AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಗೆಲುವಿನ ಓಟ ಮುಂದುವರೆಸಿದ ಪಿವಿ ಸಿಂಧೂ: ಕ್ವಾರ್ಟರ್ ಫೈನಲ್​ಗೆ ಲಗ್ಗೆ

PV Sindhu: ಸಾಕಷ್ಟು ರೋಚಕತೆ ಸೃಷ್ಟಿಸಿದ್ದ ಈ ಪಂದ್ಯದಲ್ಲಿ ಮಿಯಾ ವಿರುದ್ಧ 21-15, 21-13 ಅಂಕಗಳ ಅಂತರದಲ್ಲಿ ಸಿಂಧೂ ಅವರಿ ಮೇಲುಗೈ ಸಾಧಿಸಿದರು.

Tokyo Olympics: ಗೆಲುವಿನ ಓಟ ಮುಂದುವರೆಸಿದ ಪಿವಿ ಸಿಂಧೂ: ಕ್ವಾರ್ಟರ್ ಫೈನಲ್​ಗೆ ಲಗ್ಗೆ
ಪಿವಿ ಸಿಂಧು
Vinay Bhat
|

Updated on:Jul 29, 2021 | 7:32 AM

Share

ಟೋಕಿಯೋ ಒಲಿಂಪಿಕ್ಸ್​ನಲ್ಲಿ (Tokyo Olympics) ಭಾರತ ಗುರುವಾರ ಉತ್ತಮ ಆಟ ಪ್ರದರ್ಶಿಸುತ್ತಿದೆ. ಮಹಿಳೆಯರ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧೂ (PV Sindhu) ಅವರು ಡೆನ್ಮಾರ್ಕ್​ನ ಮಿಯಾ ಬ್ಲಿಚ್​ಫೆಲ್ಡ್ಟ್​​​​ ವಿರುದ್ಧ ರೌಂಡ್ 16 ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟಿದ್ದಾರೆ.

ಸಾಕಷ್ಟು ರೋಚಕತೆ ಸೃಷ್ಟಿಸಿದ್ದ ಈ ಪಂದ್ಯದಲ್ಲಿ ಮಿಯಾ ವಿರುದ್ಧ 21-15, 21-13 ಅಂಕಗಳ ಅಂತರದಲ್ಲಿ ಸಿಂಧೂ ಅವರು ಮೇಲುಗೈ ಸಾಧಿಸಿದರು. ಸುಮಾರು 40 ನಿಮಿಷಗಳ ಕಾಲ ಈ ಪಂದ್ಯ ನಡೆಯಿತು.

ಪಂದ್ಯದ ಆರಂಭದಿಂದಲೂ ಆಕ್ರಮಣಕಾರಿ ಆಟಕ್ಕೆ ಮುಂದಾಗಿದ್ದ ಸಿಂಧೂ ಮೊದಲ ಸೆಟ್ ನಲ್ಲಿ 21-15ರಲ್ಲಿ ಮುನ್ನಡೆ ಸಾಧಿಸಿದರು. ಬಳಿಕ 2ನೇ ಸೆಟ್ ನಲ್ಲಿ ಮಿಯಾ ಕೊಂಚ ವಿರೋಧ ತೋರಿದರಾದೂ 2ನೇ ಸೆಟ್ ಅನ್ನೂ ಕೂಡ ಸಿಂಧು 21-13 ಅಂತರದಲ್ಲಿ ತಮ್ಮದಾಗಿಸಿಕೊಂಡು ಜಯ ಸಾಧಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ಇನ್ನೂ ರೋಯಿಂಗ್ ವಿಭಾಗದಲ್ಲಿ ಭಾರತ ಹೊಸ ದಾಖಲೆ ಬರೆದಿದೆ. ಅರ್ಜುನ್ ಮತ್ತು ಅರವಿಂದ್ ಜೋಡಿಯ ಭಾರತದ ರೋಯಿಂಗ್ ತಂಡ 25 ಒಲಿಂಪಿಕ್ಸ್ ಇತಿಹಾಸದಲ್ಲಿಯೇ ಭಾರತದ ಯಾವುದೇ ರೋವರ್ಸ್ ಮಾಡಿರದ ದಾಖಲೆಯನ್ನು ನಿರ್ಮಿಸಿದ್ದಾರೆ.

ಇಂದು ಮುಂಜಾನೆ ರೋಯಿಂಗ್ ವಿಭಾಗದ ಡಬಲ್ಸ್ ಸ್ಕಲ್ಸ್ ಫೈನಲ್ ಬಿಯಲ್ಲಿ ಭಾಗವಹಿಸಿದ ಅರ್ಜುನ್ ಮತ್ತು ಅರವಿಂದ್ ಜೋಡಿ 5ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಒಟ್ಟಾರೆ 11ನೇ ಸ್ಥಾನವನ್ನು ಪಡೆದುಕೊಂಡಿರುವ ಅರ್ಜುನ್ ಮತ್ತು ಅರವಿಂದ್ 6:29.66 ಟೈಮ್ ಮಾರ್ಕ್‌ನಲ್ಲಿ ಗುರಿಯನ್ನು ತಲುಪಿದರು.

ಭಾರತಕ್ಕೆ ಇಲ್ಲಿ ಪದಕ ಗೆಲ್ಲುವ ಅವಕಾಶ ಕೈತಪ್ಪಿತಾದರೂ ಒಲಿಂಪಿಕ್ಸ್ ಇತಿಹಾಸದಲ್ಲಿಯೇ ಭಾರತದ ಯಾವುದೇ ರೋವರ್ಸ್ ಮುಟ್ಟದಂತಹ ಸ್ಥಾನವನ್ನು ಅರ್ಜುನ್ ಮತ್ತು ಅರವಿಂದ್ ಜೋಡಿ ಮುಟ್ಟಿ ನೂತನ ದಾಖಲೆ ಬರೆದರು.

Tokyo Olympics: ರೋಚಕ ಘಟ್ಟದಲ್ಲಿ ಹಾಕಿ ಪಂದ್ಯ: ರೋಯಿಂಗ್ ಇತಿಹಾಸದಲ್ಲಿ ಭಾರತದ ವಿಶೇಷ ಸಾಧನೆ

Tokyo Olympics 2020: ಪುರುಷರ ಬ್ಯಾಡ್ಮಿಂಟನ್​ನಲ್ಲಿ ಚಿನ್ನ ಗೆಲ್ಲುವರೆಂದು ನಿರೀಕ್ಷಿಸಲಾಗಿದ್ದ ವಿಶ್ವ ಚಾಂಪಿಯನ್ ಮೊಮೊಟಾ ಮೊದಲ ಸುತ್ತಿನಲ್ಲೇ ಸೋತು ಹೊರಬಿದ್ದರು!

(Badminton: PV Sindhu defeats Mia Blichfeldt in straight sets, books place in quarter-final)

Published On - 7:20 am, Thu, 29 July 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ