AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ರೋಚಕ ಪಂದ್ಯದಲ್ಲಿ ಪಿವಿ ಸಿಂಧೂಗೆ ಜಯ: ರೌಂಡ್ 16ಗೆ ಲಗ್ಗೆ

PV Sindhu: ಹಾಂಕಾಂಗ್‌ನ ಆಟಗಾರ್ತಿ ಹಾಗೂ 34ನೇ ಶ್ರೇಯಾಂಕ ಹೊಂದಿರುವ ಚೆಯುಂಗ್‌ ಗಾನ್‌ ಯಿ ವಿರುದ್ಧ ಕಣಕ್ಕಿಳಿದ ಸಿಂಧೂ ಆಕ್ರಮಣಕಾರಿ ಆಟ ಪ್ರದರ್ಶಿಸಿದರು.

Tokyo Olympics: ರೋಚಕ ಪಂದ್ಯದಲ್ಲಿ ಪಿವಿ ಸಿಂಧೂಗೆ ಜಯ: ರೌಂಡ್ 16ಗೆ ಲಗ್ಗೆ
PV Sindhu
TV9 Web
| Edited By: |

Updated on:Jul 28, 2021 | 10:26 AM

Share

ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತದ ಖ್ಯಾತ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ. ಸಿಂಧೂ ಮಹಿಳಾ ಸಿಂಗಲ್ಸ್‌ ಬ್ಯಾಡ್ಮಿಂಟನ್‌ ವಿಭಾಗದಲ್ಲಿ ಭರ್ಜರಿ ಆಟವಾಡುತ್ತಿದ್ದಾರೆ. ಮೊದಲ ಗೇಮ್‌ ಅನ್ನು ಕೇವಲ 13 ನಿಮಿಷಗಳಲ್ಲಿ ಕೈವಶ ಮಾಡಿಕೊಂಡಿದ್ದ ಸಿಂಧೂ, ಇಂದು ನಡೆದ ಎರಡನೇ ಸುತ್ತಿನ ಪಂದ್ಯದಲ್ಲೂ ರೋಚಕ ಗೆಲುವು ಸಾಧಿಸಿದ್ದಾರೆ.

ಹಾಂಕಾಂಗ್‌ನ ಆಟಗಾರ್ತಿ ಹಾಗೂ 34ನೇ ಶ್ರೇಯಾಂಕ ಹೊಂದಿರುವ ಚೆಯುಂಗ್‌ ಗಾನ್‌ ಯಿ ವಿರುದ್ಧ ಕಣಕ್ಕಿಳಿದ ಸಿಂಧೂ ಆಕ್ರಮಣಕಾರಿ ಆಟ ಪ್ರದರ್ಶಿಸಿದರು. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಸಿಂಧೂ 21-9, 21-16 ಅಂಕಗಳ ಅಂತರದಲ್ಲಿ ಚೆಯುಂಗ್‌ ಗಾನ್‌ ಯಿಯನ್ನು ಸೋಲಿಸಿ ರೌಂಡ್ 16ಗೆ ಲಗ್ಗೆಯಿಟ್ಟಿದ್ದಾರೆ. ಈ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ.

ಪಂದ್ಯದ ಆರಂಭದಿಂದಲೂ ಆಕ್ರಮಣಕಾರಿ ಆಟಕ್ಕೆ ಮೊರೆ ಹೋಗಿದ್ದ ಪಿವಿ ಸಿಂಧೂ ಮೊದಲ ಸೆಟ್ ನಲ್ಲಿ 21-9ರಲ್ಲಿ ಮುನ್ನಡೆ ಸಾಧಿಸಿದರು. ಬಳಿಕ 2ನೇ ಸೆಟ್ ನಲ್ಲಿ ಚೆಯುಂಗ್‌ ಗಾನ್‌ ಕೊಂಚ ಮುನ್ನಡೆ ತೋರಿದರಾದೂ ತಕ್ಷಣವೇ ಕಮ್​ಬ್ಯಾಕ್ ಮಾಡಿದ ಸಿಂಧು 21-16 ಅಂತರದಲ್ಲಿ ತಮ್ಮದಾಗಿಸಿಕೊಂಡು ಜಯ ಸಾಧಿಸಿ ಟೂರ್ನಿಯ ಮುಂದಿನ ಹಂತಕ್ಕೆ ಮುನ್ನಡೆದಿದ್ದಾರೆ.

2016ರ ರಿಯೋ ಒಲಿಂಪಿಕ್ಸ್‌ನ ಬೆಳ್ಳಿ ಪದಕ ವಿಜೇತೆ ಸಿಂಧೂ ತನ್ನ ಮೊದಲ ಸುತ್ತಿನ ಪಂದ್ಯದಲ್ಲಿ ಇಸ್ರೇಲಿನ ಕೆಸ್ನಿಯಾ ಪೊಲಿಕರ್ಪೊವಾ ಎದುರು 21-7, 21-10 ನೇರ ಗೇಮ್‌ಗಳಲ್ಲಿ ಗೆಲುವು ದಾಖಲಿಸುವ ಮೂಲಕ ಸುಲಭವಾಗಿ ಪಂದ್ಯದಲ್ಲಿ ಪ್ರಾಬಲ್ಯ ಮೆರೆದಿದ್ದರು. ಗ್ರೂಪ್ ‘ಜೆ’ನಲ್ಲಿ ಸ್ಥಾನ ಪಡೆದಿರುವ ಸಿಂಧೂ ಮೊದಲ ಗೇಮ್‌ನಲ್ಲಿ 13 ಅಂಕಗಳ ಭಾರೀ ಅಂತರದ ಗೆಲುವು ದಾಖಲಿಸಿದ್ದರು.

ಇತ್ತ ಮಹಿಳೆಯರ ಹಾಕಿ ಪಂದ್ಯದಲ್ಲಿ ಭಾರತ ಮತ್ತೆ ಮುಗ್ಗರಿಸಿದೆ. ಗ್ರೇಟ್ ಬಿಟನ್ ವಿರುದ್ಧ ನಡೆದ ಪಂದ್ಯದಲ್ಲಿ 1-4 ಅಂತರದಲ್ಲಿ ಸೋಲುಂಡಿರುವ ರಾಣಿ ಪಡೆ ಸತತವಾಗಿ ಮೂರನೇ ಸೋಲನುಭವಿಸಿದೆ.

ಹಾರ್ದಿಕ್ ಪಾಂಡ್ಯ ಜಾಗಕ್ಕೆ ಇಬ್ಬರು ಆಟಗಾರರನ್ನು ಆಯ್ಕೆ ಮಾಡಿದ ಸುನಿಲ್ ಗವಾಸ್ಕರ್

Krunal Pandya: ಲಂಕಾ ವಿರುದ್ಧದ ಸರಣಿಯಿಂದ ಕ್ರುನಾಲ್ ಪಾಂಡ್ಯ ಔಟ್: ಸಂಪರ್ಕದಲ್ಲಿದ್ದ 8 ಆಟಗಾರರು..?

(Tokyo Olympics PV Sindhu trumps Hong Kongs NY Cheung advances to knockout stage)

Published On - 8:38 am, Wed, 28 July 21

Follow Us
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ