Sign In

By signing in or creating an account, you agree with Associated Broadcasting Company's Terms & Conditions and Privacy Policy.

Usain Bolt: ಅವಳಿ ಗಂಡು ಮಕ್ಕಳಿಗೆ ತಂದೆಯಾದ ಉಸೇನ್ ಬೋಲ್ಟ್.. ನವಜಾತ ಶಿಶುಗಳ ಹೆಸರೇನು ಗೊತ್ತಾ?

Usain Bolt: ಈ ಖುಷಿಯ ವಿಚಾರವನ್ನು ದಂಪತಿಗಳು ಅವಳಿ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಈ ನವಜಾತ ಶಿಶುಗಳಿಗೆ ಥಂಡರ್ ಬೋಲ್ಟ್ ಮತ್ತು ಸೇಂಟ್ ಲಿಯೋ ಬೋಲ್ಟ್ ಎಂದು ಹೆಸರಿಡಲಾಗಿದೆ.

Usain Bolt: ಅವಳಿ ಗಂಡು ಮಕ್ಕಳಿಗೆ ತಂದೆಯಾದ ಉಸೇನ್ ಬೋಲ್ಟ್.. ನವಜಾತ ಶಿಶುಗಳ ಹೆಸರೇನು ಗೊತ್ತಾ?
ಅವಳಿ ಗಂಡು ಮಕ್ಕಳಿಗೆ ತಂದೆಯಾದ ಉಸೇನ್ ಬೋಲ್ಟ್
Follow us
ಪೃಥ್ವಿಶಂಕರ
|

Updated on: Jun 21, 2021 | 5:32 PM

ಸಾರ್ವಕಾಲಿಕ ಒಲಿಂಪಿಕ್ ಶ್ರೇಷ್ಠ ಓಟಗಾರ ಉಸೇನ್ ಬೋಲ್ಟ್ ಮತ್ತು ಅವರ ಪತ್ನಿ ಕೇಸಿ ಬೆನೆಟ್ ಇತ್ತೀಚೆಗೆ ಅವಳಿ ಮಕ್ಕಳಿಗೆ ಜನ್ಮ ನೀಡಿದರು. ಈ ಖುಷಿಯ ವಿಚಾರವನ್ನು ದಂಪತಿಗಳು ಅವಳಿ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಈ ನವಜಾತ ಶಿಶುಗಳಿಗೆ ಥಂಡರ್ ಬೋಲ್ಟ್ ಮತ್ತು ಸೇಂಟ್ ಲಿಯೋ ಬೋಲ್ಟ್ ಎಂದು ಹೆಸರಿಡಲಾಗಿದೆ. ತಂದೆಯ ದಿನಾಚರಣೆಯ ಸಂದರ್ಭದಲ್ಲಿ ಬೋಲ್ಟ್ ಕುಟುಂಬದ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅವಳಿ ಮಕ್ಕಳು ಯಾವಾಗ ಜನಿಸಿದರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಉಸೇನ್ ಬೋಲ್ಟ್ ದಂಪತಿಗಳ ಫೋಟೋವನ್ನು ತಮ್ಮ ಅವಳಿ ಮತ್ತು ಮಗಳ ಜೊತೆ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

ಉಸೇನ್ ಬೋಲ್ಟ್ ಅವರ ಮಗಳು ‘ಒಲಿಂಪಿಯಾ ಬೋಲ್ಟ್’ ಮೇ 2020 ರಲ್ಲಿ ಜನಿಸಿದರು. ಬೋಲ್ಟ್ ಎರಡು ತಿಂಗಳ ನಂತರ ತನ್ನ ಮಗಳ ಹೆಸರನ್ನು ಬಹಿರಂಗಪಡಿಸಿದರು. 2008, 2012 ಮತ್ತು 2016 ಕ್ರೀಡಾಕೂಟಗಳಲ್ಲಿ ಎಂಟು ಚಿನ್ನದ ಪದಕಗಳನ್ನು ಗೆದ್ದ 34 ವರ್ಷದ ಬೋಲ್ಟ್ 2017 ರಲ್ಲಿ ನಿವೃತ್ತಿ ಘೋಷಿಸಿದ್ದಾರೆ.

ಬೋಲ್ಟ್ ವೃತ್ತಿ ಜೀವನ ಬೋಲ್ಟ್ 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ವಿಶ್ವ ದಾಖಲೆಗಳನ್ನು ನಿರ್ಮಿಸಿದರು, ಇದು ಇತಿಹಾಸದಲ್ಲಿ ಅತೀ ಕಡಿಮೆ ಸಮಯದಲ್ಲಿ ವೇಗವಾಗಿ ಓಡಿದ ಓಟವಾಗಿದೆ. ಅತಿ ವೇಗದ ವ್ಯಕ್ತಿಯಾಗಿ ಇತಿಹಾಸದಲ್ಲಿ ದಾಖಲೆ ಬರೆದ ಬೋಲ್ಟ್ 100 ಮತ್ತು 200 ಮೀಟರ್ ಓಟದಲ್ಲಿ ಸತತ ಮೂರು ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ 23 ಚಾಂಪಿಯನ್‌ಶಿಪ್ ಚಿನ್ನ ಗೆದ್ದಿರುವ ಬೋಲ್ಟ್, ತಮ್ಮ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದಾಗಿನಿಂದ ಫುಟ್‌ಬಾಲ್ ಆಡಲು ಆಸಕ್ತಿ ಹೊಂದಿದ್ದಾರೆ. ಆದಾಗ್ಯೂ, ಈ ಆಟದಲ್ಲಿ ಒಪ್ಪಂದವನ್ನು ಪಡೆದುಕೊಳ್ಳಲು ಅವರಿಗೆ ಸಾಧ್ಯವಾಗಲಿಲ್ಲ. ನಂತರ ಅವರು 2019 ರಲ್ಲಿ ಎಲ್ಲಾ ಕ್ರೀಡೆಗಳಿಂದ ನಿವೃತ್ತಿ ಘೋಷಿಸಿದರು.

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ