AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo paralympics 2020: ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮರಿಯಪ್ಪನ್ ತಂಗವೇಲು ಮತ್ತು ಶರದ್ ಕುಮಾರ್

mariyappan thangavelu and sharad kumar: ಈ ಬಾರಿಯ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತ ಎರಡು ಚಿನ್ನ, ಐದು ಬೆಳ್ಳಿ ಮತ್ತು ಮೂರು ಕಂಚಿನ ಪದಕಗಳನ್ನು ಗೆದ್ದುಕೊಂಡಿದೆ.

Tokyo paralympics 2020: ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮರಿಯಪ್ಪನ್ ತಂಗವೇಲು ಮತ್ತು ಶರದ್ ಕುಮಾರ್
Tokyo paralympics 2020
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 31, 2021 | 6:07 PM

ಟೋಕಿಯೊ ಪ್ಯಾರಾಲಿಂಪಿಕ್ಸ್ (Tokyo paralympics 2020)​ ಕ್ರೀಡಾಕೂಟದ ಎತ್ತರ ಜಿಗಿತ ವಿಭಾಗದಲ್ಲಿ ಮರಿಯಪ್ಪನ್ ತಂಗವೇಲು (mariyappan thangavelu) ಮತ್ತು ಶರದ್ ಕುಮಾರ್  (sharad kumar)  ಭಾರತಕ್ಕೆ ಪದಕ ಗೆದ್ದುಕೊಟ್ಟಿದ್ದಾರೆ. ತಂಗವೇಲು ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದರೆ, ಶರದ್ ಕುಮಾರ್ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. ಈ ಮೂಲಕ ಟೋಕಿಯೊ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತದ ಒಟ್ಟು ಪದಕಗಳ ಸಂಖ್ಯೆ 10 ಕ್ಕೆ ಏರಿದೆ. ಹೈ ಜಂಪ್ ಟಿ 63 ಈವೆಂಟ್‌ನಲ್ಲಿ ತಂಗವೇಲು ದ್ವಿತೀಯ ಸ್ಥಾನ ಅಲಂಕರಿಸುವ ಮೂಲಕ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು. ರಿಯೋ ಪ್ಯಾರಾಲಿಂಪಿಕ್ಸ್ ಬಳಿಕ ಇದು ತಂಗವೇಲು ಅವರ ಎರಡನೇ ಪದಕ ಎಂಬುದು ವಿಶೇಷ. ಮರಿಯಪ್ಪನ್ ಮತ್ತು ಶರದ್ ಇಬ್ಬರೂ ತಮ್ಮ ಮೊದಲ ಪ್ರಯತ್ನದಲ್ಲಿ 1.73 ಮೀ ಮತ್ತು 1.77 ಮೀ ಯಶಸ್ವಿಯಾಗಿ ಜಿಗಿದಿದ್ದರು. ಈ ವೇಳೆ ಶರದ್ ಕುಮಾರ್ ಮುಂಚೂಣಿಯಲ್ಲಿದ್ದರು. ಆದಾಗ್ಯೂ, 1.86 ಮೀ ನಲ್ಲಿ ಮೂರು ಪ್ರಯತ್ನಗಳ ನಂತರವೂ ಶರದ್​ಗೆ ಯಶಸ್ವಿಯಾಗಿ ಜಂಪ್ ಮಾಡಲು ಸಾಧ್ಯವಾಗಲಿಲ್ಲ. ಇದರೊಂದಿಗೆ ಕಂಚಿನ ಪದಕದೊಂದಿಗೆ ಚಿನ್ನದ ರೇಸ್ ನಿಂದ ಹೊರಗುಳಿದರು.

ಇದರ ನಂತರ, ಅಮೆರಿಕದ ಗ್ರೇವ್ ಸ್ಯಾಮ್ ಮತ್ತು ಮರಿಯಪ್ಪನ್ ಮಾತ್ರ ಸ್ಪರ್ಧೆಯಲ್ಲಿದ್ದರು. ಇಬ್ಬರೂ 1.86 ಅಂಕದಲ್ಲಿ ಯಶಸ್ವಿ ಜಿಗಿತ ಪೂರೈಸಿದ್ದರು. ನಂತರ ನಡೆದ ಮೂರು ಪ್ರಯತ್ನಗಳಲ್ಲಿ ಮರಿಯಪ್ಪನ್ ವಿಫಲರಾದರು. ಮತ್ತೊಂದೆಡೆ, ಗ್ರೇವ್ ಯಶಸ್ವಿ ಜಿಗಿತದೊಂದಿಗೆ ಚಿನ್ನದ ಪದಕ ಗೆದ್ದುಕೊಂಡರು.

ಕಳೆದ ಬಾರಿಯೂ ರಿಯೋ ಒಲಿಂಪಿಕ್ಸ್‌ನಲ್ಲಿ ಭಾರತವು ಎತ್ತರ ಜಿಗಿತದಲ್ಲಿ ಎರಡು ಪದಕಗಳನ್ನು ಪಡೆದಿತ್ತು. ಆ ವೇಳೆ ಮರಿಯಪ್ಪನ್ ತಂಗವೇಲು ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು. ಜೊತೆಗೆ ವರುಣ್ ಸಿಂಗ್ ಭಾಟಿ ಕಂಚಿನ ಪದಕ ಗೆದಿದ್ದರು. ಈ ಬಾರಿ ಮರಿಯಪ್ಪನ್ ಬೆಳ್ಳಿ ಪದಕ ಗೆದ್ದರೂ ವರುಣ್ 7ನೇ ಸ್ಥಾನ ಪಡೆದು ಪದಕ ತಪ್ಪಿಸಿಕೊಂಡರು.

ಮಂಗಳವಾರ ಮುಂಜಾನೆ ನಡೆದ ಸ್ಪರ್ಧೆಯಲ್ಲಿ, ಶೂಟರ್ ಸಿಂಗರಾಜ್ ಅಧಾನಾ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಎಸ್‌ಎಫ್ 1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದಿದ್ದರು. ಈ ಬಾರಿಯ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತ ಎರಡು ಚಿನ್ನ, ಐದು ಬೆಳ್ಳಿ ಮತ್ತು ಮೂರು ಕಂಚಿನ ಪದಕಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ: IPL 2022: ಐಪಿಎಲ್ ಹೊಸ ತಂಡಗಳಿಗೆ ಮೂಲ ಬೆಲೆ ಫಿಕ್ಸ್​: ಇಷ್ಟು ಮೊತ್ತ ನೀಡಿ ಖರೀದಿಸುವವರು ಯಾರು?

ಇದನ್ನೂ ಓದಿ: Pradeep Narwal: ಪ್ರೊ ಕಬಡ್ಡಿ ಲೀಗ್​ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಪ್ರದೀಪ್ ನರ್ವಾಲ್

ಇದನ್ನೂ ಓದಿ: ವಿಶ್ವದ ಅತೀ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರು ಬಿಡುಗಡೆ

(Tokyo paralympics 2020: mariyappan thangavelu and sharad kumar won medal in high jump)

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ