AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಕೂದಲೆಳೆಯಲ್ಲಿ ಭಾರತಕ್ಕೆ ಪದಕ ಮಿಸ್: ಗಾಲ್ಫ್​ನಲ್ಲಿ ಕರ್ನಾಟಕದ ಅದಿತಿ ಅಶೋಕ್​ಗೆ ಸೋಲು

Aditi Ashok: ಶನಿವಾರ ನಡೆದ ಸುತ್ತಿನಲ್ಲಿ ಅದಿತಿ ಮೂರನೇ ಸ್ಥಾನ ಪಡೆದುಕೊಂಡರಾದರೂ ನ್ಯೂಜಿಲೆಂಡ್​ನ ಲೈಡಿಯಾ ಕೊ ಜೊತೆ ಟೈ ಆಯಿತು. ಎರಡನೇ ಸ್ಥಾನದಲ್ಲಿ ಜಪಾನ್ ಹಾಗೂ ಮೂರನೇ ಸ್ಥಾನದಲ್ಲಿ ಅಮೆರಿಕಾ ಇತ್ತು. 

Tokyo Olympics: ಕೂದಲೆಳೆಯಲ್ಲಿ ಭಾರತಕ್ಕೆ ಪದಕ ಮಿಸ್: ಗಾಲ್ಫ್​ನಲ್ಲಿ ಕರ್ನಾಟಕದ ಅದಿತಿ ಅಶೋಕ್​ಗೆ ಸೋಲು
ಅದಿತಿ ಅಶೋಕ್
TV9 Web
| Updated By: Digi Tech Desk|

Updated on:Aug 07, 2021 | 10:54 AM

Share

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಯಾರೂ ನಿರೀಕ್ಷಿಸಿರದ ಗಾಲ್ಫ್ ಕ್ರೀಡೆಯಲ್ಲಿ ಭಾರತ ಅಮೋಘ ಪ್ರದರ್ಶನ ನೀಡಿತಾದರೂ ಪದಕ ಗೆಲ್ಲುವಲ್ಲಿ ವಿಫಲವಾಗಿದೆ.ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್‌ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದು ನಾಲ್ಕನೇ ಸ್ಥಾನ ಪಡೆದುಕೊಂಡಿದ್ದು ಕೂದಲೆಳೆಯ ಅಂತರದಲ್ಲಿ ಪದಕ ಕೈತಪ್ಪಿದೆ.

ಮಹಿಳೆಯರ ವೈಯಕ್ತಿಕ ಸ್ಟ್ರೋಕ್‌ ಪ್ಲೇ ವಿಭಾಗದಲ್ಲಿ ಅದಿತಿ 3ನೇ ಸುತ್ತಿನ ಅಂತ್ಯಕ್ಕೆ 2ನೇ ಸ್ಥಾನದಲ್ಲಿದ್ದರು. ಶನಿವಾರ ನಡೆದ ಸುತ್ತಿನಲ್ಲಿ ಅದಿತಿ ಮೂರನೇ ಸ್ಥಾನ ಪಡೆದುಕೊಂಡರಾದರೂ ನ್ಯೂಜಿಲೆಂಡ್​ನ ಲೈಡಿಯಾ ಕೊ ಜೊತೆ ಟೈ ಆಯಿತು. ಎರಡನೇ ಸ್ಥಾನದಲ್ಲಿ ಜಪಾನ್ ಹಾಗೂ ಮೂರನೇ ಸ್ಥಾನದಲ್ಲಿ ಅಮೆರಿಕಾ ಇತ್ತು. ಇದೇವೇಳೆ ಮಳೆ ಬಂದ ಪರಿಣಾಮ ಪಂದ್ಯವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಯಿತು.

ಸ್ವಲ್ಪ ಸಮಯದ ಬಳಿಕ ಮಳೆ ನಿಂತ ಪರಿಣಾಮ ಅಂತಿಮ ಫೈನಲ್ ರೌಂಡ್​​ ಆರಂಭಿಸಲಾಯಿತು. ಇದರಲ್ಲಿ ಅದಿತಿ 4ನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಮೊದಲ ಮೂರು ಸುತ್ತಿನ ಅಂತ್ಯಕ್ಕೆ ಪದಕ ಬೇಟೆಯಲ್ಲಿದ್ದ ಅದಿತಿ, ಶನಿವಾರ ನಡೆದ ನಾಲ್ಕನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದರು. ಇದರಿಂದಾಗಿ ಎರಡನೇ ಸ್ಥಾನದಲ್ಲಿದ್ದ ಅದಿತಿ ನಾಲ್ಕನೇ ಸ್ಥಾನಕ್ಕೆ ಕುಸಿದರು. ಹಾಗಿದ್ದರೂ 23 ವರ್ಷದ ಬೆಂಗಳೂರು ಮೂಲದ ಅದಿತಿ, ಒಲಿಂಪಿಕ್ಸ್ ಗಾಲ್ಫ್ ಇತಿಹಾಸದಲ್ಲೇ ಭಾರತದ ಪರ ಶ್ರೇಷ್ಠ ಸಾಧನೆ ಮಾಡಿದ ಹಿರಿಮೆಗೆ ಪಾತ್ರರಾಗಿದ್ದಾರೆ.

ಇದಕ್ಕೂ ಮೊದಲು ನಡೆದ ಮೊದಲೆರಡು ಸುತ್ತುಗಳಲ್ಲಿ ಜಂಟಿ 2ನೇ ಸ್ಥಾನದಲ್ಲಿದ್ದ ಅದಿತಿ, 18 ಹೋಲ್‌ಗಳ ಆಟದಲ್ಲಿ ಐದು ಬರ್ಡೀಸ್‌ ಅಂಕಗಳನ್ನು ಪಡೆದರು. ಒಟ್ಟು 71 ಯತ್ನಗಳೊಳಗೆ ಎಲ್ಲಾ 18 ಹೋಲ್‌ಗಳನ್ನು ಪೂರ್ಣಗೊಳಿಸಬೇಕು. ಅದಿತಿ ಮೊದಲ ಸುತ್ತಿನಲ್ಲಿ 67, 2ನೇ ಸುತ್ತಿನಲ್ಲಿ 66 ಹಾಗೂ 3ನೇ ಸುತ್ತಿನಲ್ಲಿ 68 ಯತ್ನಗಳಲ್ಲೇ 18 ಹೋಲ್‌ಗಳಿಗೆ ಚೆಂಡನ್ನು ಕಳುಹಿಸಿದರು.

Published On - 10:19 am, Sat, 7 August 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ