AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಟೋಕಿಯೋ ತಲುಪಿದ ಭಾರತದ ಮೊದಲ ತಂಡ; 54 ಅಥ್ಲೀಟ್​ಗಳಿಗೆ ಶುಭ ಹಾರೈಸಿದ ಅನುರಾಗ್ ಠಾಕೂರ್

Tokyo Olympics: 8 ಕ್ರೀಡೆಗಳ ಅಂದರೆ ಬ್ಯಾಡ್ಮಿಂಟನ್, ಬಿಲ್ಲುಗಾರಿಕೆ, ಹಾಕಿ, ಜುಡೋ, ಈಜು, ಭಾರ ಎತ್ತುವ ಸ್ಪರ್ಧೆ, ಜಿಮ್ನಾಸ್ಟಿಕ್ಸ್ ಮತ್ತು ಟೆಬಲ್ ಟೆನಿಸ್ ಗೆ ಸಂಬಂಧಿಸಿದ ಅಥ್ಲೀಟ್ ಗಳು ಮತ್ತು ಬೆಂಬಲ ಸಿಬ್ಬಂದಿ ನಿನ್ನೆ ರಾತ್ರಿ ನವದೆಹಲಿಯಿಂದ ಟೋಕಿಯೋಗೆ ಪ್ರಯಾಣ ಬೆಳೆಸಿದರು.

Tokyo Olympics: ಟೋಕಿಯೋ ತಲುಪಿದ ಭಾರತದ ಮೊದಲ ತಂಡ; 54 ಅಥ್ಲೀಟ್​ಗಳಿಗೆ ಶುಭ ಹಾರೈಸಿದ ಅನುರಾಗ್ ಠಾಕೂರ್
ಟೋಕಿಯೋ ತಲುಪಿದ ಭಾರತದ ಮೊದಲ ತಂಡ;
TV9 Web
| Edited By: |

Updated on: Jul 18, 2021 | 6:16 PM

Share

ಬಹು ನಿರೀಕ್ಷಿತ ಟೋಕಿಯೊ ಒಲಂಪಿಕ್ಸ್​ಗೆ ಭಾರತದ ಮೊದಲ ತಂಡ ಅಂದರೆ 54 ಅಥ್ಲೀಟ್​ಗಳೂ ಸೇರಿದಂತೆ 88 ಸದಸ್ಯರ ಭಾರತದ ತಂಡ ಟೋಕಿಯೋದ ನರಿಟಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ತಲುಪಿದೆ. ಕುರ್ಬೆ ನಗರದ ಪ್ರತಿನಿಧಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ತಂಡವನ್ನು ಬರಮಾಡಿಕೊಂಡಿದ್ದಾರೆ ಎಂದು ಅಲ್ಲಿನ ಉಸ್ತುವಾರಿಗಳು ಮಾಹಿತಿ ನೀಡಿದ್ದಾರೆ. ನಿನ್ನೆ ರಾತ್ರಿ ಇಂದಿರಾಗಾಂಧೀ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಯುವ ಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವ ನಿಶಿತ್ ಪ್ರಮಾಣಿಕ್ ಅವರು, ತಂಡಕ್ಕೆ ಔಪಚಾರಿಕ ಬೀಳ್ಕೊಡುಗೆ ನೀಡಿ, ಶುಭ ಕೋರಿದ್ದರು.

ಟೋಕಿಯೋ ಒಲಿಂಪಿಕ್ಸ್ ಗೆ 127 ಅಥ್ಲೀಟ್​ಗಳು 8 ಕ್ರೀಡೆಗಳ ಅಂದರೆ ಬ್ಯಾಡ್ಮಿಂಟನ್, ಬಿಲ್ಲುಗಾರಿಕೆ, ಹಾಕಿ, ಜುಡೋ, ಈಜು, ಭಾರ ಎತ್ತುವ ಸ್ಪರ್ಧೆ, ಜಿಮ್ನಾಸ್ಟಿಕ್ಸ್ ಮತ್ತು ಟೆಬಲ್ ಟೆನಿಸ್ ಗೆ ಸಂಬಂಧಿಸಿದ ಅಥ್ಲೀಟ್ ಗಳು ಮತ್ತು ಬೆಂಬಲ ಸಿಬ್ಬಂದಿ ನಿನ್ನೆ ರಾತ್ರಿ ನವದೆಹಲಿಯಿಂದ ಟೋಕಿಯೋಗೆ ಪ್ರಯಾಣ ಬೆಳೆಸಿದರು. ಟೋಕಿಯೋ ಒಲಿಂಪಿಕ್ಸ್ ಗೆ 127 ಅಥ್ಲೀಟ್ ಗಳು ಹೋಗುತ್ತಿದ್ದು, ಇದು ಒಲಿಂಪಿಕ್ಸ್ ಗೆ ತೆರಳಿದ ಭಾರತದ ಅತಿ ದೊಡ್ಡ ಕ್ರೀಡಾಪಟುಗಳ ತಂಡವಾಗಿದೆ.

ಅನುರಾಗ್ ಠಾಕೂರ್ ಶುಭ ಹಾರೈಕೆ ಭಾರತ ತಂಡದೊಂದಿಗೆ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ವೇಳೆ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಠಾಕೂರ್ ಟೋಕಿಯೋ ಒಲಿಂಪಿಕ್ಸ್ 2020 ದೇಶಕ್ಕೆ ಒಂದು ಸ್ಮರಣಾರ್ಹ ಸಂದರ್ಭವಾಗಿದೆ 135 ಕೋಟಿ ಜನರ ಶುಭ ಹಾರೈಕೆ ಪಾಲ್ಗೊಳ್ಳುತ್ತಿರುವ ಎಲ್ಲ ಕ್ರೀಡಾಪಟುಗಳ ಮೇಲಿದೆ ಎಂದರು. ಇಂತಹ ಶ್ರೇಷ್ಠ ಅವಕಾಶ ಪಡೆದ ಆಯ್ದ ಕೆಲವೇ ಕೆಲವರಲ್ಲಿ ನೀವೂ ಸೇರಿದ್ದೀರಿ, ನೀವು ಜೀವನದಲ್ಲಿ ಇನ್ನೂ ದೂರ ಸಾಗಬೇಕಾಗಿದೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಲಹೆ ಮಾಡಿರುವಂತೆ ಒತ್ತಡಕ್ಕೆ ಒಳಗಾಗದೆ ನಿಮ್ಮ ಅತ್ಯುತ್ತಮ ಪ್ರದರ್ಶನ ನೀಡಿ ಎಂದು ತಿಳಿಸಿದರು. ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸುವಾಗ ಅಥ್ಲೀಟ್ ಗಳು ಸದೃಢರಾಗಿರಬೇಕು, ಇದು ತಂತ್ರಗಾರಿಕೆ ಆಧರಿಸಿರುವಂತಹುದು ಮತ್ತು ಅಂತಿಮವಾಗಿ ಮನೋಬಲದ ಸಮರ, ಇದು ಅವರ ಪ್ರದರ್ಶನದಲ್ಲಿ ಪ್ರತಿಬಿಂಬಿತವಾಗುತ್ತದೆ ಎಂದರು.

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ