AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಸೋತಿದಕ್ಕೆ ಸ್ಟೇಡಿಯಂ ಮೇಲ್ಛಾವಣಿಯಲ್ಲಿ ನಿಂತು ಮೂತ್ರ ವಿಸರ್ಜನೆ ಮಾಡಿದ ಭೂಪ

ಟೀಮ್ ಸೋತಿದಕ್ಕೆ ಸಿಡ್ನಿ ಕ್ರಿಕೆಟ್ ಸ್ಟೇಡಿಯಂ ಮೇಲ್ಛಾವಣಿಯಲ್ಲಿ ನಿಂತು ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ ಜೀವಮಾನವಿಡೀ ಪಶ್ಚಾತ್ತಾಪ ಪಡುವಂಥ ಶಿಕ್ಷೆ.

ಟೀಮ್ ಸೋತಿದಕ್ಕೆ ಸ್ಟೇಡಿಯಂ ಮೇಲ್ಛಾವಣಿಯಲ್ಲಿ ನಿಂತು ಮೂತ್ರ ವಿಸರ್ಜನೆ ಮಾಡಿದ ಭೂಪ
ಮೇಲ್ಛಾವಣಿ ಮೇಲಿರುವ ಫೋಟೋ
TV9 Web
| Edited By: |

Updated on: Jul 19, 2022 | 3:32 PM

Share

ಆಟದಲ್ಲಿ ಗೆಲುವು-ಸೋಲು ಇದ್ದಿದ್ದೆ. ಇಂತಹ ಸೋಲುಗಳನ್ನು ಅಭಿಮಾನಿಗಳು ಅರಗಿಸಿಕೊಳ್ಳಲೇಬೇಕಾಗುತ್ತದೆ. ಹಾಗೆಯೇ ಗೆಲುವನ್ನು ಕೂಡ ಪರಮಾವಧಿಯೊಳಗೆ ಸಂಭ್ರಮಿಸಬೇಕಾಗುತ್ತದೆ. ಆದರೆ ಕೆಲವೊಮ್ಮೆ ಸೋಲಿನ ಹತಾಶೆಯಲ್ಲಿ ಮೈಮರೆಯುವವರು ಇದ್ದಾರೆ. ಇಂತಹದೊಂದು ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಈತ ತಂಡ ಸೋತ ಸಿಟ್ಟಿನಲ್ಲಿ ಸಿಡ್ನಿ ಕ್ರಿಕೆಟ್ ಮೈದಾನದ ಛಾವಣಿಯ ಮೇಲೆ ನಿಂತು ಮೂತ್ರ ವಿಸರ್ಜನೆ ಮಾಡಿದ್ದ. ಈ ದೃಶ್ಯ ವೈರಲ್ ಆದ ಬಳಿಕ ಆತನನ್ನು ಬಂಧಿಸಲಾಗಿದೆ. ಅಷ್ಟಕ್ಕೂ ಈ ಘಟನೆ ನಡೆದಿದ್ದು ರಗ್ಬಿ ಪಂದ್ಯದ ಬಳಿಕ. ಸಿಡ್ನಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ರಗ್ಬಿ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಿತ್ತು.

ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಪಂದ್ಯವನ್ನು ಇಂಗ್ಲೆಂಡ್ ತಂಡವು 21-17 ಅಂತರದಿಂದ ಗೆದ್ದುಕೊಂಡಿದೆ. ಅತ್ತ ತವರಿನಲ್ಲೇ ಆಸ್ಟ್ರೇಲಿಯಾ ತಂಡ ಸೋತ ಹತಾಶೆಯಲ್ಲಿ ಅಭಿಮಾನಿಯೊಬ್ಬ ಸ್ಟೇಡಿಯಂನ ಮೇಲ್ಛಾವಣಿಗೆ ಏರಿದ್ದ. ಅಲ್ಲದೆ ಅಲ್ಲಿಂದ ಮೂತ್ರ ವಿಸರ್ಜನೆ ಮಾಡಿದ್ದ.

ತಕ್ಷಣವೇ ಆತನನ್ನು ಸ್ಟೇಡಿಯಂ ಭದ್ರತಾ ಸಿಬ್ಬಂದಿಗಳು ವಶಕ್ಕೆ ಪಡೆದಿದ್ದಾರೆ. ಅನುಚಿತ ವರ್ತನೆಯ ಆರೋಪದ ಜೊತೆಗೆ ಅನುಮತಿಯಿಲ್ಲದೆ ಟೆರೇಸ್‌ಗೆ ಹೋಗಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಅಷ್ಟೇ ಅಲ್ಲದೆ ಸಿಡ್ನಿ ಕ್ರಿಕೆಟ್ ಗ್ರೌಂಡ್ ಆತನ ಮೇಲೆ ಕೇವಲ 2 ವರ್ಷಗಳ ನಿಷೇಧ ಹೇರಿದೆ. ಇದರ ಬೆನ್ನಲ್ಲೇ ರಗ್ಬಿ ಆಸ್ಟ್ರೇಲಿಯಾ ಶಿಕ್ಷೆಯನ್ನು ಹೆಚ್ಚಿಸಿ ಜೀವಾವಧಿ ನಿಷೇಧ ಹೇರಲಾಗಿದೆ.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
Image
Steve Smith: ಬರೋಬ್ಬರಿ 30 ಕೋಟಿ ಲಾಭ ಪಡೆದ ಸ್ಟೀವ್ ಸ್ಮಿತ್..!
Image
Cricket Records: ಕ್ರಿಕೆಟ್ ಇತಿಹಾಸದ ಈ ಅದ್ಭುತ ದಾಖಲೆಗಳನ್ನು ಎಂದಿಗೂ ಮುರಿಯಲಾಗುವುದಿಲ್ಲ!
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

ಸದ್ಯ ಆ ಅಭಿಮಾನಿ ಪೊಲೀಸರಿಂದ ಬಿಡುಗಡೆಯಾದರೂ, ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇನ್ಮುಂದೆ ಯಾವುದೇ ಪಂದ್ಯವನ್ನು ನೋಡಲು ಸಾಧ್ಯವಾಗುವುದಿಲ್ಲ ಎಂದು ರಗ್ಬಿ ಆಸ್ಟ್ರೇಲಿಯಾ ಸ್ಪಷ್ಟಪಡಿಸಿದೆ.

ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು