AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics 2020: ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೊದಲ ಪದಕ: ಬೆಳ್ಳಿ ತಂದಿತ್ತ ಮೀರಾ ಬಾಯಿ

Mirabai Chanu: 49 ಕೆಜಿ ವಿಭಾಗದ ಮಹಿಳಾ ವೇಟ್ಲಿಫ್ಟಿಂಗ್​ನಲ್ಲಿ ಮೀರಾ ಬಾಯಿ ಚಾನು ಬೆಳ್ಳಿ ಗೆದ್ದಿದ್ದಾರೆ.

Tokyo Olympics 2020: ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೊದಲ ಪದಕ: ಬೆಳ್ಳಿ ತಂದಿತ್ತ ಮೀರಾ ಬಾಯಿ
Mirabai Chanu
Vinay Bhat
|

Updated on:Jul 24, 2021 | 12:36 PM

Share

ಟೋಕಿಯೋ ಒಲಿಂಪಿಕ್ಸ್ 2020 (Tokyo Olympics 2020) ರಲ್ಲಿ ಭಾರತ ದೇಶ ಉತ್ತಮ ಆರಂಭ ಪಡೆದುಕೊಂಡಿದ್ದು, ಚೊಚ್ಚಲ ಪದಕ ಮುಡಿಗೇರಿಸಿಕೊಂಡಿದೆ. 49 ಕೆಜಿ ವಿಭಾಗದ ಮಹಿಳಾ ವೇಟ್ಲಿಫ್ಟಿಂಗ್​ನಲ್ಲಿ ಮೀರಾ ಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತ ಟೋಕಿಯೋ ಒಲಿಂಪಿಕ್ಸ್ 2020ರಲ್ಲಿ ಪದಕದ ಬೇಟೆ ಶುರುಮಾಡಿದೆ. ಒಲಿಂಪಿಕ್ ಇತಿಹಾಸದಲ್ಲಿ ಭಾರತ ಪರ ವೇಟ್ಲಿಫ್ಟಿಂಗ್​ನಲ್ಲಿ ಪದಕ ಗೆದ್ದ ಎರಡನೇ ಕ್ರೀಡಾಪಟು ಮೀರಾ ಬಾಯಿ ಆಗಿದ್ದಾರೆ.

ಮೊದಲ ಪ್ರಯತ್ನದಲ್ಲೇ ಮೀರಾಬಾಯಿ ಚಾನು ಅವರು ಸ್ನ್ಯಾಚ್‌ ವಿಭಾಗದಲ್ಲಿ 84 ಕೆ.ಜಿ ಭಾರವನ್ನು ಲೀಲಾಜಾಲವಾಗಿ ಎತ್ತುವಲ್ಲಿ ಯಶಸ್ವಿಯಾದರು. ಇದಾದ ಬಳಿಕ 87 ಕೆ.ಜಿ. ವೇಟ್‌ ಲಿಫ್ಟ್‌ ಮಾಡುವ ಸ್ಯಾಚ್‌ ಲಿಫ್ಟ್‌ ವಿಭಾಗದಲ್ಲಿ ಎರಡನೇ ಸ್ಥಾನ ಪಡೆದರು. ಇನ್ನು ಚೀನಾದ ಹ್ಯೂ ಜಿಹೈ 94 ಕೆ.ಜಿ ವೇಟ್‌ಲಿಫ್ಟ್‌ ಮಾಡುವ ಮೂಲಕ ಒಲಿಂಪಿಕ್ಸ್‌ ದಾಖಲೆ ಬರೆದಿದ್ದಾರೆ.

ಮೀರಾಬಾಯಿ ಸಾಧನೆಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಇದು ಒಲಿಂಪಿಕ್ ಭಾರ ಎತ್ತುವ ಸ್ಪರ್ಧೆಯಲ್ಲಿ ಭಾರತದ ಶ್ರೇಷ್ಠ ಸಾಧನೆಯಾಗಿದೆ. ಈ ಹಿಂದೆ ಸಿಡ್ನಿ ಒಲಿಂಪಿಕ್ ನಲ್ಲಿ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕ ಗೆದ್ದಿದ್ದರು. ಅವರು 69 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗಳಿಸಿದ್ದರು.

ಈ ಮೂಲಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 21 ವರ್ಷಗಳ ಬಳಿಕ ಭಾರತ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಪದಕವೊಂದನ್ನು ಗೆದ್ದ ಸಾಧನೆ ಮಾಡಿದೆ.

ಇತ್ತ ಭಾರತ ಹಾಕಿ ತಂಡ ತನ್ನ ಚೊಚ್ಚಲ ಪಂದ್ಯದಲ್ಲೇ ನ್ಯೂಜಿಲೆಂಡ್ ವಿರುದ್ಧ 3-0 ಗೋಲುಗಳ ಅಂತರದಿಂದ ಜಯ ಸಾಧಿಸಿದೆ. 10 ಮೀಟರ್​ನ ಪುರುಷರ ಏರ್ ಪಿಸ್ತೂಲ್ ಶೂಟಿಂಗ್ ವಿಭಾಗದಲ್ಲಿ ಸೌರಭ್ ಚೌಧರಿ (Saurabh Chaudhary) ಅವರು ಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತ ಮತ್ತೊಂದು ಪದಕದ ನಿರೀಕ್ಷೆಯಲ್ಲಿದೆ. ಫೈನಲ್ ಪಂದ್ಯ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.

Published On - 12:12 pm, Sat, 24 July 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ