ಭಾರತದಲ್ಲಿ ಫುಟ್ಬಾಲ್ ಕ್ರಾಂತಿಗೆ ಜರ್ಮನಿಯಲ್ಲಿ ನಾಂದಿ ಹಾಡಿದ ಟಿವಿ9 CEO ಬರುಣ್ ದಾಸ್

ಭಾರತದಲ್ಲಿ ಫುಟ್ಬಾಲ್ ಬೆಳವಣಿಗೆಗಾಗಿ ಟಿವಿ9 ಹಮ್ಮಿಕೊಂಡಿರುವ ಇಂಡಿಯಾಸ್ ಟೈಗರ್ಸ್ & ಟೈಗ್ರೆಸಸ್’ ಟ್ಯಾಲೆಂಟ್ ಹಂಟ್ ಈವೆಂಟ್ ಹಾಗೂ ಭಾರತದಲ್ಲಿ ಫುಟ್ಬಾಲ್ ಅನ್ನು ಜನಪ್ರಿಯಗೊಳಿಸುವ ಸಲುವಾಗಿ ‘ಫುಟ್ಬಾಲ್ 9’ ಹೆಸರಿನ ಡಿಜಿಟಲ್ ವೇದಿಕೆ ಪ್ರಾರಂಭಿಸುವುದಾಗಿ ಟಿವಿ9 ವಾಹಿನಿಯ ಎಂಡಿ ಮತ್ತು ಸಿಇಒ ಬರುಣ್ ದಾಸ್ ಹೇಳಿದರು.

ಭಾರತದಲ್ಲಿ ಫುಟ್ಬಾಲ್ ಕ್ರಾಂತಿಗೆ ಜರ್ಮನಿಯಲ್ಲಿ ನಾಂದಿ ಹಾಡಿದ ಟಿವಿ9 CEO ಬರುಣ್ ದಾಸ್
ಬರುಣ್ ದಾಸ್
Follow us
| Updated By: Digi Tech Desk

Updated on:Jun 01, 2024 | 5:24 PM

ಜರ್ಮನಿಯ ಬರ್ಲಿನ್‌ನಲ್ಲಿ ನಡೆದ ಡಿಎಫ್‌ಬಿ-ಪೋಕಲ್ ಫೈನಲ್ (DFB-Pokal final) ಪಂದ್ಯದಲ್ಲಿ ಭಾಗವಹಿಸಿದ್ದ ದೇಶದ ಅತಿದೊಡ್ಡ ನ್ಯೂಸ್ ನೆಟ್‌ವರ್ಕ್ ಟಿವಿ9 ವಾಹಿನಿಯ ಎಂಡಿ ಮತ್ತು ಸಿಇಒ ಬರುಣ್ ದಾಸ್ (MD & CEO Mr Barun Das) ಹಲವು ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು. ಇದರಲ್ಲಿ ಪ್ರಮುಖವಾಗಿ ಭಾರತದಲ್ಲಿ ಫುಟ್ಬಾಲ್ (Football) ಬೆಳವಣಿಗೆಗಾಗಿ ಟಿವಿ9 ಹಮ್ಮಿಕೊಂಡಿರುವ ಇಂಡಿಯಾಸ್ ಟೈಗರ್ಸ್ & ಟೈಗ್ರೆಸಸ್’ ಟ್ಯಾಲೆಂಟ್ ಹಂಟ್ ಈವೆಂಟ್ ಹಾಗೂ ಭಾರತದಲ್ಲಿ ಫುಟ್ಬಾಲ್ ಅನ್ನು ಜನಪ್ರಿಯಗೊಳಿಸುವ ಸಲುವಾಗಿ ‘ಫುಟ್ಬಾಲ್ 9’ ಹೆಸರಿನ ಡಿಜಿಟಲ್ ವೇದಿಕೆ ಪ್ರಾರಂಭಿಸುವುದಾಗಿ ಹೇಳಿದರು. ಇದಲ್ಲದೆ, ಟಿವಿ9 ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆಯ ಮೊದಲ ಅಂತರರಾಷ್ಟ್ರೀಯ ಆವೃತ್ತಿಯನ್ನು ಈ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳುಗಳಲ್ಲಿ ಜರ್ಮನಿಯಲ್ಲಿ ಆಯೋಜಿಸಲಾಗುವುದು ಎಂದರು.

ಯುರೋಪಿಯನ್ ಫುಟ್‌ಬಾಲ್ ತಜ್ಞರಿಂದ ತರಬೇತಿ

ಇಂಡಿಯಾಸ್ ಟೈಗರ್ಸ್ & ಟೈಗ್ರೆಸಸ್’ ಟ್ಯಾಲೆಂಟ್ ಹಂಟ್ ಈವೆಂಟ್​ಗಾಗಿ ಟಿವಿ9, ಯುರೋಪಿನ ಅಗ್ರ ಫುಟ್‌ಬಾಲ್ ಲೀಗ್ ಬುಂಡೆಸ್ಲಿಗಾದೊಂದಿಗೆ ಕೈಜೋಡಿಸಿದೆ. ಇದರಡಿಯಲ್ಲಿ ದೇಶಾದ್ಯಂತ 14 ವರ್ಷದೊಳಗಿನ ಫುಟ್ಬಾಲ್ ಪ್ರತಿಭೆಗಳನ್ನು ಆಯ್ಕೆ ಮಾಡಲಾಗುತ್ತದೆ. ಇದರಲ್ಲಿ 20 ಹುಡುಗರು ಮತ್ತು 20 ಹುಡುಗಿಯರನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಈ ಶಾರ್ಟ್‌ಲಿಸ್ಟ್ ಮಾಡಿದ ಮಕ್ಕಳಿಗೆ ಜರ್ಮನಿ ಮತ್ತು ಆಸ್ಟ್ರಿಯಾದಲ್ಲಿ ಯುರೋಪಿಯನ್ ಫುಟ್‌ಬಾಲ್ ತಜ್ಞರು ತರಬೇತಿ ನೀಡಲಿದ್ದಾರೆ.

ಉಭಯ ದೇಶಗಳ ಸಂಬಂಧ ಇನ್ನಷ್ಟು ಬಲಗೊಳ್ಳಲಿದೆ; ಬರುಣ್ ದಾಸ್

ಜರ್ಮನಿಯಲ್ಲಿ ನಡೆದ ಈ ಸಮಾರಂಭದಲ್ಲಿ ಮಾತನಾಡಿದ ಬರುಣ್ ದಾಸ್, ‘ನಮ್ಮ ದೇಶದ ಒಬ್ಬ ಫುಟ್‌ಬಾಲ್ ಆಟಗಾರನಿಗೂ ವಿಶ್ವದ ಅಗ್ರ ಫುಟ್‌ಬಾಲ್ ಲೀಗ್‌ನಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಅನೇಕ ಪ್ರಯತ್ನಗಳ ಹೊರತಾಗಿಯೂ, ಭಾರತ ಇನ್ನೂ ಫಿಫಾ ಫುಟ್ಬಾಲ್ ವಿಶ್ವಕಪ್‌ಗೆ ಅರ್ಹತೆ ಪಡೆಯಲು ವಿಫಲವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಈ ಕನಸನ್ನು ನನಸಾಗಿಸಲು ಟಿವಿ9 ಜರ್ಮನ್ ಫುಟ್ಬಾಲ್ ಲೀಗ್ ಬುಂಡೆಸ್ಲಿಗಾ ಸಹಯೋಗದೊಂದಿಗೆ ನಿರ್ಣಾಯಕ ಹೆಜ್ಜೆ ಇಟ್ಟಿದೆ. ಇದು ಕೇವಲ ಫುಟ್‌ಬಾಲ್ ಮಾತ್ರವಲ್ಲದೆ ಭಾರತ ಮತ್ತು ಜರ್ಮನಿ ನಡುವಿನ ಸಾಂಸ್ಕೃತಿಕ ಮತ್ತು ಆರ್ಥಿಕ ಸಂಬಂಧಗಳನ್ನು ಬಲಪಡಿಸಲಿದೆ’ ಎಂದರು.

ಮುಂದುವರೆದು ಮಾತನಾಡಿದ ಅವರು, ‘ನಾವು 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರಿಗಾಗಿ ಫುಟ್‌ಬಾಲ್‌ನಲ್ಲಿ ವಿಶ್ವದ ಅತಿದೊಡ್ಡ ಪ್ರತಿಭೆ ಹುಡುಕಾಟವನ್ನು ಪ್ರಾರಂಭಿಸಿದ್ದೇವೆ. ಜರ್ಮನಿಯಲ್ಲಿನ ಅತಿದೊಡ್ಡ ಕ್ರೀಡಾಕೂಟದಲ್ಲಿ ನಮ್ಮ ಡಿಜಿಟಲ್ ಪ್ಲಾಟ್‌ಫಾರ್ಮ್ ‘ಫುಟ್‌ಬಾಲ್ 9’ ಅನ್ನು ಪ್ರಾರಂಭಿಸಲು ನಮಗೆ ಸಂತೋಷವಾಗಿದೆ. ಬರ್ಲಿನ್‌ನ ಒಲಂಪಿಕ್ ಸ್ಟೇಡಿಯಂನಲ್ಲಿ ಡಿಎಫ್‌ಬಿ-ಪೋಕಲ್ ಫೈನಲ್ ಪಂದ್ಯವು ನಮ್ಮ ಮಹತ್ವಾಕಾಂಕ್ಷೆಗೆ ಅರ್ಹವಾದ ಅದ್ಭುತ ಗೌರವವಾಗಿದೆ. ಇಂಡಿಯಾಸ್ ಟೈಗರ್ಸ್ & ಟೈಗ್ರೆಸಸ್’ ಟ್ಯಾಲೆಂಟ್ ಹಂಟ್ ಯಶಸ್ಸಿನಲ್ಲಿ DFB ಅಸೋಸಿಯೇಷನ್ ಕೊಡುಗೆ ​​ಬಹಳ ಪ್ರಮುಖವಾಗಿದೆ. ಇದರೊಂದಿಗೆ ಭಾರತವು ಫುಟ್‌ಬಾಲ್‌ನ ಅಗ್ರ ರಾಷ್ಟ್ರಗಳಲ್ಲಿ ಒಂದಾಗುವುದರಲ್ಲಿ ನನಗೆ ಯಾವುದೇ ಸಂದೇಹವಿಲ್ಲ’ ಎಂದರು.

ಪ್ರತಿಭೆ ವಿನಿಮಯಕ್ಕೆ ಸಹಕಾರಿ

ಜರ್ಮನಿಯಲ್ಲಿರುವ ಭಾರತೀಯ ರಾಯಭಾರಿ ಪರ್ವತನೇನಿ ಹರೀಶ್ ಮಾತನಾಡಿ, ‘ಭಾರತ ಮತ್ತು ಜರ್ಮನಿ ಈಗಾಗಲೇ ಕಾರ್ಯತಂತ್ರದ ಪಾಲುದಾರರಾಗಿದ್ದಾರೆ. ಜರ್ಮನಿ ಯುರೋಪ್‌ನಲ್ಲಿ ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರ. ಆದರೆ, ಜರ್ಮನಿಯಲ್ಲಿ ನುರಿತ ಕೆಲಸಗಾರರ ಕೊರತೆಯಿಂದಾಗಿ, ವಿಶೇಷವಾಗಿ ಭಾರತದ ವಿದ್ಯಾರ್ಥಿಗಳ ಸಹಾಯದಿಂದ ದ್ವಿಪಕ್ಷೀಯ ವ್ಯಾಪಾರ, ತಂತ್ರಜ್ಞಾನ, ಪ್ರತಿಭೆಯನ್ನು ಹೆಚ್ಚಿಸಲು ದೊಡ್ಡ ಅವಕಾಶವಿದೆ. ಉಭಯ ದೇಶಗಳನ್ನು ಒಗ್ಗೂಡಿಸಲು ಟಿವಿ9 ಮಾಡುತ್ತಿರುವ ಕಾರ್ಯಕ್ರಮಗಳು ನನಗೆ ಸಂತಸ ತಂದಿದೆ’ ಎಂದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Sat, 1 June 24

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್