AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಟೋಕಿಯೋ ತಲುಪಿದ ಭಾರತದ ಮೊದಲ ತಂಡ; 54 ಅಥ್ಲೀಟ್​ಗಳಿಗೆ ಶುಭ ಹಾರೈಸಿದ ಅನುರಾಗ್ ಠಾಕೂರ್

Tokyo Olympics: 8 ಕ್ರೀಡೆಗಳ ಅಂದರೆ ಬ್ಯಾಡ್ಮಿಂಟನ್, ಬಿಲ್ಲುಗಾರಿಕೆ, ಹಾಕಿ, ಜುಡೋ, ಈಜು, ಭಾರ ಎತ್ತುವ ಸ್ಪರ್ಧೆ, ಜಿಮ್ನಾಸ್ಟಿಕ್ಸ್ ಮತ್ತು ಟೆಬಲ್ ಟೆನಿಸ್ ಗೆ ಸಂಬಂಧಿಸಿದ ಅಥ್ಲೀಟ್ ಗಳು ಮತ್ತು ಬೆಂಬಲ ಸಿಬ್ಬಂದಿ ನಿನ್ನೆ ರಾತ್ರಿ ನವದೆಹಲಿಯಿಂದ ಟೋಕಿಯೋಗೆ ಪ್ರಯಾಣ ಬೆಳೆಸಿದರು.

Tokyo Olympics: ಟೋಕಿಯೋ ತಲುಪಿದ ಭಾರತದ ಮೊದಲ ತಂಡ; 54 ಅಥ್ಲೀಟ್​ಗಳಿಗೆ ಶುಭ ಹಾರೈಸಿದ ಅನುರಾಗ್ ಠಾಕೂರ್
ಟೋಕಿಯೋ ತಲುಪಿದ ಭಾರತದ ಮೊದಲ ತಂಡ;
TV9 Web
| Edited By: |

Updated on: Jul 18, 2021 | 6:16 PM

Share

ಬಹು ನಿರೀಕ್ಷಿತ ಟೋಕಿಯೊ ಒಲಂಪಿಕ್ಸ್​ಗೆ ಭಾರತದ ಮೊದಲ ತಂಡ ಅಂದರೆ 54 ಅಥ್ಲೀಟ್​ಗಳೂ ಸೇರಿದಂತೆ 88 ಸದಸ್ಯರ ಭಾರತದ ತಂಡ ಟೋಕಿಯೋದ ನರಿಟಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ತಲುಪಿದೆ. ಕುರ್ಬೆ ನಗರದ ಪ್ರತಿನಿಧಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ತಂಡವನ್ನು ಬರಮಾಡಿಕೊಂಡಿದ್ದಾರೆ ಎಂದು ಅಲ್ಲಿನ ಉಸ್ತುವಾರಿಗಳು ಮಾಹಿತಿ ನೀಡಿದ್ದಾರೆ. ನಿನ್ನೆ ರಾತ್ರಿ ಇಂದಿರಾಗಾಂಧೀ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಯುವ ಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವ ನಿಶಿತ್ ಪ್ರಮಾಣಿಕ್ ಅವರು, ತಂಡಕ್ಕೆ ಔಪಚಾರಿಕ ಬೀಳ್ಕೊಡುಗೆ ನೀಡಿ, ಶುಭ ಕೋರಿದ್ದರು.

ಟೋಕಿಯೋ ಒಲಿಂಪಿಕ್ಸ್ ಗೆ 127 ಅಥ್ಲೀಟ್​ಗಳು 8 ಕ್ರೀಡೆಗಳ ಅಂದರೆ ಬ್ಯಾಡ್ಮಿಂಟನ್, ಬಿಲ್ಲುಗಾರಿಕೆ, ಹಾಕಿ, ಜುಡೋ, ಈಜು, ಭಾರ ಎತ್ತುವ ಸ್ಪರ್ಧೆ, ಜಿಮ್ನಾಸ್ಟಿಕ್ಸ್ ಮತ್ತು ಟೆಬಲ್ ಟೆನಿಸ್ ಗೆ ಸಂಬಂಧಿಸಿದ ಅಥ್ಲೀಟ್ ಗಳು ಮತ್ತು ಬೆಂಬಲ ಸಿಬ್ಬಂದಿ ನಿನ್ನೆ ರಾತ್ರಿ ನವದೆಹಲಿಯಿಂದ ಟೋಕಿಯೋಗೆ ಪ್ರಯಾಣ ಬೆಳೆಸಿದರು. ಟೋಕಿಯೋ ಒಲಿಂಪಿಕ್ಸ್ ಗೆ 127 ಅಥ್ಲೀಟ್ ಗಳು ಹೋಗುತ್ತಿದ್ದು, ಇದು ಒಲಿಂಪಿಕ್ಸ್ ಗೆ ತೆರಳಿದ ಭಾರತದ ಅತಿ ದೊಡ್ಡ ಕ್ರೀಡಾಪಟುಗಳ ತಂಡವಾಗಿದೆ.

ಅನುರಾಗ್ ಠಾಕೂರ್ ಶುಭ ಹಾರೈಕೆ ಭಾರತ ತಂಡದೊಂದಿಗೆ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ವೇಳೆ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಠಾಕೂರ್ ಟೋಕಿಯೋ ಒಲಿಂಪಿಕ್ಸ್ 2020 ದೇಶಕ್ಕೆ ಒಂದು ಸ್ಮರಣಾರ್ಹ ಸಂದರ್ಭವಾಗಿದೆ 135 ಕೋಟಿ ಜನರ ಶುಭ ಹಾರೈಕೆ ಪಾಲ್ಗೊಳ್ಳುತ್ತಿರುವ ಎಲ್ಲ ಕ್ರೀಡಾಪಟುಗಳ ಮೇಲಿದೆ ಎಂದರು. ಇಂತಹ ಶ್ರೇಷ್ಠ ಅವಕಾಶ ಪಡೆದ ಆಯ್ದ ಕೆಲವೇ ಕೆಲವರಲ್ಲಿ ನೀವೂ ಸೇರಿದ್ದೀರಿ, ನೀವು ಜೀವನದಲ್ಲಿ ಇನ್ನೂ ದೂರ ಸಾಗಬೇಕಾಗಿದೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಲಹೆ ಮಾಡಿರುವಂತೆ ಒತ್ತಡಕ್ಕೆ ಒಳಗಾಗದೆ ನಿಮ್ಮ ಅತ್ಯುತ್ತಮ ಪ್ರದರ್ಶನ ನೀಡಿ ಎಂದು ತಿಳಿಸಿದರು. ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸುವಾಗ ಅಥ್ಲೀಟ್ ಗಳು ಸದೃಢರಾಗಿರಬೇಕು, ಇದು ತಂತ್ರಗಾರಿಕೆ ಆಧರಿಸಿರುವಂತಹುದು ಮತ್ತು ಅಂತಿಮವಾಗಿ ಮನೋಬಲದ ಸಮರ, ಇದು ಅವರ ಪ್ರದರ್ಶನದಲ್ಲಿ ಪ್ರತಿಬಿಂಬಿತವಾಗುತ್ತದೆ ಎಂದರು.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ