಷ್ಟ್ರಿಯ ಮಟ್ಟದಲ್ಲಿ ಮಿಂಚಿದ್ದರು. ಅಷ್ಟೇ ಅಲ್ಲದೆ 23ರ ಹರೆಯದ ಅದಿತಿ ಗಾಲ್ಫ್ ಮೂಲಕ ಮುಂದಿನ ದಿನಗಳಲ್ಲಿ ಭಾರತಕ್ಕೆ ಪದಕ ತಂದುಕೊಡುವ ಭರವಸೆಯನ್ನು ಹುಟ್ಟುಹಾಕಿದ್ದಾರೆ.

ಇನ್ನು ಕರ್ನಾಟಕದ ಯುವ ಗಾಲ್ಫರ್ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modi) ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ಚೆನ್ನಾಗಿ ಆಡಿದ್ದೀರಿ. ಟೋಕಿಯೋ ಒಲಿಂಪಿಕ್ಸ್​ನಲ್ಲಿ ಅದ್ಭುತ ಕೌಶಲ್ಯ ಮತ್ತು ಸಂಕಲ್ಪವನ್ನು ತೋರಿಸಿದ್ದೀರಿ . ಕೂದಲೆಳೆಯ ಅಂತರದಲ್ಲಿ ಪದಕವು ತಪ್ಪಿಹೋಗಿದೆ. ಆದರೆ ಎಲ್ಲಾ ಭಾರತೀಯರಿಗಿಂತ ನೀವು ತುಂಬಾ ದೂರ ಕ್ರಮಿಸಿದ್ದೀರಿ. ನಿಮ್ಮ ಭವಿಷ್ಯವು ಉಜ್ವಲವಾಗಲಿ ಎಂದು ಶುಭ ಹಾರೈಸಿದ್ದಾರೆ.

ಇದನ್ನೂ ಓದಿ:-

Tokyo Olympics: ಒಲಿಂಪಿಕ್ಸ್​ನಲ್ಲಿ ವಿಶ್ವ ದಾಖಲೆ ಬರೆದ ಭಾರತ..!

Tokyo Olympics: ಪದಕ ಗೆಲ್ಲುತ್ತಿದ್ದಂತೆ ಟೀಮ್ ಇಂಡಿಯಾಗೆ ಕಾದಿತ್ತು ಸರ್​ಪ್ರೈಸ್..!

ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ