AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics: ಅಪ್ಪನ ಆಸೆಯನ್ನು ಈಡೇರಿಸಿದ್ದೇನೆ; ಪದಕವನ್ನು ದಿವಂಗತ ತಂದೆಗೆ ಅರ್ಪಿಸಿದ ದೇವೇಂದ್ರ ಜಜಾರಿಯಾ

Tokyo Paralympics: ಖಂಡಿತ ಈ ಪದಕ ದೇಶವಾಸಿಗಳಿಗೆ. ಆದರೆ ನಾನು ಪ್ಯಾರಾಲಿಂಪಿಕ್ಸ್‌ನಲ್ಲಿ ಮತ್ತೊಂದು ಪದಕ ಗೆಲ್ಲಬೇಕೆಂದು ಬಯಸಿದ ನನ್ನ ದಿವಂಗತ ತಂದೆಗೆ ಅರ್ಪಿಸಲು ಬಯಸುತ್ತೇನೆ ಎಂದು ಜಜಾರಿಯಾ ತಿಳಿಸಿದರು.

Tokyo Paralympics: ಅಪ್ಪನ ಆಸೆಯನ್ನು ಈಡೇರಿಸಿದ್ದೇನೆ; ಪದಕವನ್ನು ದಿವಂಗತ ತಂದೆಗೆ ಅರ್ಪಿಸಿದ ದೇವೇಂದ್ರ ಜಜಾರಿಯಾ
ದೇವೇಂದ್ರ ಜಜಾರಿಯಾ
TV9 Web
| Edited By: |

Updated on: Aug 30, 2021 | 6:01 PM

Share

ಟೋಕಿಯೊ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ದೇವೇಂದ್ರ ಜಜಾರಿಯಾ ಹ್ಯಾಟ್ರಿಕ್ ಚಿನ್ನದ ಪದಕವನ್ನು ಕಳೆದುಕೊಂಡಿರಬಹುದು. ಆದರೆ ಜಾವೆಲಿನ್ ಥ್ರೋನಲ್ಲಿ ಅವರ ಬೆಳ್ಳಿ ಪದಕ ಖಂಡಿತವಾಗಿಯೂ ಅವರನ್ನು ಭಾರತದ ಅತ್ಯಂತ ಯಶಸ್ವಿ ಒಲಿಂಪಿಯನ್ ಆಗಿ ಮಾಡಿದೆ. ಇಲ್ಲಿಯವರೆಗೆ ಭಾರತದಲ್ಲಿ ಯಾವುದೇ ಆಟಗಾರ ಒಲಿಂಪಿಕ್ ಅಥವಾ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಮೂರು ಪದಕಗಳನ್ನು ಗೆದ್ದಿಲ್ಲ. ದೇವೇಂದ್ರ ಈ ಪದಕವನ್ನು ತನ್ನ ದಿವಂಗತ ತಂದೆಗೆ ಅರ್ಪಿಸಿದರು.

ದೇವೇಂದ್ರ ಕಳೆದ ವರ್ಷ ತಂದೆಯನ್ನು ಕಳೆದುಕೊಂಡರು ದೇವೇಂದ್ರ ಅವರು ಸಾಯಿ ಕೇಂದ್ರದಲ್ಲಿ ಅಭ್ಯಾಸ ಮಾಡುತ್ತಿದ್ದಾಗ ಅವರ ತಂದೆಗೆ ಕ್ಯಾನ್ಸರ್ ಇದೆ ಎಂದು ತಿಳಿಯಿತು. ಈ ವಿಷಯ ತಿಳಿದ ತಕ್ಷಣ ದೇವೇಂದ್ರ ಮನೆಗೆ ಹೋದರು. ಆದರೆ, ದೇವೇಂದ್ರ ಅವರ ತಂದೆ ಅವನನ್ನು, ಮಗ ಮತ್ತೊಮ್ಮೆ ದೇಶಕ್ಕಾಗಿ ಪದಕ ತರಬೇಕೆಂದು ಬಯಸಿ ವಾಪಸ್ ಕಳುಹಿಸಿದ್ದರು.

ಈ ಬಗ್ಗೆ ಮಾತನಾಡಿದ ದೇವೇಂದ್ರ, ಖಂಡಿತ ಈ ಪದಕ ದೇಶವಾಸಿಗಳಿಗೆ. ಆದರೆ ನಾನು ಪ್ಯಾರಾಲಿಂಪಿಕ್ಸ್‌ನಲ್ಲಿ ಮತ್ತೊಂದು ಪದಕ ಗೆಲ್ಲಬೇಕೆಂದು ಬಯಸಿದ ನನ್ನ ದಿವಂಗತ ತಂದೆಗೆ ಅರ್ಪಿಸಲು ಬಯಸುತ್ತೇನೆ ಎಂದು ಜಜಾರಿಯಾ ತಿಳಿಸಿದರು. ನನ್ನ ತಂದೆ ಪ್ರಯತ್ನ ಮಾಡದಿದ್ದರೆ, ನಾನು ಇಲ್ಲಿ ಇರುತ್ತಿರಲಿಲ್ಲ. ಅವರು ನನಗೆ ಕಠಿಣ ತರಬೇತಿ ನೀಡಲು ಮತ್ತು ಇನ್ನೊಂದು ಪದಕ ಗೆಲ್ಲಲು ಸ್ಫೂರ್ತಿ ನೀಡಿದರು. ಇಂದು ನಾನು ಅವರ ಕನಸನ್ನು ಈಡೇರಿಸಿದ್ದಕ್ಕೆ ನನಗೆ ಸಂತೋಷವಾಗಿದೆ ಎಂದರು.

ಹ್ಯಾಟ್ರಿಕ್ ಪದಕ ಗೆದ್ದಿದ್ದಾರೆ ನಲವತ್ತು ವರ್ಷದ ಜಜಾರಿಯಾ ಈಗಾಗಲೇ ಭಾರತದ ಶ್ರೇಷ್ಠ ಪ್ಯಾರಾಲಿಂಪಿಯನ್ ಆಗಿದ್ದು, 2004 ಮತ್ತು 2016 ರಲ್ಲಿ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಅವರು ಸೋಮವಾರ 64.43 ಮೀಟರ್ ಎಸೆದು ಜಾವಲಿನ್ ಥ್ರೋ ಎಫ್ 46 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದರು. ಜಜಾರಿಯಾ ಎಂಟು ವರ್ಷದವನಿದ್ದಾಗ, ಮರವನ್ನು ಹತ್ತುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ, ಅವರು ತನ್ನ ಎಡಗೈಯನ್ನು ಕಳೆದುಕೊಂಡರು.

Follow Us
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!