AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್​ ಕೊಹ್ಲಿಯನ್ನು ಕಿಚಾಯಿಸಿದ್ದ ಉತ್ತರಾಖಂಡ್​ ಪೊಲೀಸರ ಟ್ವೀಟ್​ ಡಿಲೀಟ್​

ಕೊಹ್ಲಿ ಶೂನ್ಯಕ್ಕೆ ಔಟಾಗಿ ಪೆವಿಲಿಯನ್​ಗೆ ತೆರಳುತ್ತಿರುವ ಫೋಟೋವನ್ನು ಉತ್ತರಾಖಂಡ ಪೊಲೀಸರು ತಮ್ಮ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದರು. ರಾಶ್ ಡ್ರೈವಿಂಗ್ ಮಾಡುವವರಿಗೆ ಉತ್ತಮ ಸಲಹೆ ನೀಡುವ ಸಲುವಾಗಿ ಟೀಂ ಇಂಡಿಯಾ ನಾಯಕನ ಉದಾಹರಣೆಯನ್ನು ಉಲ್ಲೇಖಿಸಲಾಗಿತ್ತು.

Virat Kohli: ವಿರಾಟ್​ ಕೊಹ್ಲಿಯನ್ನು ಕಿಚಾಯಿಸಿದ್ದ ಉತ್ತರಾಖಂಡ್​ ಪೊಲೀಸರ ಟ್ವೀಟ್​ ಡಿಲೀಟ್​
ವಿರಾಟ್ ಕೊಹ್ಲಿ
ರಾಜೇಶ್ ದುಗ್ಗುಮನೆ
| Edited By: |

Updated on: Mar 14, 2021 | 8:40 PM

Share

ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ, ಕೊಹ್ಲಿ ಡಕ್​ಗೆ ಔಟ್​ ಆಗಿದ್ದರು. ಎಚ್ಚರವಹಿಸದಿದ್ದರೆ ನೀವು ಕೊಹ್ಲಿಯಂತಾಗುತ್ತೀರಿ ಎಂದು ಉತ್ತರಾಖಂಡ ಪೊಲೀಸರು ಭಿನ್ನವಾಗಿ ಜಾಗೃತಿ ಮೂಡಿಸುವ ಜಾಹೀರಾತು ಮಾಡಿದ್ದರು. ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಟ್ವೀಟ್​ ಅನ್ನು ಉತ್ತರಾಖಂಡ ಪೊಲೀಸರು ಡಿಲೀಟ್​ ಮಾಡಿದ್ದಾರೆ.

ಮೊದಲ ಟಿ20 ಪಂದ್ಯದಲ್ಲಿ ರಾಹುಲ್​ ವಿಕೆಟ್​ ಬಳಿಕ ಬ್ಯಾಟಿಂಗ್​ಗೆ ಬಂದ ನಾಯಕ ವಿರಾಟ್​ ಕೊಹ್ಲಿ, ನಾಯಕನ ಜವಾಬ್ದಾರಿಯನ್ನು ಮರೆತು ಶೂನ್ಯಕ್ಕೆ ಔಟಾದರು. ರನ್​ ವೇಗ ಹೆಚ್ಚಿಸಲು ಹೋದ ಕೊಹ್ಲಿ ಆದಿಲ್​ ರಶೀದ್​ ಬೌಲಿಂಗ್​ನಲ್ಲಿ ಮಿಡ್​ ಆಫ್​ ಮೇಲೆ ಬೌಂಡರಿ ಗಳಿಸಲು ಯತ್ನಿಸಿದರು. ಆದರೆ ಈ ಯತ್ನದಲ್ಲಿ ವಿಫಲರಾದ ಕೊಹ್ಲಿ, ಅಲ್ಲಿಯೇ ಫಿಲ್ಡೀಂಗ್​ ಮಾಡುತ್ತಿದ್ದ ಬೈರ್​ಸ್ಟೋವ್​ ಕೈಗೆ ಕ್ಯಾಚಿತ್ತು ಪೆವಿಲಿಯನ್​ಗೆ ತೆರಳಿದರು.

ಕೊಹ್ಲಿ ಶೂನ್ಯಕ್ಕೆ ಔಟಾಗಿ ಪೆವಿಲಿಯನ್​ಗೆ ತೆರಳುತ್ತಿರುವ ಫೋಟೋವನ್ನು ಉತ್ತರಾಖಂಡ ಪೊಲೀಸರು ತಮ್ಮ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದರು. ರಾಶ್ ಡ್ರೈವಿಂಗ್ ಮಾಡುವವರಿಗೆ ಉತ್ತಮ ಸಲಹೆ ನೀಡುವ ಸಲುವಾಗಿ ಟೀಂ ಇಂಡಿಯಾ ನಾಯಕನ ಉದಾಹರಣೆಯನ್ನು ಉಲ್ಲೇಖಿಸಲಾಗಿತ್ತು. ಪೂರ್ಣ ಪ್ರಜ್ಞೆಯಲ್ಲಿ ವಾಹನ ಚಾಲನೆ ಮಾಡುವುದು ಅವಶ್ಯಕ. ಇಲ್ಲದಿದ್ದರೆ ನೀವು ಸಹ ಕೊಹ್ಲಿಯಂತೆ ಶೂನ್ಯಕ್ಕೆ ಔಟಾಗಬೇಕಾಗುತ್ತದೆ ಎಂದು ಬರೆದುಕೊಂಡಿದ್ದರು. ಪೊಲೀಸ್​ ಅಧಿಕಾರಿಯ ಈ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ಬಾರಿ ಸದ್ದು ಮಾಡಿತ್ತು.

ಅನೇಕರು ಈ ಟ್ವೀಟ್​ ಬಗ್ಗೆ ಆಕ್ರೋಶ ಹೊರಹಾಕಿದ್ದರು. ವಿರಾಟ್​ ಕೊಹ್ಲಿ ಎಲ್ಲೋ ಒಂದೆರಡು ಬಾರಿ ಡಕ್​ಗೆ ಔಟ್​ ಆದರು ಎನ್ನುವ ಕಾರಣಕ್ಕೆ ಅವರಿಗೆ ಅಗೌರವ ತೋರುವುದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡಿದ್ದರು. ಇನ್ನೂ ಕೆಲವರು, ಟೀಂ ಇಂಡಿಯಾ ನಾಯಕನಿಗೆ ಈ ರೀತಿ ಹೇಳುವುದು ಸರಿಯಲ್ಲ ಎಂದು ಹೇಳಿದ್ದಾರೆ. ಸಾಕಷ್ಟು ಟೀಕೆಗಳ ನಂತರ ಈ ಟ್ವೀಟ್​ಅನ್ನು ಡಿಲೀಟ್​ ಮಾಡಲಾಗಿದೆ.

ಇದನ್ನೂ ಓದಿ: ಎಚ್ಚರವಹಿಸದಿದ್ದರೆ ನೀವು ಕೊಹ್ಲಿಯಂತ್ತಾಗುತ್ತೀರಿ! ಕೊಹ್ಲಿಯ ಡಕ್​ ಔಟ್, ಉತ್ತರಾಖಂಡ್​ ಪೊಲೀಸ್​ ಅಧಿಕಾರಿ​ಗೆ ಮಾದರಿಯಾಗಿದ್ದೇಗೆ?

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್