AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್​ ಕೊಹ್ಲಿಯನ್ನು ಕಿಚಾಯಿಸಿದ್ದ ಉತ್ತರಾಖಂಡ್​ ಪೊಲೀಸರ ಟ್ವೀಟ್​ ಡಿಲೀಟ್​

ಕೊಹ್ಲಿ ಶೂನ್ಯಕ್ಕೆ ಔಟಾಗಿ ಪೆವಿಲಿಯನ್​ಗೆ ತೆರಳುತ್ತಿರುವ ಫೋಟೋವನ್ನು ಉತ್ತರಾಖಂಡ ಪೊಲೀಸರು ತಮ್ಮ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದರು. ರಾಶ್ ಡ್ರೈವಿಂಗ್ ಮಾಡುವವರಿಗೆ ಉತ್ತಮ ಸಲಹೆ ನೀಡುವ ಸಲುವಾಗಿ ಟೀಂ ಇಂಡಿಯಾ ನಾಯಕನ ಉದಾಹರಣೆಯನ್ನು ಉಲ್ಲೇಖಿಸಲಾಗಿತ್ತು.

Virat Kohli: ವಿರಾಟ್​ ಕೊಹ್ಲಿಯನ್ನು ಕಿಚಾಯಿಸಿದ್ದ ಉತ್ತರಾಖಂಡ್​ ಪೊಲೀಸರ ಟ್ವೀಟ್​ ಡಿಲೀಟ್​
ವಿರಾಟ್ ಕೊಹ್ಲಿ
ರಾಜೇಶ್ ದುಗ್ಗುಮನೆ
| Edited By: |

Updated on: Mar 14, 2021 | 8:40 PM

Share

ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ, ಕೊಹ್ಲಿ ಡಕ್​ಗೆ ಔಟ್​ ಆಗಿದ್ದರು. ಎಚ್ಚರವಹಿಸದಿದ್ದರೆ ನೀವು ಕೊಹ್ಲಿಯಂತಾಗುತ್ತೀರಿ ಎಂದು ಉತ್ತರಾಖಂಡ ಪೊಲೀಸರು ಭಿನ್ನವಾಗಿ ಜಾಗೃತಿ ಮೂಡಿಸುವ ಜಾಹೀರಾತು ಮಾಡಿದ್ದರು. ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಟ್ವೀಟ್​ ಅನ್ನು ಉತ್ತರಾಖಂಡ ಪೊಲೀಸರು ಡಿಲೀಟ್​ ಮಾಡಿದ್ದಾರೆ.

ಮೊದಲ ಟಿ20 ಪಂದ್ಯದಲ್ಲಿ ರಾಹುಲ್​ ವಿಕೆಟ್​ ಬಳಿಕ ಬ್ಯಾಟಿಂಗ್​ಗೆ ಬಂದ ನಾಯಕ ವಿರಾಟ್​ ಕೊಹ್ಲಿ, ನಾಯಕನ ಜವಾಬ್ದಾರಿಯನ್ನು ಮರೆತು ಶೂನ್ಯಕ್ಕೆ ಔಟಾದರು. ರನ್​ ವೇಗ ಹೆಚ್ಚಿಸಲು ಹೋದ ಕೊಹ್ಲಿ ಆದಿಲ್​ ರಶೀದ್​ ಬೌಲಿಂಗ್​ನಲ್ಲಿ ಮಿಡ್​ ಆಫ್​ ಮೇಲೆ ಬೌಂಡರಿ ಗಳಿಸಲು ಯತ್ನಿಸಿದರು. ಆದರೆ ಈ ಯತ್ನದಲ್ಲಿ ವಿಫಲರಾದ ಕೊಹ್ಲಿ, ಅಲ್ಲಿಯೇ ಫಿಲ್ಡೀಂಗ್​ ಮಾಡುತ್ತಿದ್ದ ಬೈರ್​ಸ್ಟೋವ್​ ಕೈಗೆ ಕ್ಯಾಚಿತ್ತು ಪೆವಿಲಿಯನ್​ಗೆ ತೆರಳಿದರು.

ಕೊಹ್ಲಿ ಶೂನ್ಯಕ್ಕೆ ಔಟಾಗಿ ಪೆವಿಲಿಯನ್​ಗೆ ತೆರಳುತ್ತಿರುವ ಫೋಟೋವನ್ನು ಉತ್ತರಾಖಂಡ ಪೊಲೀಸರು ತಮ್ಮ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದರು. ರಾಶ್ ಡ್ರೈವಿಂಗ್ ಮಾಡುವವರಿಗೆ ಉತ್ತಮ ಸಲಹೆ ನೀಡುವ ಸಲುವಾಗಿ ಟೀಂ ಇಂಡಿಯಾ ನಾಯಕನ ಉದಾಹರಣೆಯನ್ನು ಉಲ್ಲೇಖಿಸಲಾಗಿತ್ತು. ಪೂರ್ಣ ಪ್ರಜ್ಞೆಯಲ್ಲಿ ವಾಹನ ಚಾಲನೆ ಮಾಡುವುದು ಅವಶ್ಯಕ. ಇಲ್ಲದಿದ್ದರೆ ನೀವು ಸಹ ಕೊಹ್ಲಿಯಂತೆ ಶೂನ್ಯಕ್ಕೆ ಔಟಾಗಬೇಕಾಗುತ್ತದೆ ಎಂದು ಬರೆದುಕೊಂಡಿದ್ದರು. ಪೊಲೀಸ್​ ಅಧಿಕಾರಿಯ ಈ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ಬಾರಿ ಸದ್ದು ಮಾಡಿತ್ತು.

ಅನೇಕರು ಈ ಟ್ವೀಟ್​ ಬಗ್ಗೆ ಆಕ್ರೋಶ ಹೊರಹಾಕಿದ್ದರು. ವಿರಾಟ್​ ಕೊಹ್ಲಿ ಎಲ್ಲೋ ಒಂದೆರಡು ಬಾರಿ ಡಕ್​ಗೆ ಔಟ್​ ಆದರು ಎನ್ನುವ ಕಾರಣಕ್ಕೆ ಅವರಿಗೆ ಅಗೌರವ ತೋರುವುದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡಿದ್ದರು. ಇನ್ನೂ ಕೆಲವರು, ಟೀಂ ಇಂಡಿಯಾ ನಾಯಕನಿಗೆ ಈ ರೀತಿ ಹೇಳುವುದು ಸರಿಯಲ್ಲ ಎಂದು ಹೇಳಿದ್ದಾರೆ. ಸಾಕಷ್ಟು ಟೀಕೆಗಳ ನಂತರ ಈ ಟ್ವೀಟ್​ಅನ್ನು ಡಿಲೀಟ್​ ಮಾಡಲಾಗಿದೆ.

ಇದನ್ನೂ ಓದಿ: ಎಚ್ಚರವಹಿಸದಿದ್ದರೆ ನೀವು ಕೊಹ್ಲಿಯಂತ್ತಾಗುತ್ತೀರಿ! ಕೊಹ್ಲಿಯ ಡಕ್​ ಔಟ್, ಉತ್ತರಾಖಂಡ್​ ಪೊಲೀಸ್​ ಅಧಿಕಾರಿ​ಗೆ ಮಾದರಿಯಾಗಿದ್ದೇಗೆ?

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ