AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಭಾರತ ಭರ್ಜರಿ ಪ್ರದರ್ಶನ: ಪಿವಿ ಸಿಂಧೂ ಬಳಿಕ ಮೇರಿ ಕೋಮ್, ಮನಿಕಾಗೆ ಗೆಲುವು

Mary Kom: ಭಾರತದ ಖ್ಯಾತ ಬಾಕ್ಸಿಂಗ್ ತಾರೆ ಮೇರಿ ಕೋಮ್ ಕೂಡ ಡೊಮಿನಿಕನ್ ರಿಪಬ್ಲಿಕ್ ದೇಶದ ಮಿಗುಯೆಲಿನ ಹೆರ್ನಾಂಡೆಜ್ ವಿರುದ್ಧ 4-1 ಅಂತರದಿಂದ ಗೆದ್ದು ರೌಂಡ್ 16ಕ್ಕೆ ತೇರ್ಗಡೆಗೊಂಡಿದ್ದಾರೆ.

Tokyo Olympics: ಭಾರತ ಭರ್ಜರಿ ಪ್ರದರ್ಶನ: ಪಿವಿ ಸಿಂಧೂ ಬಳಿಕ ಮೇರಿ ಕೋಮ್, ಮನಿಕಾಗೆ ಗೆಲುವು
ಮೇರಿ ಕೋಮ್
Vinay Bhat
|

Updated on:Jul 25, 2021 | 2:24 PM

Share

ಟೋಕಿಯೋ ಒಲಿಂಪಿಕ್ಸ್ (Tokyo Olympics) ನಲ್ಲಿ ರವಿವಾರ ಭಾರತ ಉತ್ತಮ ಪ್ರದರ್ಶನ ತೋರುತ್ತಿದೆ. ಬೆಳಗಿನ ಜಾವ ಪಿವಿ ಸಿಂಧೂ (PV Sindhu) ಇಸ್ರೇಲಿನ ಸಿನಿಯಾ ಪೊಲಿಕಾರ್ಪೋವಾ ವಿರುದ್ಧ 21-7, 21-10 ಅಂಕಗಳ ಅಂತರದಿಂದ ಭಾರೀ ದೊಡ್ಡ ಜಯ ಸಾಧಿಸಿದರು. ಸದ್ಯ ಭಾರತದ ಖ್ಯಾತ ಬಾಕ್ಸಿಂಗ್ ತಾರೆ ಮೇರಿ ಕೋಮ್ (Mary Kom) ಮತ್ತು ಟೇಬಲ್ ಟೆನಿಸ್ ಆಟಗಾರ್ತಿ ಮಣಿಕಾ ಬಾತ್ರಾ (Manika Batra) ಭರ್ಜರಿ ಜಯ ಸಾಧಿಸಿ ಮುಂದಿನ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.

ಭಾರತೀಯರ ನಿರೀಕ್ಷೆಯನ್ನು ಹುಸಿ ಮಾಡದ ಮೇರಿ ಕೋಮ್ ಡೊಮಿನಿಕನ್ ರಿಪಬ್ಲಿಕ್ ದೇಶದ ಮಿಗುಯೆಲಿನ ಹೆರ್ನಾಂಡೆಜ್ ವಿರುದ್ಧ 4-1 ಅಂತರದಿಂದ ಗೆದ್ದು ರೌಂಡ್ 16ಕ್ಕೆ ತೇರ್ಗಡೆಗೊಂಡರು. ಮೇರಿ ಅವರ ಮುಂದಿನ ಪಂದ್ಯ ಜುಲೈ 29 ರಂದು ನಡೆಯಲಿದ್ದು ಕೊಲಂಬಿಯಾದ ಇಂಗ್ರಿಟ್ ಲೊರೆನಾ ವಿರುದ್ಧ ಹೋರಾಡಲಿದ್ದಾರೆ.

ಇತ್ತ ಟೇಬಲ್ ಟೆನಿಸ್ ಮಹಿಳಾ ಸಿಂಗಲ್ಸ್ ವಿಭಾಗದ 2ನೇ ಸುತ್ತಿನಲ್ಲಿ ಮಣಿಕಾ ಬಾತ್ರಾ 4-11, 4-11, 11-7, 12-10, 8-11, 11-5, 11-7 ಅಂತರದಿಂದ ಉಕ್ರೇನ್ನ ಮಾರ್ಗರಿಟಾ ಪೆಸೊಟ್ಕಾ ಅವರನ್ನು ಸೋಲಿಸಿ ಮುಂದಿನ ಸುತ್ತಿಗೆ ಲಗ್ಗೆಯಿಟ್ಟರು.

ಸಾಕಷ್ಟು ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಮಣಿಕಾ ಆರಂಭದಲ್ಲಿ 0-2 ಹಿನ್ನಡೆ ಅನುಭವಿಸಿದ್ದರು. ಬಳಿಕ ಚೇತರಿಸಿಕೊಂಡ ಬಾತ್ರಾ 57 ನಿಮಿಷಗಳಲ್ಲಿ ಸ್ಪರ್ಧೆಯನ್ನು 4-3 ಅಂತರದಿಂದ ಗೆದ್ದುಕೊಂಡರು. ಬಾತ್ರಾ ಮೂರನೇ ಸುತ್ತಿಗೆ ತೇರ್ಗಡೆಗೊಂಡಿದ್ದಾರೆ.

ಇನ್ನೂ ಟೇಬಲ್ ಟೆನಿಸ್ ಪುರುಷರ ವಿಭಾಗದಲ್ಲಿ ಸಥಿಯಾನ್ ಜ್ಞಾನಶೇಖರನ್ ಸೋಲು ಕಂಡಿದ್ದಾರೆ. ಹಾಂಕಾಂಗ್‌ನ ಲಾಮ್ ಸಿಯು ಹಾಂಗ್ ವಿರುದ್ಧ ಏಳು ಸುತ್ತುಗಳಲ್ಲಿ 3-4 ಅಂತರದಿಂದ ಶರಣಾದರು. 37ನೇ ಶ್ರೇಯಾಂಕದ ಸಥಿಯಾನ್ ಹಾಂಕಾಂಗ್‌ನ 95ನೇ ಶ್ರೇಯಾಂಕದ ಲಾಮ್ ಸಿಯು ಹಾಂಗ್ ವಿರುದ್ಧ ಉತ್ತಮ ಆರಂಭದ ಹೊರತಾಗಿಯೂ ಗೆಲುವು ಪಡೆಯಲು ವಿಫಲರಾದರು.

Tokyo Olympics: ಬೆಳ್ಳಿ ಹುಡುಗಿ ಮೀರಾಬಾಯಿಗೆ ಡೊಮಿನೊಸ್ ಕಡೆಯಿಂದ ಜೀವನ ಪೂರ್ತಿ ಫ್ರೀ ಪಿಜ್ಜಾ

The Hundred: 43 ಬಾಲ್​, ಅಜೇಯ 92 ರನ್: ಜೆಮಿಮಾ ರೊಡ್ರಿಗಸ್ ಏಕಾಂಗಿ ಹೋರಾಟ: ರೋಚಕ ಜಯ

(Mary Kom beats Miguelina Garcia in Tokyo Olympics opener, moves to last-16)

Published On - 1:58 pm, Sun, 25 July 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ