AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni ಕೆಲ ಕ್ಷಣಗಳ ಕಾಲ ಎಂಎಸ್ ಧೋನಿ ಟ್ವಿಟರ್ ಖಾತೆಯಿಂದ ಮಾಯವಾಗಿದ್ದ ಬ್ಲೂ ಟಿಕ್ ಮತ್ತೆ ಬಂತು

Blue Tick: ಅಧಿಕೃತ ಟ್ವಿಟರ್ ಖಾತೆಗಿರುವ ಬ್ಲೂ ಬ್ಯಾಡ್ಜ್ ತೆಗೆದು ಹಾಕಿದ್ದರ ಬೆನ್ನಲ್ಲೇ ನೆಟ್ಟಿಗರು ಧೋನಿ ಪರ ವಾದಿಸಿದ್ದಲ್ಲದೆ ಹಲವಾರು ಮೀಮ್​​ಗಳನ್ನು ಶೇರ್ ಮಾಡಿದ್ದಾರೆ.

MS Dhoni ಕೆಲ ಕ್ಷಣಗಳ ಕಾಲ ಎಂಎಸ್ ಧೋನಿ ಟ್ವಿಟರ್ ಖಾತೆಯಿಂದ ಮಾಯವಾಗಿದ್ದ ಬ್ಲೂ ಟಿಕ್ ಮತ್ತೆ ಬಂತು
ಎಂಎಸ್ ಧೋನಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 06, 2021 | 5:34 PM

Share

ದೆಹಲಿ: ಅಮೆರಿಕದ ಮೈಕ್ರೋ ಬ್ಲಾಗಿಂಗ್ ಮತ್ತು ಸಾಮಾಜಿಕ ಜಾಲತಾಣ ಟ್ವಿಟರ್, ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರ ಟ್ವಿಟರ್ ಖಾತೆಯಿಂದ ಕೆಲವು ಕ್ಷಣಗಳ ಕಾಲ ನೀಲಿ ಟಿಕ್ ಮಾಯವಾಗಿದ್ದು  ಮತ್ತೆ ಬಂದಿದೆ . ಧೋನಿ ಕೊನೆಯದಾಗಿ ಜನವರಿ 8, 2021 ರಂದು ಟ್ವೀಟ್ ಮಾಡಿದ್ದರು.

ಅಧಿಕೃತ ಟ್ವಿಟರ್ ಖಾತೆಗಿರುವ ಬ್ಲೂ ಬ್ಯಾಡ್ಜ್ ತೆಗೆದು ಹಾಕಿದ್ದರ ಬೆನ್ನಲ್ಲೇ ನೆಟ್ಟಿಗರು ಧೋನಿ ಪರ ವಾದಿಸಿದ್ದಲ್ಲದೆ ಹಲವಾರು ಮೀಮ್​​ಗಳನ್ನು ಶೇರ್ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮ ಖಾತೆ ಅಧಿಕೃತ ಎಂದು ಟ್ವಿಟರ್ ಹ್ಯಾಂಡಲ್‌ನಲ್ಲಿರುವ ನೀಲಿ ಟಿಕ್ ಸೂಚಿಸುತ್ತದೆ. ನೀಲಿ ಬ್ಯಾಡ್ಜ್ ಪಡೆಯುವುದಕ್ಕಾಗಿ ವ್ಯಕ್ತಿಯ ಖಾತೆಯು ಅಧಿಕೃತವಾಗಿರಬೇಕು, ಗಮನಾರ್ಹವಾಗಿರಬೇಕು ಮತ್ತು ಸಕ್ರಿಯವಾಗಿರಬೇಕು ಎಂದು ಟ್ವಿಟರ್ ಹೇಳುತ್ತದೆ.

ಆಗಸ್ಟ್ 15, 2020 ರಂದು ಅಂತರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತರಾದ ನಂತರ, ಧೋನಿ ಈಗ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮಾತ್ರ ಆಡುತ್ತಿದ್ದಾರೆ. ಯುಎಇ ಐಪಿಎಲ್ ಸೆಪ್ಟೆಂಬರ್‌ನಲ್ಲಿ ಪುನರಾರಂಭಗೊಂಡಾಗ ಮತ್ತೆ ಆಡಲಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಉಳಿದ ಐಪಿಎಲ್ ವೇಳಾಪಟ್ಟಿಯನ್ನು ಪ್ರಕಟಿಸಿದೆ. 27 ದಿನಗಳ ಅವಧಿಯಲ್ಲಿ ಒಟ್ಟು 31 ಪಂದ್ಯಗಳು ನಡೆಯಲಿವೆ.

ಐಪಿಎಲ್ 2021 ಅನ್ನು ಪುನರಾರಂಭವಾದರೆ ಮುಂಬೈ ಇಂಡಿಯನ್ಸ್ ಸೆಪ್ಟೆಂಬರ್ 19 ರಂದು ಸಿಎಸ್‌ಕೆ ವಿರುದ್ಧ ಕಣಕ್ಕಿಳಿಯಲಿದೆ. ಲೀಗ್ ಹಂತದ ಅಂತಿಮ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ಅಕ್ಟೋಬರ್ 8 ರಂದು ನಡೆಯಲಿದೆ.

ಅಕ್ಟೋಬರ್ 10 ರಂದು 1 ನೇ ಕ್ವಾಲಿಫೈಯರ್ ದುಬೈನಲ್ಲಿ ನಡೆಯಲಿದೆ. ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ 2 ಶಾರ್ಜಾದಲ್ಲಿ ಕ್ರಮವಾಗಿ ಅಕ್ಟೋಬರ್ 11 ಮತ್ತು 13 ರಂದು ನಡೆಯಲಿದ್ದು, ಈ ವರ್ಷ ಅಕ್ಟೋಬರ್ 15 ರಂದು ಐಪಿಎಲ್ 2021 ರ ಫೈನಲ್ ಪಂದ್ಯವನ್ನು ದುಬೈ ಆಯೋಜಿಸಲಿದೆ.

ಇದನ್ನೂ ಓದಿ:  MS Dhoni: ಒಲಿಂಪಿಕ್ಸ್‌ನಲ್ಲಿ ಹಾಕಿ ತಂಡದ ಐತಿಹಾಸಿಕ ಸಾಧನೆ: 7 ವರ್ಷಗಳ ನಂತರ ವೈರಲ್ ಆಯ್ತು ಧೋನಿಯ ಅದೊಂದು ಟ್ವೀಟ್

(Twitter removes blue verified badge from Cricketer MS Dhoni’s account and restored)

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ