AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಸೆಮಿ ಫೈನಲ್​ಗೆ ಲಗ್ಗೆಯಿಟ್ಟ ಭಜರಂಗ್‌ ಪುನಿಯ: ಪದಕದ ನಿರೀಕ್ಷೆಯಲ್ಲಿ ಭಾರತ

Bajrang Punia: ಪುರುಷರ 65 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಇರಾನಿನ ಕುಸ್ತಿಪಟು ಮೋರ್ತೆಜಾ ಗಿಯಾಸಿ ವಿರುದ್ಧ 2-1 ಅಂಕಗಳ ಮುನ್ನಡೆ ಸಾಧಿಸಿ ಭಜರಂಗ್‌ ಪುನಿಯ ಸೆಮೀಸ್​ಗೆ ತಲುಪಿದ್ದಾರೆ.

Tokyo Olympics: ಸೆಮಿ ಫೈನಲ್​ಗೆ ಲಗ್ಗೆಯಿಟ್ಟ ಭಜರಂಗ್‌ ಪುನಿಯ: ಪದಕದ ನಿರೀಕ್ಷೆಯಲ್ಲಿ ಭಾರತ
bajrang punia
TV9 Web
| Edited By: |

Updated on:Aug 06, 2021 | 10:22 AM

Share

ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತದ ಕುಸ್ತಿಪಟು ಭಜರಂಗ್‌ ಪುನಿಯ ಸೆಮಿ ಫೈನಲ್​ಗೆ ಪ್ರವೇಶ ಪಡೆದಿದ್ದಾರೆ. ಪುರುಷರ 65 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಇರಾನಿನ ಕುಸ್ತಿಪಟು ಮೋರ್ತೆಜಾ ಗಿಯಾಸಿ ವಿರುದ್ಧ 2-1 ಅಂಕಗಳ ಮುನ್ನಡೆ ಸಾಧಿಸಿ ಸೆಮೀಸ್​ಗೆ ತಲುಪಿದ್ದಾರೆ.

ಸೆಮಿಫೈನಲ್ ಕದನವು ಭಾರತೀಯ ಕಾಲಮಾನ ಅಪರಾಹ್ನ 2.52ಕ್ಕೆ ಸರಿಯಾಗಿ ಆರಂಭವಾಗಲಿದೆ. ಈ ಮೊದಲು ಪ್ರೀ-ಕ್ವಾರ್ಟರ್ಫೈನಲ್ ಮುಖಾಮುಖಿಯಲ್ಲಿ ಬಜರಂಗ್, ಕಿರ್ಗಿಸ್ತಾನದ ಎರ್ನಾಜರ್ ಅಕ್ಮಟಾಲೀವ್ ವಿರುದ್ಧ ಮೇಲುಗೈ ಸಾಧಿಸಿದ್ದರು. ಏತನ್ಮಧ್ಯೆ ಮಹಿಳೆಯರ 50 ಕೆ.ಜಿ. ವಿಭಾಗದಲ್ಲಿ ಸೋಲಿನ ಆಘಾತ ಎದುರಿಸಿರುವ ಸೀಮಾ ಬಿಸ್ಲಾ, ಹೊರಬಿದ್ದಿದ್ದಾರೆ.

ಗುರುವಾರ ಪುರುಷರ 57 ಕೆ.ಜಿ ವಿಭಾಗದಲ್ಲಿ ಭಾರತದ 23 ವರ್ಷದ ರವಿಕುಮಾರ್ ದಹಿಯಾ ಬೆಳ್ಳಿ ಪದಕ ಜಯಿಸಿದ್ದರು. ಈ ಮೂಲಕ ಒಲಿಂಪಿಕ್ಸ್ ಕುಸ್ತಿಯಲ್ಲಿ ಬೆಳ್ಳಿ ಪದಕ ಜಯಿಸಿದ ಭಾರತದ ಎರಡನೇ ಕುಸ್ತಿಪಟುವೆಂಬ ಹೆಗ್ಗಳಿಕೆಗೆ ಪಾತ್ರರಾದರು. 2012ರಲ್ಲಿ ನಡೆದ ಲಂಡನ್ ಒಲಿಂಪಿಕ್ಸ್ನಲ್ಲಿ ಸುಶೀಲ್ ಕುಮಾರ್ 66ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದ್ದರು.

Published On - 9:59 am, Fri, 6 August 21

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್