AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics 2021: ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದವರಿಗೆ ಬಂಪರ್ ಬಹುಮಾನ ಘೋಷಿಸಿದ ಕೇಜ್ರಿವಾಲ್ ಸರ್ಕಾರ

Tokyo Olympics 2021: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ದೆಹಲಿಯ ಕ್ರೀಡಾಪಟುಗಳಿಗೆ ರೂ. 3 ಕೋಟಿ, ಬೆಳ್ಳಿ ಪದಕ ವಿಜೇತರಿಗೆ 2 ಕೋಟಿ ಮತ್ತು ಕಂಚಿನ ಪದಕ ವಿಜೇತರಿಗೆ 2 ಕೋಟಿ ರೂ. ಬಹುಮಾನ ನೀಡುವುದಾಗಿ ದೆಹಲಿ ಸರ್ಕಾರ ಘೋಷಿಸಿದೆ.

Tokyo Olympics 2021: ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದವರಿಗೆ ಬಂಪರ್ ಬಹುಮಾನ ಘೋಷಿಸಿದ ಕೇಜ್ರಿವಾಲ್ ಸರ್ಕಾರ
ಟೊಕಿಯೊ ಒಲಂಪಿಕ್ಸ್ ಲೊಗೊ
TV9 Web
| Edited By: |

Updated on: Jul 10, 2021 | 4:22 PM

Share

ಈ ಬಾರಿ ಒಲಿಂಪಿಕ್ ಕ್ರೀಡಾಕೂಟ ಜಪಾನಿನ ರಾಜಧಾನಿ ಟೋಕಿಯೊದಲ್ಲಿ ನಡೆಯಲಿದೆ. ಜುಲೈ 23 ರಂದು ಒಲಿಂಪಿಕ್ ಕ್ರೀಡಾಕೂಟ ಪ್ರಾರಂಭವಾಗುತ್ತದೆ. ಭಾರತದ ಕುರಿತು ಮಾತನಾಡುವುದಾದರೆ ಅನೇಕ ಆಟಗಾರರು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುತ್ತಾರೆ. ಈ ಬಾರಿ ದೆಹಲಿಯ ನಾಲ್ವರು ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿದ್ದಾರೆ. ಈ ಕ್ರೀಡಾಪಟುಗಳಲ್ಲಿ ದೀಪಕ್ ಕುಮಾರ್, ಮಾನಿಕಾ ಬಾತ್ರಾ, ಅಮೋಜ್ ಜಾಕೋಬ್ ಮತ್ತು ಸರ್ತಕ್ ಭಾಂಬ್ರಿ ಸೇರಿದ್ದಾರೆ.

ಬೆಳ್ಳಿ ಪದಕ ವಿಜೇತರಿಗೆ 2 ಕೋಟಿ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ದೆಹಲಿಯ ಕ್ರೀಡಾಪಟುಗಳಿಗೆ ರೂ. 3 ಕೋಟಿ, ಬೆಳ್ಳಿ ಪದಕ ವಿಜೇತರಿಗೆ 2 ಕೋಟಿ ಮತ್ತು ಕಂಚಿನ ಪದಕ ವಿಜೇತರಿಗೆ 2 ಕೋಟಿ ರೂ. ಬಹುಮಾನ ನೀಡುವುದಾಗಿ ದೆಹಲಿ ಸರ್ಕಾರ ಘೋಷಿಸಿದೆ. ಇದಲ್ಲದೆ ಪದಕ ಗೆದ್ದ ಕ್ರೀಡಾಪಟುಗಳ ತರಬೇತುದಾರರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಹೇಳಿದೆ ಟೋಕಿಯೊ ಒಲಿಂಪಿಕ್ಸ್ ಬಗ್ಗೆ ಜಗತ್ತು ಉತ್ಸುಕವಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ. ಪ್ರತಿಯೊಂದು ದೇಶವೂ ಪದಕಗಳನ್ನು ಗೆಲ್ಲಲು ಬಯಸುತ್ತದೆ. ಈ ಕಾರಣಕ್ಕಾಗಿ ನಾವು ಬಹುಮಾನದ ಹಣವನ್ನು ಸಹ ಘೋಷಿಸಿದ್ದೇವೆ.

ಕ್ರೀಡಾ ಪ್ರತಿಭೆಗಳಿಗೆ ಆ ವೇದಿಕೆಯನ್ನು ನೀಡುವುದು ನಮ್ಮ ಪ್ರಯತ್ನ ಇಂದು ದೆಹಲಿ ಕ್ರೀಡಾ ವಿಶ್ವವಿದ್ಯಾಲಯದ ಉಪಕುಲಪತಿ ಕರಣ್ ಮಲ್ಲೇಶ್ವರಿ ಅವರೊಂದಿಗಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದರೆ ಕೇಜ್ರಿವಾಲ್ ಸರ್ಕಾರ ದೆಹಲಿ ಆಟಗಾರರಿಗೆ 3 ಕೋಟಿ ರೂ.ಗಳ ಬಹುಮಾನ ನೀಡಲಿದೆ ಎಂದರು. ಸಿಸೋಡಿಯಾ ಅವರ ಟ್ವೀಟ್ ಅನ್ನು ರಿಟ್ವೀಟ್ ಮಾಡಿದ ಸಿಎಂ ಅರವಿಂದ್ ಕೇಜ್ರಿವಾಲ್, ದೆಹಲಿ ಕ್ರೀಡಾ ಪ್ರತಿಭೆಗಳಿಗೆ ಆ ವೇದಿಕೆಯನ್ನು ನೀಡುವುದು ನಮ್ಮ ಪ್ರಯತ್ನ. ಜೊತಗೆ ಇಲ್ಲಿ ಅವರಿಗೆ ಸೌಲಭ್ಯಗಳು ಮತ್ತು ಅವಕಾಶಗಳ ಕೊರತೆಯಿಲ್ಲ ಎಂದು ಬರೆದಿದ್ದಾರೆ. ನಮ್ಮೊಳಗಿನ ಅನೇಕ ಪ್ರತಿಭೆಗಳಿಂದ ಭವಿಷ್ಯದಲ್ಲಿ ಒಲಿಂಪಿಕ್ ಪದಕಗಳನ್ನು ಗೆಲ್ಲುವ ಮೂಲಕ ಭಾರತವು ಪ್ರಪಂಚದಾದ್ಯಂತ ಹೆಸರು ಮಾಡುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ