AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಟಿ20 ವಿಶ್ವಕಪ್​ ಗೆಲ್ಲದಿದ್ದರೆ, ರವಿ ಶಾಸ್ತ್ರಿ ಹೆಡ್​ ಕೋಚ್ ಸ್ಥಾನದಲ್ಲಿ ಮುಂದುವರಿಯುವುದು ಕಷ್ಟ: ರಿತೀಂದರ್ ಸಿಂಗ್ ಸೋಧಿ

ಶಾಸ್ತ್ರಿ ಅವರ ಅವಧಿಯಲ್ಲಿ ಟೀಮ್ ಇಂಡಿಯಾ ಕ್ರಿಕೆಟ್ ವಿಶ್ವದ ಉತ್ತುಂಗ ತಲುಪಿದ್ದು ಸುಳ್ಳಲ್ಲ. ಅಸ್ಟ್ರೇಲಿಯಾವನ್ನು ಅದರ ಹಿತ್ತಲಲ್ಲೇ ಸೋಲಿಸಿವುದು ಸಾಮಾನ್ಯ ಸಾಧನೆಯೇನಲ್ಲ. ಹಾಗೆಯೇ, ಭಾರತ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್ ಸಹ ತಲುಪಿತು.

ಭಾರತ ಟಿ20 ವಿಶ್ವಕಪ್​ ಗೆಲ್ಲದಿದ್ದರೆ, ರವಿ ಶಾಸ್ತ್ರಿ ಹೆಡ್​ ಕೋಚ್ ಸ್ಥಾನದಲ್ಲಿ ಮುಂದುವರಿಯುವುದು ಕಷ್ಟ: ರಿತೀಂದರ್ ಸಿಂಗ್ ಸೋಧಿ
ರವಿ ಶಾಸ್ತ್ರಿ
TV9 Web
| Edited By: |

Updated on: Jul 12, 2021 | 7:39 PM

Share

ಟೀಮ್ ಇಂಡಿಯಾದ ಹೆಡ್​ ಕೋಚ್ ರವಿ ಶಾಸ್ತ್ರಿ ಅಭಿಮಾನಿಗಳು ಅವರನ್ನು ಎಷ್ಟೇ ಸಮರ್ಥಿಸಿಕೊಂಡರೂ ಭಾರತೀಯ ಕ್ರಿಕೆಟ್ ನಿಂಯತ್ರಣ ಮಂಡಳಿ ಅವರನ್ನು ಮತ್ತೊಂದು ಅವಧಿಗೆ ವಿಸ್ತರಿಸುವುದು ದುಸ್ತರ ಎನಿಸುತ್ತಿದೆ. ಭಾರತವೇನಾದರೂ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಗೆದ್ದಿದ್ದರೆ ಅವರಿಗೆ ವಿಸ್ತರಣೆ ಸಿಗುವುದು ನಿಶ್ಚಿತವಾಗಿತ್ತು. ಮುಂಬರುವ ಟಿ20 ವಿಶ್ವಕಪ್ ನಂತರ ಶಾಸ್ತ್ರಿಯ ಟೆನ್ಯೂರ್ ಕೊನೆಗೊಳ್ಳಲಿದೆ. ಈಗ ಶ್ರೀಲಂಕಾ ಪ್ರವಾಸದಲ್ಲಿರುವ ಭಾರತದ ಮತ್ತೊಂದು ಟೀಮಿನ ಕೋಚ್​ ಆಗಿರುವ ಮಾಜಿ ಶ್ರೇಷ್ಠ ಆಟಗಾರ ರಾಹಲ್ ದ್ರಾವಿಡ್​ ಅವರನ್ನು ಸೀನಿಯರ್ ಟೀಮಿನ್ ಕೋಚ್​ ಆಗಿ ನೇಮಕ ಮಾಡಬೇಕು ಎನ್ನುವ ಕೂಗು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ವಿಶ್ವಕಪ್​ ನಂತರ ರವಿ ಶಾಸ್ತ್ರಿಗೆ ಗುಡ್​ ಬೈ ಹೇಳುವ ಗುಮಾನಿ ದಟ್ಟವಾಗುತ್ತಿದೆ.

ಶಾಸ್ತ್ರಿ ಅವರ ಅವಧಿಯಲ್ಲಿ ಟೀಮ್ ಇಂಡಿಯಾ ಕ್ರಿಕೆಟ್ ವಿಶ್ವದ ಉತ್ತುಂಗ ತಲುಪಿದ್ದು ಸುಳ್ಳಲ್ಲ. ಅಸ್ಟ್ರೇಲಿಯಾವನ್ನು ಅದರ ಹಿತ್ತಲಲ್ಲೇ ಸೋಲಿಸಿವುದು ಸಾಮಾನ್ಯ ಸಾಧನೆಯೇನಲ್ಲ. ಹಾಗೆಯೇ, ಭಾರತ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್ ಸಹ ತಲುಪಿತು. ಆದರೆ ಗಮನಿಸಬೇಕಾದ ಅಂಶವೆಂದರೆ, ಇದೇ ಅವಧಿಯಲ್ಲಿ ಭಾರತ ಐಸಿಸಿ ಪ್ರಮುಖ ಟೂರ್ನಿಗಳನ್ನು ಗೆಲ್ಲಲು ವಿಫಲವಾಯಿತು. ಶಾಸ್ತ್ರಿ ಮತ್ತು ಟೀಮ್ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ನಡುವೆ ಉತ್ತಮ ಹೊಂದಾಣಿಕೆ ಇರುವುದರಿಂದ ಕೊಹ್ಲಿ ಮತ್ತೊಂದು ಅವಧಿ ವಿಸ್ತರಣೆಗೆ ಆಗ್ರಹಿಸಿದರೆ ಆಶ್ಚರ್ಯವೇನೂ ಇಲ್ಲ.

ಭಾರತದ ಮಾಜಿ ಆಲ್​ರೌಂಡರ್, ರಿತೀಂದರ್ ಸಿಂಗ್ ಸೋಧಿ ಅವರು, ಭಾರತವೇನಾದರೂ, ಯುಎಈಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ ಗೆದ್ದರೆ, ಶಾಸ್ತ್ರಿ, ತಮ್ಮ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.

‘ಟೀಮಿನ ಹೆಡ್​ ಕೋಚ್ ಆಗಿ ರವಿ ಭಾಯ್ ಅವರ ಸಾಧನೆ ಅಧ್ಬುತವಾಗಿದೆ. ಅವರು ಒಂದು ಐಸಿಸಿ ಪ್ ಗೆದ್ದುಕೊಳಿ ಎಂದು ಭಾರತೋಯರೆಲ್ಲ ಕಾಯುತ್ತಿರಿವುದು ನಿಜ. ಅದು ಸಾಧ್ಯವಾದರೆ ಅವರ ಗುರಿ ಈಡೇರಿದಂತಾಗುತ್ತದೆ. ಆದರೆ, ನಾವು ಯೋಚಿಸಬೇಕಿರುವ ಸಂಗತಿಯೆಂದರೆ, ರಾಹುಲ್ ಭಾಯ್​ ಅವರನ್ನು ಭಾರತದ ಮತ್ತೊಂದು ಟೀಮಿನ ಕೋಚ್ ನೇಮಕ ಮಾಡಿ ಶ್ರೀಲಂಕಾ ಕಳಿಸಲಾಗಿದೆ. ಹಾಗೆಯೇ ಇತ್ತೀಚಿಗೆ ನಡೆದ ಇನ್ನೊಂದು ಬೆಳವಣಿಗೆಯನ್ನು ನಾವು ಗಮನಿಸಬೇಕು. ಇಂಗ್ಲೆಂಡ್​ ಪ್ರವಾಸದಲ್ಲ್ಲಿರುವ ಟೀಮ್ ಇಂಡಿಯಾದ ಆರಂಭ ಆಟಗಾರ ಶುಭ್ಮನ್ ಗಿಲ್ ಗಾಯಗೊಂಡಿರುವುದರಿಂದ ಅವರಿಗೆ ಬದಲೀ ಆಟಗಾರನಾಗಿ ಮತ್ತೊಬ್ಬ ಓಪನರ್​ನನ್ನು ಕಳಿಸಬೇಕೆಂದು ಟೀಮ್ ಮ್ಯಾನೇಜ್ಮೆಂಟ್​ ಮಾಡಿರುವ ಮನವಿಯನ್ನು ಬಿಸಿಸಿಐ ಸಾರಾ ಸಗಟು ತಿರಸ್ಕರಿಸಿದೆ. ಇದನ್ನು ನಾವು ಆರ್ಥಮಾಡಿಕೊಳ್ಳಬೇಕಿದೆ. ನನ್ನನ್ನು ಕೇಳುವುದಾದರೆ, ರವಿ ಭಾಯ್​ ಮೇಲೆ ಖಂಡಿತವಾಗಿಯೂ ಒತ್ತಡವಿದೆ,’ ಎಂದು ಸೋಧಿ ಹೇಳಿದ್ದಾರೆ

ಪ್ರಸ್ತುತವಾಗಿ ಶಾಸ್ತ್ರಿ ಇಂಗ್ಲೆಂಡ್​ ಪ್ರವಾಸದಲ್ಲಿರುವ ಟೀಮ್ ಇಂಡಿಯಾದೊಂದಿಗಿದ್ದು ಎರಡು ರಾಷ್ಟ್ರಗಳ ನಡುವೆ 5-ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 4ರಿಂದ ನಾರ್ಥಾಂಪನ್​ನಲ್ಲಿ ಆರಂಭವಾಗಲಿದೆ. ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್​ ನಂತರ ಮೂರು ವಾರಗಳ ರಜೆಯ ಹಿನ್ನೆಲೆಯಲ್ಲಿ ಚದುರಿರುವ ಆಟಗಾರರು ಜುಲೈ 14 ರಂದು ಜೊತೆಗೂಡಿ ತರಬೇತಿ ಆರಂಭಿಸಲಿದ್ದಾರೆ.

ಇದನ್ನೂ ಓದಿ: Ravi Shastri Age: ಗೂಗಲ್ ಪ್ರಕಾರ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರೀಯ ವಯಸ್ಸು 120

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ