AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Usain Bolt: ಅವಳಿ ಗಂಡು ಮಕ್ಕಳಿಗೆ ತಂದೆಯಾದ ಉಸೇನ್ ಬೋಲ್ಟ್.. ನವಜಾತ ಶಿಶುಗಳ ಹೆಸರೇನು ಗೊತ್ತಾ?

Usain Bolt: ಈ ಖುಷಿಯ ವಿಚಾರವನ್ನು ದಂಪತಿಗಳು ಅವಳಿ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಈ ನವಜಾತ ಶಿಶುಗಳಿಗೆ ಥಂಡರ್ ಬೋಲ್ಟ್ ಮತ್ತು ಸೇಂಟ್ ಲಿಯೋ ಬೋಲ್ಟ್ ಎಂದು ಹೆಸರಿಡಲಾಗಿದೆ.

Usain Bolt: ಅವಳಿ ಗಂಡು ಮಕ್ಕಳಿಗೆ ತಂದೆಯಾದ ಉಸೇನ್ ಬೋಲ್ಟ್.. ನವಜಾತ ಶಿಶುಗಳ ಹೆಸರೇನು ಗೊತ್ತಾ?
ಅವಳಿ ಗಂಡು ಮಕ್ಕಳಿಗೆ ತಂದೆಯಾದ ಉಸೇನ್ ಬೋಲ್ಟ್
ಪೃಥ್ವಿಶಂಕರ
|

Updated on: Jun 21, 2021 | 5:32 PM

Share

ಸಾರ್ವಕಾಲಿಕ ಒಲಿಂಪಿಕ್ ಶ್ರೇಷ್ಠ ಓಟಗಾರ ಉಸೇನ್ ಬೋಲ್ಟ್ ಮತ್ತು ಅವರ ಪತ್ನಿ ಕೇಸಿ ಬೆನೆಟ್ ಇತ್ತೀಚೆಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಈ ಖುಷಿಯ ವಿಚಾರವನ್ನು ದಂಪತಿಗಳು ಅವಳಿ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಈ ನವಜಾತ ಶಿಶುಗಳಿಗೆ ಥಂಡರ್ ಬೋಲ್ಟ್ ಮತ್ತು ಸೇಂಟ್ ಲಿಯೋ ಬೋಲ್ಟ್ ಎಂದು ಹೆಸರಿಡಲಾಗಿದೆ. ತಂದೆಯ ದಿನಾಚರಣೆಯ ಸಂದರ್ಭದಲ್ಲಿ ಬೋಲ್ಟ್ ಕುಟುಂಬದ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅವಳಿ ಮಕ್ಕಳು ಯಾವಾಗ ಜನಿಸಿದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಉಸೇನ್ ಬೋಲ್ಟ್ ದಂಪತಿಗಳ ಫೋಟೋವನ್ನು ತಮ್ಮ ಅವಳಿ ಮತ್ತು ಮಗಳ ಜೊತೆ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

ಉಸೇನ್ ಬೋಲ್ಟ್ ಅವರ ಮಗಳು ‘ಒಲಿಂಪಿಯಾ ಬೋಲ್ಟ್’ ಮೇ 2020 ರಲ್ಲಿ ಜನಿಸಿದರು. ಬೋಲ್ಟ್ ಎರಡು ತಿಂಗಳ ನಂತರ ತನ್ನ ಮಗಳ ಹೆಸರನ್ನು ಬಹಿರಂಗಪಡಿಸಿದರು. 2008, 2012 ಮತ್ತು 2016 ಕ್ರೀಡಾಕೂಟಗಳಲ್ಲಿ ಎಂಟು ಚಿನ್ನದ ಪದಕಗಳನ್ನು ಗೆದ್ದ 34 ವರ್ಷದ ಬೋಲ್ಟ್ 2017 ರಲ್ಲಿ ನಿವೃತ್ತಿ ಘೋಷಿಸಿದ್ದಾರೆ.

ಬೋಲ್ಟ್ ವೃತ್ತಿ ಜೀವನ ಬೋಲ್ಟ್ 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ವಿಶ್ವ ದಾಖಲೆಗಳನ್ನು ನಿರ್ಮಿಸಿದರು, ಇದು ಇತಿಹಾಸದಲ್ಲಿ ಅತೀ ಕಡಿಮೆ ಸಮಯದಲ್ಲಿ ವೇಗವಾಗಿ ಓಡಿದ ಓಟವಾಗಿದೆ. ಅತಿ ವೇಗದ ವ್ಯಕ್ತಿಯಾಗಿ ಇತಿಹಾಸದಲ್ಲಿ ದಾಖಲೆ ಬರೆದ ಬೋಲ್ಟ್ 100 ಮತ್ತು 200 ಮೀಟರ್ ಓಟದಲ್ಲಿ ಸತತ ಮೂರು ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ 23 ಚಾಂಪಿಯನ್‌ಶಿಪ್ ಚಿನ್ನ ಗೆದ್ದಿರುವ ಬೋಲ್ಟ್, ತಮ್ಮ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದಾಗಿನಿಂದ ಫುಟ್‌ಬಾಲ್ ಆಡಲು ಆಸಕ್ತಿ ಹೊಂದಿದ್ದಾರೆ. ಆದಾಗ್ಯೂ, ಈ ಆಟದಲ್ಲಿ ಒಪ್ಪಂದವನ್ನು ಪಡೆದುಕೊಳ್ಳಲು ಅವರಿಗೆ ಸಾಧ್ಯವಾಗಲಿಲ್ಲ. ನಂತರ ಅವರು 2019 ರಲ್ಲಿ ಎಲ್ಲಾ ಕ್ರೀಡೆಗಳಿಂದ ನಿವೃತ್ತಿ ಘೋಷಿಸಿದರು.

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ