AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics: ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಐದು ಚಿನ್ನ ಸೇರಿದಂತೆ 15 ಪದಕ ಗೆಲ್ಲಲಿದೆ; ಮುಖ್ಯಸ್ಥ ಗುರುಶರಣ್ ಸಿಂಗ್

Tokyo Paralympics: ಭಾರತವು 11 ಪ್ಯಾರಾಲಿಂಪಿಕ್ಸ್‌ನಲ್ಲಿ ನಾಲ್ಕು ಚಿನ್ನ ಸೇರಿದಂತೆ 12 ಪದಕಗಳನ್ನು ಗೆದ್ದಿದೆ. ಭಾರತೀಯ ಪ್ಯಾರಾಲಿಂಪಿಕ್ ಸಮಿತಿಯ ಅಧ್ಯಕ್ಷೆ ದೀಪಾ ಮಲಿಕ್ ನೇತೃತ್ವದ ಮೊದಲ ತಂಡ ಟೋಕಿಯೋ ತಲುಪಿದೆ.

Tokyo Paralympics: ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಐದು ಚಿನ್ನ ಸೇರಿದಂತೆ 15 ಪದಕ ಗೆಲ್ಲಲಿದೆ; ಮುಖ್ಯಸ್ಥ ಗುರುಶರಣ್ ಸಿಂಗ್
ಭಾರತದ ಪ್ಯಾರಾಲಿಂಪಿಕ್ ತಂಡ
TV9 Web
| Edited By: |

Updated on: Aug 20, 2021 | 4:31 PM

Share

ಟೋಕಿಯೊ ಒಲಿಂಪಿಕ್ಸ್ 2020 ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ನಂತರ, ಭಾರತವು ತಮ್ಮ ಪ್ಯಾರಾಲಿಂಪಿಯನ್‌ಗಳಿಂದ ಇದೇ ರೀತಿಯ ಪ್ರದರ್ಶನವನ್ನು ನಿರೀಕ್ಷಿಸುತ್ತಿದೆ. ಆಗಸ್ಟ್ 54 ರಿಂದ ಸೆಪ್ಟೆಂಬರ್ 3 ರವರೆಗೆ ಟೋಕಿಯೊದಲ್ಲಿ ನಡೆಯಲಿರುವ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತದ 54 ಆಟಗಾರರು ಭಾಗವಹಿಸಲಿದ್ದಾರೆ. ಪ್ಯಾರಾಲಿಂಪಿರ್‌ನಲ್ಲಿರುವ ಭಾರತದ ತಂಡದ ಮುಖ್ಯಸ್ಥ ಗುರುಶರಣ್ ಸಿಂಗ್ ಈ ಆಟಗಳಲ್ಲಿ ಭಾರತವು ತನ್ನ ಅತ್ಯುತ್ತಮ ಸಾಧನೆ ಮಾಡುತ್ತದೆ ಮತ್ತು ಐದು ಚಿನ್ನ ಸೇರಿದಂತೆ ಕನಿಷ್ಠ 15 ಪದಕಗಳನ್ನು ಗೆಲ್ಲುತ್ತದೆ ಎಂಬ ಭರವಸೆ ನೀಡಿದ್ದಾರೆ.

ಭಾರತವು ಒಂಬತ್ತು ಕ್ರೀಡೆಗಳಿಗೆ 54 ಆಟಗಾರರ ತಂಡವನ್ನು ಕಳುಹಿಸಿದೆ, ಇದು ಈ ಆಟಗಳಲ್ಲಿ ಇದುವರೆಗಿನ ಅತಿದೊಡ್ಡ ಭಾರತೀಯ ತಂಡವಾಗಿದೆ. ಪ್ಯಾರಾ ಆರ್ಚರಿ, ಪ್ಯಾರಾ ಅಥ್ಲೆಟಿಕ್ಸ್, ಪ್ಯಾರಾ ಬ್ಯಾಡ್ಮಿಂಟನ್, ಪ್ಯಾರಾ ಕ್ಯಾನೋಯಿಂಗ್, ಪ್ಯಾರಾ ಶೂಟಿಂಗ್, ಪ್ಯಾರಾ ಸ್ವಿಮ್ಮಿಂಗ್, ಪ್ಯಾರಾ ಪವರ್ ಲಿಫ್ಟಿಂಗ್, ಪ್ಯಾರಾ ಟೇಬಲ್ ಟೆನಿಸ್ ಮತ್ತು ಪ್ಯಾರಾ ಟೇಕ್ವಾಂಡೋಗಳಲ್ಲಿ ಭಾರತೀಯ ಆಟಗಾರರು ಭಾಗವಹಿಸಲಿದ್ದಾರೆ.

ಟೋಕಿಯೊ ಪ್ಯಾರಾಲಿಂಪಿಕ್ಸ್ ಅತ್ಯುತ್ತಮವಾಗಿರುತ್ತದೆ ಭಾರತದ ಪ್ಯಾರಾಲಿಂಪಿಕ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಿಂಗ್ ಮಾತನಾಡಿ, ಇದು ನಮ್ಮ ಅತ್ಯುತ್ತಮ ಪ್ಯಾರಾಲಿಂಪಿಕ್ ಕ್ರೀಡಾಕೂಟದ ತಂಡ ಎಂದು ನನಗೆ ಖಾತ್ರಿಯಿದೆ. ನಮ್ಮ ಪ್ಯಾರಾ ಅಥ್ಲೀಟ್‌ಗಳು ಸಾಕಷ್ಟು ಪರಿಶ್ರಮ ಪಟ್ಟಿದ್ದಾರೆ ಮತ್ತು ಅಂತರಾಷ್ಟ್ರೀಯ ಟೂರ್ನಮೆಂಟ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಈ ಕ್ರೀಡಾಕೂಟದಲ್ಲಿ ನಾವು ಐದು ಚಿನ್ನ ಸೇರಿದಂತೆ ಕನಿಷ್ಠ 15 ಪದಕಗಳನ್ನು ನಿರೀಕ್ಷಿಸುತ್ತಿದ್ದೇವೆ. ಪ್ಯಾರಾ ಅಥ್ಲೆಟಿಕ್ಸ್, ಪ್ಯಾರಾ ಬ್ಯಾಡ್ಮಿಂಟನ್, ಪ್ಯಾರಾ ಆರ್ಚರಿ ಮತ್ತು ಪ್ಯಾರಾ ಶೂಟಿಂಗ್‌ನಲ್ಲಿ ನಾವು ಪದಕಗಳನ್ನು ನಿರೀಕ್ಷಿಸುತ್ತಿದ್ದೇವೆ.

ಭಾರತವು 11 ಪ್ಯಾರಾಲಿಂಪಿಕ್ಸ್‌ನಲ್ಲಿ ನಾಲ್ಕು ಚಿನ್ನ ಸೇರಿದಂತೆ 12 ಪದಕಗಳನ್ನು ಗೆದ್ದಿದೆ. ಭಾರತೀಯ ಪ್ಯಾರಾಲಿಂಪಿಕ್ ಸಮಿತಿಯ ಅಧ್ಯಕ್ಷೆ ದೀಪಾ ಮಲಿಕ್ ನೇತೃತ್ವದ ಮೊದಲ ತಂಡ ಟೋಕಿಯೋ ತಲುಪಿದೆ. ತಂಗವೇಲು ಮರಿಯಪ್ಪನ್, ಭಾರತೀಯ ತುಕಡಿಯ ಧ್ವಜಧಾರಿ, ಟೋಕಿಯೋ ತಲುಪಿದ್ದಾರೆ. ಹಿಂದಿನ ಕ್ರೀಡಾಕೂಟದಲ್ಲಿ ಹೈಜಂಪ್ ಚಿನ್ನದ ಪದಕ ಗೆದ್ದಿದ್ದ ಮರಿಯಪ್ಪನ್ ಭಾರತವನ್ನು ಮುನ್ನಡೆಸಲಿದ್ದಾರೆ.

ಭಾರತವು ಕ್ರೀಡೆಯಿಂದ ಹೆಚ್ಚಿನ ಭರವಸೆಯನ್ನು ಹೊಂದಿದೆ ರಿಯೊ ನಂತರ ಇದು ನನ್ನ ಅತ್ಯುತ್ತಮ ಪ್ರದರ್ಶನವಾಗಿತ್ತು. 2017 ರಲ್ಲಿ ನನಗೆ ಪಾದದ ಗಾಯವಾಗಿತ್ತು ಮತ್ತು ಅದರಿಂದ ಚೇತರಿಸಿಕೊಳ್ಳಲು ಸಮಯ ಹಿಡಿಯಿತು. ನಾನು ಈಗ ಕ್ರೀಡಾಕೂಟಕ್ಕೆ ಸಿದ್ಧನಿದ್ದೇನೆ ಮತ್ತು ಚಿನ್ನ ಗೆಲ್ಲುವುದು ನನ್ನ ಗುರಿಯಾಗಿದೆ. ಭಾರತ ನನ್ನಿಂದ ಪದಕದ ನಿರೀಕ್ಷೆಯಲ್ಲಿದೆ ಎಂದು ಎರಡು ಬಾರಿ ಪ್ಯಾರಾ ಜಾವೆಲಿನ್ ಎಸೆತಗಾರ ದೇವೇಂದ್ರ ಜಜಾಡಿಯಾ ಹೇಳಿದರು. ಅವರಲ್ಲದೆ, ವಿಶ್ವ ಚಾಂಪಿಯನ್ ಸುಂದರ್ ಸಿಂಗ್ ಗುರ್ಜಾರ್ ಮತ್ತು ಅಜಿತ್ ಸಿಂಗ್, ವಿಶ್ವ ಚಾಂಪಿಯನ್ ಮತ್ತು ವಿಶ್ವ ದಾಖಲೆ ಹೊಂದಿರುವ ಸಂದೀಪ್ ಚೌಧರಿ ಮತ್ತು ನವದೀಪ್ ಸಿಂಗ್ ಅವರು ಪ್ಯಾರಾ ಜಾವೆಲಿನ್ ಥ್ರೋದಲ್ಲಿ ಭಾರತದ ಸವಾಲನ್ನು ಪ್ರಸ್ತುತಪಡಿಸುತ್ತಾರೆ. ಬಿಲ್ಲುಗಾರಿಕೆಯಲ್ಲಿ ರಾಕೇಶ್ ಕುಮಾರ್ ಮತ್ತು ಶ್ಯಾಮ್ ಸುಂದರ್ ಅಖಾಡಕ್ಕಿಳಿಯಲಿದ್ದಾರೆ. ಮಹಿಳಾ ಆರ್ಚರ್ ಜ್ಯೋತಿ ಬಲಿಯಾನ್ ಕಾಂಪೌಂಡ್ ಮತ್ತು ಮಿಶ್ರ ವಿಭಾಗಕ್ಕೆ ಪ್ರವೇಶಿಸಲಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ