AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aditi Ashok ಟೊಕಿಯೊ ಒಲಿಂಪಿಕ್ಸ್ ಗಾಲ್ಫ್ ; ಕನ್ನಡತಿ ಅದಿತಿ ಅಶೋಕ್​​ನಿಂದ ಪದಕ ನಿರೀಕ್ಷೆ

Tokyo Olympics: ಕೇವಲ ಒಂದು ಸುತ್ತು ಬಾಕಿ ಇರುವಾಗ, ಅದಿತಿ ಪದಕದ ಭರವಸೆಯೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ ನಿರ್ಣಾಯಕ ನಾಲ್ಕನೇ ಸುತ್ತು ಶನಿವಾರ ನಡೆಯಲಿದೆ. ಇದು ಅದಿತಿಯ ಎರಡನೇ ಒಲಿಂಪಿಕ್ಸ್ ಆಗಿದೆ.

Aditi Ashok ಟೊಕಿಯೊ ಒಲಿಂಪಿಕ್ಸ್ ಗಾಲ್ಫ್ ; ಕನ್ನಡತಿ ಅದಿತಿ ಅಶೋಕ್​​ನಿಂದ ಪದಕ ನಿರೀಕ್ಷೆ
ಅದಿತಿ ಅಶೋಕ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 06, 2021 | 6:16 PM

Share

ಟೋಕಿಯೊ: ಭಾರತಕ್ಕೆ ಟೋಕಿಯೊ ಒಲಿಂಪಿಕ್ಸ್​​ನಲ್ಲಿ ಇನ್ನೊಂದು ಪದಕ ಸಿಗುವ ನಿರೀಕ್ಷೆ ಇದೆ. ಹಾಕಿ ಮತ್ತು ಕುಸ್ತಿಯಲ್ಲಿ ಪದಕದ ಕನಸು ಭಗ್ನವಾಗಿದ್ದರೂ ಗಾಲ್ಫ್​​ನಲ್ಲಿ ಪದಕ ಸಿಗುವ ನಿರೀಕ್ಷೆ ದೇಶದ ಜನರದ್ದು. ಮಹಿಳೆಯರ ವೈಯಕ್ತಿಕ ಸ್ಟ್ರೋಕ್ ಪ್ಲೇನಲ್ಲಿ ಸ್ಪರ್ಧಿಸುತ್ತಿರುವ ಇಪ್ಪತ್ಮೂರು ವರ್ಷದ ಕನ್ನಡತಿ ಅದಿತಿ ಅಶೋಕ್ ಪದಕದ ನಿರೀಕ್ಷೆಯಲ್ಲಿದ್ದಾರೆ. ಮೊದಲ ಮೂರು ಸುತ್ತುಗಳನ್ನು ಮುಗಿಸಿದ ನಂತರ ಅದಿತಿ ಎರಡನೇ ಸ್ಥಾನ ಪಡೆದರು. ವಿಶ್ವದ ಅಗ್ರಸ್ಥಾನದಲ್ಲಿರುವ ಅಮೆರಿಕದ ನೆಲ್ಲಿ ಕಾರ್ಡಾ ಈಗ ಅಗ್ರಸ್ಥಾನದಲ್ಲಿದ್ದಾರೆ. ಕೇವಲ ಒಂದು ಸುತ್ತು ಬಾಕಿ ಇರುವಾಗ, ಅದಿತಿ ಪದಕದ ಭರವಸೆಯೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ನಿರ್ಣಾಯಕ ನಾಲ್ಕನೇ ಸುತ್ತು ಶನಿವಾರ ನಡೆಯಲಿದೆ. ಇದು ಅದಿತಿಯ ಎರಡನೇ ಒಲಿಂಪಿಕ್ಸ್ ಆಗಿದೆ.

ಶನಿವಾರದ ನಾಲ್ಕನೇ ಸುತ್ತಿನ ಪಂದ್ಯಗಳು ಕೆಟ್ಟ ಹವಾಮಾನದಿಂದಾಗಿ ಒಂದು ಗಂಟೆ ತಡವಾಗಲಿದೆ ಎಂದು ಸಂಘಟಕರು ಘೋಷಿಸಿದ್ದಾರೆ. ಆದಾಗ್ಯೂ, ಕೆಟ್ಟ ಹವಾಮಾನದಿಂದಾಗಿ ನಾಲ್ಕನೇ ಸುತ್ತಿನ ಪಂದ್ಯಗಳಿಗೆ ಅಡ್ಡಿಯಾಗುವ ಸಾಧ್ಯತೆಯಿದೆ. ಶನಿವಾರ ಪಂದ್ಯಕ್ಕೆ ಈ ರೀತಿ ಹವಾಮಾನ ಅಡಚಣೆಯಾದರೆ ಭಾನುವಾರ ಕಾರ್ಯಕ್ರಮ ಆಯೋಜಿಸಲು ಸಂಘಟಕರು ಚಿಂತನೆ ನಡೆಸಿದ್ದಾರೆ.

ಭಾನುವಾರ ಹವಾಮಾನವು ಪ್ರತಿಕೂಲವಾಗಿರುತ್ತದೆ ಎಂದು ಮುನ್ಸೂಚನೆ ನೀಡಲಾಗಿದೆ. ನಾಲ್ಕನೇ ಸುತ್ತು ನಡೆಯದಿದ್ದರೆ, ಪ್ರಸ್ತುತ ಪಾಯಿಂಟ್ ಆಧಾರದಲ್ಲಿ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ಆಗ ಅದಿತಿಗೆ ಬೆಳ್ಳಿ ಪದಕ ಸಿಗುವುದು ಖಚಿತ.

ಇದನ್ನೂ ಓದಿ:  Tokyo Olympics: ಒಲಿಂಪಿಕ್ಸ್ ಹಾಕಿ ಇತಿಹಾಸದಲ್ಲಿ ಚೊಚ್ಚಲ ಪದಕ ಗೆಲ್ಲುವ ಭಾರತೀಯ ಮಹಿಳೆಯರ ಕನಸು ಭಗ್ನ

ಇದನ್ನೂ ಓದಿ: Tokyo Olympics: 34 ಸಾವಿರ ಜನಸಂಖ್ಯೆ , ಐವರು ಒಲಿಂಪಿಕ್ಸ್‌ ಸ್ಪರ್ಧಿಗಳು; 3 ಪದಕ ಗೆದ್ದು ದಾಖಲೆ ಬರೆದ ಚಿಕ್ಕ ದೇಶದ ಸಾಧನೆಯಿದು

(Tokyo Olympics golf women’s individual Aditi Ashok continued with her great form hope for medal)

Published On - 6:14 pm, Fri, 6 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!