AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics 2021: ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದವರಿಗೆ ಬಂಪರ್ ಬಹುಮಾನ ಘೋಷಿಸಿದ ಕೇಜ್ರಿವಾಲ್ ಸರ್ಕಾರ

Tokyo Olympics 2021: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ದೆಹಲಿಯ ಕ್ರೀಡಾಪಟುಗಳಿಗೆ ರೂ. 3 ಕೋಟಿ, ಬೆಳ್ಳಿ ಪದಕ ವಿಜೇತರಿಗೆ 2 ಕೋಟಿ ಮತ್ತು ಕಂಚಿನ ಪದಕ ವಿಜೇತರಿಗೆ 2 ಕೋಟಿ ರೂ. ಬಹುಮಾನ ನೀಡುವುದಾಗಿ ದೆಹಲಿ ಸರ್ಕಾರ ಘೋಷಿಸಿದೆ.

Tokyo Olympics 2021: ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದವರಿಗೆ ಬಂಪರ್ ಬಹುಮಾನ ಘೋಷಿಸಿದ ಕೇಜ್ರಿವಾಲ್ ಸರ್ಕಾರ
ಟೊಕಿಯೊ ಒಲಂಪಿಕ್ಸ್ ಲೊಗೊ
TV9 Web
| Edited By: |

Updated on: Jul 10, 2021 | 4:22 PM

Share

ಈ ಬಾರಿ ಒಲಿಂಪಿಕ್ ಕ್ರೀಡಾಕೂಟ ಜಪಾನಿನ ರಾಜಧಾನಿ ಟೋಕಿಯೊದಲ್ಲಿ ನಡೆಯಲಿದೆ. ಜುಲೈ 23 ರಂದು ಒಲಿಂಪಿಕ್ ಕ್ರೀಡಾಕೂಟ ಪ್ರಾರಂಭವಾಗುತ್ತದೆ. ಭಾರತದ ಕುರಿತು ಮಾತನಾಡುವುದಾದರೆ ಅನೇಕ ಆಟಗಾರರು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುತ್ತಾರೆ. ಈ ಬಾರಿ ದೆಹಲಿಯ ನಾಲ್ವರು ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿದ್ದಾರೆ. ಈ ಕ್ರೀಡಾಪಟುಗಳಲ್ಲಿ ದೀಪಕ್ ಕುಮಾರ್, ಮಾನಿಕಾ ಬಾತ್ರಾ, ಅಮೋಜ್ ಜಾಕೋಬ್ ಮತ್ತು ಸರ್ತಕ್ ಭಾಂಬ್ರಿ ಸೇರಿದ್ದಾರೆ.

ಬೆಳ್ಳಿ ಪದಕ ವಿಜೇತರಿಗೆ 2 ಕೋಟಿ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ದೆಹಲಿಯ ಕ್ರೀಡಾಪಟುಗಳಿಗೆ ರೂ. 3 ಕೋಟಿ, ಬೆಳ್ಳಿ ಪದಕ ವಿಜೇತರಿಗೆ 2 ಕೋಟಿ ಮತ್ತು ಕಂಚಿನ ಪದಕ ವಿಜೇತರಿಗೆ 2 ಕೋಟಿ ರೂ. ಬಹುಮಾನ ನೀಡುವುದಾಗಿ ದೆಹಲಿ ಸರ್ಕಾರ ಘೋಷಿಸಿದೆ. ಇದಲ್ಲದೆ ಪದಕ ಗೆದ್ದ ಕ್ರೀಡಾಪಟುಗಳ ತರಬೇತುದಾರರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಹೇಳಿದೆ ಟೋಕಿಯೊ ಒಲಿಂಪಿಕ್ಸ್ ಬಗ್ಗೆ ಜಗತ್ತು ಉತ್ಸುಕವಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ. ಪ್ರತಿಯೊಂದು ದೇಶವೂ ಪದಕಗಳನ್ನು ಗೆಲ್ಲಲು ಬಯಸುತ್ತದೆ. ಈ ಕಾರಣಕ್ಕಾಗಿ ನಾವು ಬಹುಮಾನದ ಹಣವನ್ನು ಸಹ ಘೋಷಿಸಿದ್ದೇವೆ.

ಕ್ರೀಡಾ ಪ್ರತಿಭೆಗಳಿಗೆ ಆ ವೇದಿಕೆಯನ್ನು ನೀಡುವುದು ನಮ್ಮ ಪ್ರಯತ್ನ ಇಂದು ದೆಹಲಿ ಕ್ರೀಡಾ ವಿಶ್ವವಿದ್ಯಾಲಯದ ಉಪಕುಲಪತಿ ಕರಣ್ ಮಲ್ಲೇಶ್ವರಿ ಅವರೊಂದಿಗಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದರೆ ಕೇಜ್ರಿವಾಲ್ ಸರ್ಕಾರ ದೆಹಲಿ ಆಟಗಾರರಿಗೆ 3 ಕೋಟಿ ರೂ.ಗಳ ಬಹುಮಾನ ನೀಡಲಿದೆ ಎಂದರು. ಸಿಸೋಡಿಯಾ ಅವರ ಟ್ವೀಟ್ ಅನ್ನು ರಿಟ್ವೀಟ್ ಮಾಡಿದ ಸಿಎಂ ಅರವಿಂದ್ ಕೇಜ್ರಿವಾಲ್, ದೆಹಲಿ ಕ್ರೀಡಾ ಪ್ರತಿಭೆಗಳಿಗೆ ಆ ವೇದಿಕೆಯನ್ನು ನೀಡುವುದು ನಮ್ಮ ಪ್ರಯತ್ನ. ಜೊತಗೆ ಇಲ್ಲಿ ಅವರಿಗೆ ಸೌಲಭ್ಯಗಳು ಮತ್ತು ಅವಕಾಶಗಳ ಕೊರತೆಯಿಲ್ಲ ಎಂದು ಬರೆದಿದ್ದಾರೆ. ನಮ್ಮೊಳಗಿನ ಅನೇಕ ಪ್ರತಿಭೆಗಳಿಂದ ಭವಿಷ್ಯದಲ್ಲಿ ಒಲಿಂಪಿಕ್ ಪದಕಗಳನ್ನು ಗೆಲ್ಲುವ ಮೂಲಕ ಭಾರತವು ಪ್ರಪಂಚದಾದ್ಯಂತ ಹೆಸರು ಮಾಡುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!