AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Olympics: ಒಲಂಪಿಕ್ಸ್​ನಲ್ಲಿ ಪದಕ ಗೆದ್ದವರಿಗೆ ಬಂಪರ್ ಬಹುಮಾನ ಘೋಷಿಸಿದ ತಮಿಳುನಾಡು ಸಿ.ಎಂ ಎಂ.ಕೆ.ಸ್ಟಾಲಿನ್

Tokyo Olympics: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಭಾರತೀಯ ಕ್ರೀಡಾಪಟುಗಳಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಲಾ 3 ಕೋಟಿ ರೂ. ಬೆಳ್ಳಿ ಪದಕ ವಿಜೇತರಿಗೆ 2 ಕೋಟಿ ಮತ್ತು ಕಂಚಿನ ಪದಕ ವಿಜೇತರಿಗೆ 1 ಕೋಟಿ ರೂ. ಬಹುಮಾನ ನೀಡುವುದಾಗಿ ಹೇಳಿಕೆ ನೀಡಿದ್ದಾರೆ.

Tokyo Olympics: ಒಲಂಪಿಕ್ಸ್​ನಲ್ಲಿ ಪದಕ ಗೆದ್ದವರಿಗೆ ಬಂಪರ್ ಬಹುಮಾನ ಘೋಷಿಸಿದ ತಮಿಳುನಾಡು ಸಿ.ಎಂ ಎಂ.ಕೆ.ಸ್ಟಾಲಿನ್
ತಮಿಳುನಾಡು ಸಿ.ಎಂ ಎಂ.ಕೆ.ಸ್ಟಾಲಿನ್
TV9 Web
| Edited By: |

Updated on: Jun 27, 2021 | 8:34 AM

Share

ಜುಲೈನಲ್ಲಿ ಜಪಾನ್ ರಾಜಧಾನಿ ಟೋಕಿಯೊದಲ್ಲಿ ಒಲಿಂಪಿಕ್ಸ್ ನಡೆಯಲಿದೆ. ಟೋಕಿಯೊ ಒಲಿಂಪಿಕ್ಸ್ ಜುಲೈ 23 ರಿಂದ ಪ್ರಾರಂಭವಾಗಿ ಆಗಸ್ಟ್ 8 ಕ್ಕೆ ಕೊನೆಗೊಳ್ಳುತ್ತದೆ. ಈ ಪಂದ್ಯಗಳಲ್ಲಿ ಭಾರತೀಯ ತಂಡವೂ ಭಾಗವಹಿಸಲಿದೆ. ಈ ಹಿನ್ನೆಲೆಯಲ್ಲಿ, ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಭಾರತದ ಕ್ರೀಡಾಪಟುಗಳಿಗೆ ತಮಿಳುನಾಡು ಸರ್ಕಾರ ಬಂಪರ್ ಬಹುಮಾನವನ್ನು ಘೋಷಿಸಿದೆ. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಭಾರತೀಯ ಕ್ರೀಡಾಪಟುಗಳಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತಲಾ 3 ಕೋಟಿ ರೂ. ಬೆಳ್ಳಿ ಪದಕ ವಿಜೇತರಿಗೆ 2 ಕೋಟಿ ಮತ್ತು ಕಂಚಿನ ಪದಕ ವಿಜೇತರಿಗೆ 1 ಕೋಟಿ ರೂ. ಬಹುಮಾನ ನೀಡುವುದಾಗಿ ಹೇಳಿಕೆ ನೀಡಿದ್ದಾರೆ.

ತಮಿಳುನಾಡು ಸರ್ಕಾರದ ನಿರ್ಧಾರದಿಂದ ಭಾರತೀಯ ಒಲಿಂಪಿಕ್ ತಂಡ ಉತ್ಸುಕವಾಗಿದೆ. ಭಾರತೀಯ ಕ್ರೀಡಾಪಟುಗಳು ಸೋಷಿಯಲ್ ಮೀಡಿಯಾದಲ್ಲಿ ಸಂತೋಷ ವ್ಯಕ್ತಪಡಿಸಿದ್ದಾರೆ. ಸ್ಟಾಲಿನ್ ಅವರ ನಿರ್ಧಾರವು ಹೆಚ್ಚಿನ ಆಟಗಾರರಿಗೆ ಸ್ಫೂರ್ತಿ ನೀಡುತ್ತದೆ ಎಂದು ಹಲವರು ಹೇಳುತ್ತಾರೆ. ಕೋವಿಡ್, ಲಾಕ್‌ಡೌನ್ ಮತ್ತು ತಮಿಳುನಾಡಿನ ಇತರ ವಿಷಯಗಳ ಬಗ್ಗೆಯೂ ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಅನೇಕ ಸಲಹೆಗಳನ್ನು ನೀಡಲಾಯಿತು.

ಭಾರತವನ್ನು ಕ್ರೀಡೆಯಲ್ಲಿ ಸೂಪರ್ ಪವರ್ ಮಾಡಲು ಕಿರೆನ್ ರಿಜಿಜು ಪ್ರಯತ್ನ ಕಿರೆನ್ ರಿಜಿಜು ಈಗಾಗಲೇ ಭಾರತವನ್ನು ಕ್ರೀಡಾ ಮಹಾಶಕ್ತಿಯನ್ನಾಗಿ ಮಾಡುವ ಬಗ್ಗೆ ಮಾತನಾಡಿದ್ದಾರೆ. ಜುಲೈ 23 ರಿಂದ ಪ್ರಾರಂಭವಾಗುವ ಒಲಿಂಪಿಕ್ ಕ್ರೀಡಾಕೂಟಕ್ಕೆ ಒಂದು ತಿಂಗಳ ಮೊದಲು ಆನ್‌ಲೈನ್ ಪತ್ರಿಕಾಗೋಷ್ಠಿಯಲ್ಲಿ ಅವರು, ಕ್ರಿಕೆಟ್ ಹೊರತುಪಡಿಸಿ ಭಾರತವು ಯಾವುದೇ ಕ್ರೀಡೆಯಲ್ಲಿ ಮಹಾಶಕ್ತಿಯಾಗಿರಲಿಲ್ಲ ಮತ್ತು ಐದು ದಶಕಗಳ ಹಿಂದೆ ಹಾಕಿ ಆ ಸ್ಥಾನದಲ್ಲಿತ್ತು. ನಮ್ಮದು ಅಷ್ಟು ದೊಡ್ಡ ದೇಶ ಮತ್ತು ಇಲ್ಲಿ ಪ್ರತಿಭೆಗಳ ಕೊರತೆಯಿಲ್ಲ ಆದರೆ ಒಲಿಂಪಿಕ್ಸ್‌ನಲ್ಲಿ ನಮಗೆ ಅನೇಕ ಪದಕಗಳು ಸಿಗುತ್ತಿಲ್ಲ.

ಟೋಕಿಯೊ ಒಲಿಂಪಿಕ್ಸ್‌ನ ಸಿದ್ಧತೆಗಳ ಬಗ್ಗೆ ನನಗೆ ತೃಪ್ತಿ ಇದೆ ಮತ್ತು ಆಟಗಾರರಿಗೆ ತಯಾರಿಗಾಗಿ ಉತ್ತಮ ಅವಕಾಶಗಳನ್ನು ನೀಡಲಾಗಿದೆ. ನಾಲ್ಕು ವರ್ಷಗಳಲ್ಲಿ ವಾರ್ಷಿಕ ಅಭ್ಯಾಸ ಮತ್ತು ಸ್ಪರ್ಧೆಯ ಕ್ಯಾಲೆಂಡರ್ (ಎಸಿಟಿಟಿಸಿ) ಅಡಿಯಲ್ಲಿ 1100 ಕೋಟಿ ಖರ್ಚು ಮಾಡಲಾಗಿದೆ. ನಾವು ಪೂರ್ಣ ಸಿದ್ಧತೆಯೊಂದಿಗೆ ದೊಡ್ಡ ತಂಡವನ್ನು ಕಳುಹಿಸುತ್ತಿದ್ದೇವೆ ಮತ್ತು ಪ್ರದರ್ಶನವು ಎಂದೆಂದಿಗೂ ಉತ್ತಮವಾಗಿರುತ್ತದೆ ಎಂದು ಭಾವಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: Tokyo Olympics 2021: ಕ್ರಿಕೆಟಿಗರಿಗೆ ನೀಡುವ ಬೆಂಬಲವನ್ನು ನಮ್ಮ ಒಲಿಂಪಿಕ್ಸ್ ಕ್ರೀಡಾಪಟುಗಳಿಗೂ ನೀಡಿ: ಕ್ರೀಡಾ ಸಚಿವ ಕಿರೆನ್ ರಿಜಿಜು

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು