Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ನಿಮ್ಮನ್ನು ಬೆಂಬಲಿಸುತ್ತಿರುವುದಕ್ಕೆ ಹೆಮ್ಮೆಪಡುತ್ತೇವೆ; ಭಾರತದ ಹಾಕಿಗೆ ಮರುಜೀವ ಕೊಟ್ಟ ನವೀನ್ ಪಟ್ನಾಯಕ್

Tokyo Olympics: ಒಡಿಶಾ ರಾಜ್ಯ ಸರ್ಕಾರವು 2018 ರಿಂದ ಪುರುಷರು ಮತ್ತು ಮಹಿಳಾ ಹಾಕಿ ತಂಡವನ್ನು ಪ್ರಾಯೋಜಿಸಿದೆ. ಜೊತೆಗೆ ಸುಮಾರು 150 ಕೋಟಿ ರೂಗಳಷ್ಟು ಹಣವನ್ನು ಹಾಕಿ ತಂಡಗಳ ಮೇಲೆ ಹೂಡಿಕೆ ಮಾಡಿದೆ.

Tokyo Olympics: ನಿಮ್ಮನ್ನು ಬೆಂಬಲಿಸುತ್ತಿರುವುದಕ್ಕೆ ಹೆಮ್ಮೆಪಡುತ್ತೇವೆ; ಭಾರತದ ಹಾಕಿಗೆ ಮರುಜೀವ ಕೊಟ್ಟ ನವೀನ್ ಪಟ್ನಾಯಕ್
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್
Follow us
TV9 Web
| Updated By: ಪೃಥ್ವಿಶಂಕರ

Updated on: Aug 05, 2021 | 3:54 PM

ಟೋಕಿಯೋ ಒಲಿಂಪಿಕ್ಸ್ (Tokyo Olympics) 2020 ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಕಂಚಿನ ಪದಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್​ಪ್ರೀತ್ ಪಡೆ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು, ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಪದಕಕ್ಕೆ ಕೊರಳೊಡ್ಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರತೀಯರು ಹಾಕಿ ತಂಡವನ್ನು ಶ್ಲಾಘಿಸಿದರೆ, ಭಾರತೀಯ ಪುರುಷರು ಮತ್ತು ಮಹಿಳೆಯರ ಹಾಕಿ ತಂಡವನ್ನು ನಿರಂತರವಾಗಿ ಬೆಂಬಲಿಸುತ್ತಿರುವುದಕ್ಕಾಗಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಧನ್ಯವಾದಗಳನ್ನು ಅರ್ಪಿಸುವ ಪೋಸ್ಟ್‌ಗಳೊಂದಿಗೆ ಟ್ವಿಟರ್ ತುಂಬಿ ಹೋಗಿದೆ.

ವಾಸ್ತವವಾಗಿ, ಆಗಸ್ಟ್ 2 ರಂದು, ಶ್ರೀ ಪಟ್ನಾಯಕ್ ಅವರು ಒಡಿಶಾದ ಜನರು 2014 ರಿಂದಲೂ ಎರಡೂ ರಾಷ್ಟ್ರೀಯ ತಂಡಗಳನ್ನು ಬೆಂಬಲಿಸುತ್ತಿರುವುದಕ್ಕೆ ಹೆಮ್ಮೆಪಡುತ್ತಾರೆ ಎಂದು ಹೇಳಿದರು. ವರದಿಗಳ ಪ್ರಕಾರ, ಒಡಿಶಾ ರಾಜ್ಯ ಸರ್ಕಾರವು 2018 ರಿಂದ ಪುರುಷರು ಮತ್ತು ಮಹಿಳಾ ಹಾಕಿ ತಂಡವನ್ನು ಪ್ರಾಯೋಜಿಸಿದೆ. ಜೊತೆಗೆ ಸುಮಾರು 150 ಕೋಟಿ ರೂಗಳಷ್ಟು ಹಣವನ್ನು ಹಾಕಿ ತಂಡಗಳ ಮೇಲೆ ಹೂಡಿಕೆ ಮಾಡಿದೆ.

ಮುಂದಿನ ಭವಿಷ್ಯಕ್ಕೆ ಶುಭ ಹಾರೈಸುತ್ತೇವೆ ನಮ್ಮ ಹಾಕಿ ತಂಡಕ್ಕೆ ಅಭಿನಂದನೆಗಳು.. ಒಡಿಶಾದಂತೆ ಇಡೀ ಭಾರತವು ತುಂಬಾ ಉತ್ಸುಕವಾಗಿದೆ. ನಾವೆಲ್ಲರೂ ನಿಮ್ಮ ಹಿಂದೆ ಇದ್ದೇವೆ ಮತ್ತು ನಿಮಗೆ ಶುಭ ಹಾರೈಸುತ್ತೇವೆ ಎಂದು ಶ್ರೀ ಪಟ್ನಾಯಕ್ ತಂಡದ ಸದಸ್ಯರೆಲ್ಲರಿಗೂ ವೀಡಿಯೊ ಸಂವಾದದಲ್ಲಿ ಅಭಿನಂದನೆ ಸಲ್ಲಿಸಿದರು.

16 ರಂದು ಭುವನೇಶ್ವರದಲ್ಲಿ ನಮ್ಮ ಹಾಕಿ ತಂಡವನ್ನು ಸ್ವಾಗತಿಸಲು ನಾವು ಎದುರು ನೋಡುತ್ತಿದ್ದೇವೆ. ಮತ್ತೊಮ್ಮೆ, ನಿಮ್ಮೆಲ್ಲರಿಗೂ ಮತ್ತು ನಿಮ್ಮ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸುತ್ತೇವೆ ಎಂದು ಶ್ರೀ ಪಟ್ನಾಯಕ್ ಹೇಳಿದರು. ಟೋಕಿಯೊದಲ್ಲಿ ಭಾರತದ ಹಾಕಿ ತಂಡಗಳ ಯಶಸ್ಸಿಗೆ ಒಡಿಶಾ ರಾಜ್ಯ ಕ್ರೀಡೆಗೆ ನೀಡುತ್ತಿರುವ ಬೆಂಬಲಕ್ಕೆ ಸಾಕಷ್ಟು ಋಣಿಯಾಗಿದ್ದು, ಇದು ರಾಷ್ಟ್ರೀಯ ತಂಡವನ್ನು ಪ್ರಾಯೋಜಿಸಿದ ಏಕೈಕ ರಾಜ್ಯವಾಗಿದೆ.

ಹಾಕಿಯನ್ನು ರಾಜ್ಯದ ಸಂಸ್ಕೃತಿಯ ಅವಿಭಾಜ್ಯ ಅಂಗವೆಂದು ಪರಿಗಣಿಸಲಾಗಿದೆ ಮತ್ತು ಒಡಿಶಾ ಸರ್ಕಾರವು ಭುವನೇಶ್ವರದಲ್ಲಿ ಪುರುಷರ ವಿಶ್ವಕಪ್ ಸೇರಿದಂತೆ ಹಲವಾರು ಪ್ರಮುಖ ಪಂದ್ಯಾವಳಿಗಳನ್ನು ನಡೆಸಿದೆ. ಭಾರತ ಮಹಿಳಾ ಹಾಕಿ ತಂಡವು ಕಂಚಿನ ಪದಕದ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ವಿರುದ್ಧ ಹೋರಾಡಿ ಗೆದ್ದು ಇತಿಹಾಸ ಬರೆಯಲಿದೆ. ಮೊದಲ ಬಾರಿಗೆ ಕೊನೆಯ ನಾಲ್ಕರಲ್ಲಿ ಅರ್ಹತೆ ಪಡೆದ ಮಹಿಳಾ ತಂಡವು ತಮ್ಮ ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ ವಿರುದ್ಧ 1-2 ಅಂತರದ ಸೋಲು ಅನುಭವಿಸಿತು.

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು