AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಟೋಕಿಯೋ ತಲುಪಿದ ಭಾರತದ ಮೊದಲ ತಂಡ; 54 ಅಥ್ಲೀಟ್​ಗಳಿಗೆ ಶುಭ ಹಾರೈಸಿದ ಅನುರಾಗ್ ಠಾಕೂರ್

Tokyo Olympics: 8 ಕ್ರೀಡೆಗಳ ಅಂದರೆ ಬ್ಯಾಡ್ಮಿಂಟನ್, ಬಿಲ್ಲುಗಾರಿಕೆ, ಹಾಕಿ, ಜುಡೋ, ಈಜು, ಭಾರ ಎತ್ತುವ ಸ್ಪರ್ಧೆ, ಜಿಮ್ನಾಸ್ಟಿಕ್ಸ್ ಮತ್ತು ಟೆಬಲ್ ಟೆನಿಸ್ ಗೆ ಸಂಬಂಧಿಸಿದ ಅಥ್ಲೀಟ್ ಗಳು ಮತ್ತು ಬೆಂಬಲ ಸಿಬ್ಬಂದಿ ನಿನ್ನೆ ರಾತ್ರಿ ನವದೆಹಲಿಯಿಂದ ಟೋಕಿಯೋಗೆ ಪ್ರಯಾಣ ಬೆಳೆಸಿದರು.

Tokyo Olympics: ಟೋಕಿಯೋ ತಲುಪಿದ ಭಾರತದ ಮೊದಲ ತಂಡ; 54 ಅಥ್ಲೀಟ್​ಗಳಿಗೆ ಶುಭ ಹಾರೈಸಿದ ಅನುರಾಗ್ ಠಾಕೂರ್
ಟೋಕಿಯೋ ತಲುಪಿದ ಭಾರತದ ಮೊದಲ ತಂಡ;
TV9 Web
| Edited By: |

Updated on: Jul 18, 2021 | 6:16 PM

Share

ಬಹು ನಿರೀಕ್ಷಿತ ಟೋಕಿಯೊ ಒಲಂಪಿಕ್ಸ್​ಗೆ ಭಾರತದ ಮೊದಲ ತಂಡ ಅಂದರೆ 54 ಅಥ್ಲೀಟ್​ಗಳೂ ಸೇರಿದಂತೆ 88 ಸದಸ್ಯರ ಭಾರತದ ತಂಡ ಟೋಕಿಯೋದ ನರಿಟಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ತಲುಪಿದೆ. ಕುರ್ಬೆ ನಗರದ ಪ್ರತಿನಿಧಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ತಂಡವನ್ನು ಬರಮಾಡಿಕೊಂಡಿದ್ದಾರೆ ಎಂದು ಅಲ್ಲಿನ ಉಸ್ತುವಾರಿಗಳು ಮಾಹಿತಿ ನೀಡಿದ್ದಾರೆ. ನಿನ್ನೆ ರಾತ್ರಿ ಇಂದಿರಾಗಾಂಧೀ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಯುವ ಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವ ನಿಶಿತ್ ಪ್ರಮಾಣಿಕ್ ಅವರು, ತಂಡಕ್ಕೆ ಔಪಚಾರಿಕ ಬೀಳ್ಕೊಡುಗೆ ನೀಡಿ, ಶುಭ ಕೋರಿದ್ದರು.

ಟೋಕಿಯೋ ಒಲಿಂಪಿಕ್ಸ್ ಗೆ 127 ಅಥ್ಲೀಟ್​ಗಳು 8 ಕ್ರೀಡೆಗಳ ಅಂದರೆ ಬ್ಯಾಡ್ಮಿಂಟನ್, ಬಿಲ್ಲುಗಾರಿಕೆ, ಹಾಕಿ, ಜುಡೋ, ಈಜು, ಭಾರ ಎತ್ತುವ ಸ್ಪರ್ಧೆ, ಜಿಮ್ನಾಸ್ಟಿಕ್ಸ್ ಮತ್ತು ಟೆಬಲ್ ಟೆನಿಸ್ ಗೆ ಸಂಬಂಧಿಸಿದ ಅಥ್ಲೀಟ್ ಗಳು ಮತ್ತು ಬೆಂಬಲ ಸಿಬ್ಬಂದಿ ನಿನ್ನೆ ರಾತ್ರಿ ನವದೆಹಲಿಯಿಂದ ಟೋಕಿಯೋಗೆ ಪ್ರಯಾಣ ಬೆಳೆಸಿದರು. ಟೋಕಿಯೋ ಒಲಿಂಪಿಕ್ಸ್ ಗೆ 127 ಅಥ್ಲೀಟ್ ಗಳು ಹೋಗುತ್ತಿದ್ದು, ಇದು ಒಲಿಂಪಿಕ್ಸ್ ಗೆ ತೆರಳಿದ ಭಾರತದ ಅತಿ ದೊಡ್ಡ ಕ್ರೀಡಾಪಟುಗಳ ತಂಡವಾಗಿದೆ.

ಅನುರಾಗ್ ಠಾಕೂರ್ ಶುಭ ಹಾರೈಕೆ ಭಾರತ ತಂಡದೊಂದಿಗೆ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ವೇಳೆ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಠಾಕೂರ್ ಟೋಕಿಯೋ ಒಲಿಂಪಿಕ್ಸ್ 2020 ದೇಶಕ್ಕೆ ಒಂದು ಸ್ಮರಣಾರ್ಹ ಸಂದರ್ಭವಾಗಿದೆ 135 ಕೋಟಿ ಜನರ ಶುಭ ಹಾರೈಕೆ ಪಾಲ್ಗೊಳ್ಳುತ್ತಿರುವ ಎಲ್ಲ ಕ್ರೀಡಾಪಟುಗಳ ಮೇಲಿದೆ ಎಂದರು. ಇಂತಹ ಶ್ರೇಷ್ಠ ಅವಕಾಶ ಪಡೆದ ಆಯ್ದ ಕೆಲವೇ ಕೆಲವರಲ್ಲಿ ನೀವೂ ಸೇರಿದ್ದೀರಿ, ನೀವು ಜೀವನದಲ್ಲಿ ಇನ್ನೂ ದೂರ ಸಾಗಬೇಕಾಗಿದೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಲಹೆ ಮಾಡಿರುವಂತೆ ಒತ್ತಡಕ್ಕೆ ಒಳಗಾಗದೆ ನಿಮ್ಮ ಅತ್ಯುತ್ತಮ ಪ್ರದರ್ಶನ ನೀಡಿ ಎಂದು ತಿಳಿಸಿದರು. ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸುವಾಗ ಅಥ್ಲೀಟ್ ಗಳು ಸದೃಢರಾಗಿರಬೇಕು, ಇದು ತಂತ್ರಗಾರಿಕೆ ಆಧರಿಸಿರುವಂತಹುದು ಮತ್ತು ಅಂತಿಮವಾಗಿ ಮನೋಬಲದ ಸಮರ, ಇದು ಅವರ ಪ್ರದರ್ಶನದಲ್ಲಿ ಪ್ರತಿಬಿಂಬಿತವಾಗುತ್ತದೆ ಎಂದರು.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ