AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಕರ್ನಾಟಕ ಸರ್ಕಾರ ಅದಿತಿ ಜತೆಗಿದೆ; ಗಾಲ್ಫರ್ ಅದಿತಿ ಅಶೋಕ್ ಸಾಧನೆಗೆ ಮುಖ್ಯಮಂತ್ರಿ ಅಭಿನಂದನೆ

Tokyo Olympics: ಅದಿತಿ ಅವರು ಇಂದು ಪದಕ ಗೆಲ್ಲದೇ ಇರಬಹುದು. ಆದರೆ ಅವರು ಅಂತಾರಾಷ್ಟ್ರೀಯ ಗುಣಮಟ್ಟದ ಆಟವನ್ನು ಪ್ರದರ್ಶನ ಮಾಡಿದ್ದಾರೆ. ಅದಿತಿಗೆ ಉಜ್ವಲ ಭವಿಷ್ಯ ಇದೆ ಎಂದರು.

Tokyo Olympics: ಕರ್ನಾಟಕ ಸರ್ಕಾರ ಅದಿತಿ ಜತೆಗಿದೆ; ಗಾಲ್ಫರ್ ಅದಿತಿ ಅಶೋಕ್ ಸಾಧನೆಗೆ ಮುಖ್ಯಮಂತ್ರಿ ಅಭಿನಂದನೆ
ಅದಿತಿ ಅಶೋಕ್, ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Aug 07, 2021 | 3:34 PM

Share

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಯಾರೂ ನಿರೀಕ್ಷಿಸಿರದ ಗಾಲ್ಫ್ ಕ್ರೀಡೆಯಲ್ಲಿ ಭಾರತ ಅಮೋಘ ಪ್ರದರ್ಶನ ನೀಡಿತಾದರೂ ಪದಕ ಗೆಲ್ಲುವಲ್ಲಿ ವಿಫಲವಾಗಿದೆ.ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್‌ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದು ನಾಲ್ಕನೇ ಸ್ಥಾನ ಪಡೆದುಕೊಂಡಿದ್ದು ಕೂದಲೆಳೆಯ ಅಂತರದಲ್ಲಿ ಪದಕ ಕೈತಪ್ಪಿದೆ. ಆದರೆ ಅದಿತಿ ಅವರ ಸಾಧನೆಯನ್ನು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಮುಕ್ತ ಕಂಠದಿಂದ ಶ್ಲಾಘನೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಬಿಜೆಪಿಯ ಆರೋಗ್ಯ ಸ್ವಯಂ ಸೇವಕರ ಅಭೊಯಾನ ಕಾರ್ಯಕ್ರಮದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅದಿತಿ ಕರ್ನಾಟಕದವರು. ಬೆಂಗಳೂರಿನವರು ಎಂಬುದು ನಮಗೆ ಹೆಮ್ಮೆಯ ಸಂಗತಿ ಎಂದರು. ಅದಿತಿ ಅವರಿಗೆ ಉಜ್ವಲ ಭವಿಷ್ಯವಿದೆ. ಕಾಮನ್ ವೆಲ್ತ್ ಸೇರಿದಂತೆ ಮುಂಬರುವ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡಲು, ಪದಕಗಳನ್ನು ಗೆಲ್ಲಲು ಅವಕಾಶವಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಕರ್ನಾಟಕ ಸರ್ಕಾರ ಅದಿತಿ ಜತೆಗಿದೆ. ಇಡೀ ನಾಡಿನ ಜನತೆ ಅವರೊಂದಿಗೆ ಇದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಮುಖ್ಯಮಂತ್ರಿಗಳು ಮಾಧ್ಯಮಗಳಿಗೆ ಅದಿತಿ ಅವರ ಸಾಧನೆ ಕುರಿತು ಶುಭ ಹಾರೈಸಿದರು. ಅದಿತಿ ಅವರು ಇಂದು ಪದಕ ಗೆಲ್ಲದೇ ಇರಬಹುದು. ಆದರೆ ಅವರು ಅಂತಾರಾಷ್ಟ್ರೀಯ ಗುಣಮಟ್ಟದ ಆಟವನ್ನು ಪ್ರದರ್ಶನ ಮಾಡಿದ್ದಾರೆ. ಅದಿತಿಗೆ ಉಜ್ವಲ ಭವಿಷ್ಯ ಇದೆ ಎಂದರು.

Follow Us
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ