AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಂಚ್ ವೇಪಿಂಗ್ ಕೆಮೆರಾದಲ್ಲಿ ಸೆರೆಯಾಯಿತು!

ಭಾರತವೂ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲಿ ವೇಪಿಂಗ್ (ಈ-ಸಿಗರೇಟ್) ನಿಷೇಧಿಸಲಾಗಿದೆ. ಮುಸ್ಲಿಂ ರಾಷ್ಟ್ರಗಳಲ್ಲಂತೂ ವೇಪಿಂಗ್ ಕುರಿತು ಮಾತಾಡುವುದು ಕೂಡ ನಿಷಿದ್ಧ. ಪರಿಸ್ಥಿತಿ ಹೀಗಿರುವಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಮಿನ ಆರಂಭ ಆಟಗಾರ ಆಸ್ಟ್ರೇಲಿಯಾದ ಆರನ್ ಫಿಂಚ್ ರಾಜಸ್ತಾನ ರಾಯಲ್ಸ್ ವಿರುದ್ಧ ಶನಿವಾರದಂದು ನಡೆದ ಪಂದ್ಯದ ಕೊನೆಯ ಆತಂಕದ ಮತ್ತು ರೋಮಾಂಚಕ ಕ್ಷಣಗಳಲ್ಲಿ ಡ್ರೆಸ್ಸಿಂಗ್ ರೂಮಲ್ಲಿ ಕೂತು ವೇಪ್ ಮಾಡುತ್ತಿರುವುದು ಕೆಮೆರಾದಲ್ಲಿ ಸೆರೆಯಾಗಿದೆ. ಫಿಂಚ್ ವೇಪ್ ಮಾಡುತ್ತಿರುವ ವಿಡಿಯೊ ಕೇವಲ 8-10 ಸೆಕೆಂಡುಗಳ ಅವಧಿಯದ್ದಾಗಿದೆ. ಅತ್ತ ಮೈದಾನದಲ್ಲಿ ಆರ್​ಸಿಬಿಯ ಚಾಂಪಿಯನ್ […]

ಫಿಂಚ್ ವೇಪಿಂಗ್ ಕೆಮೆರಾದಲ್ಲಿ ಸೆರೆಯಾಯಿತು!
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on:Oct 20, 2020 | 9:25 AM

Share

ಭಾರತವೂ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲಿ ವೇಪಿಂಗ್ (ಈ-ಸಿಗರೇಟ್) ನಿಷೇಧಿಸಲಾಗಿದೆ. ಮುಸ್ಲಿಂ ರಾಷ್ಟ್ರಗಳಲ್ಲಂತೂ ವೇಪಿಂಗ್ ಕುರಿತು ಮಾತಾಡುವುದು ಕೂಡ ನಿಷಿದ್ಧ. ಪರಿಸ್ಥಿತಿ ಹೀಗಿರುವಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಮಿನ ಆರಂಭ ಆಟಗಾರ ಆಸ್ಟ್ರೇಲಿಯಾದ ಆರನ್ ಫಿಂಚ್ ರಾಜಸ್ತಾನ ರಾಯಲ್ಸ್ ವಿರುದ್ಧ ಶನಿವಾರದಂದು ನಡೆದ ಪಂದ್ಯದ ಕೊನೆಯ ಆತಂಕದ ಮತ್ತು ರೋಮಾಂಚಕ ಕ್ಷಣಗಳಲ್ಲಿ ಡ್ರೆಸ್ಸಿಂಗ್ ರೂಮಲ್ಲಿ ಕೂತು ವೇಪ್ ಮಾಡುತ್ತಿರುವುದು ಕೆಮೆರಾದಲ್ಲಿ ಸೆರೆಯಾಗಿದೆ.

ಫಿಂಚ್ ವೇಪ್ ಮಾಡುತ್ತಿರುವ ವಿಡಿಯೊ ಕೇವಲ 8-10 ಸೆಕೆಂಡುಗಳ ಅವಧಿಯದ್ದಾಗಿದೆ. ಅತ್ತ ಮೈದಾನದಲ್ಲಿ ಆರ್​ಸಿಬಿಯ ಚಾಂಪಿಯನ್ ಬ್ಯಾಟ್ ಎಬಿ ಡಿ ವಿಲಿಯರ್ಸ್ ರಾಯಲ್ಸ್ ತಂಡದ ಜಯದೇವ್ ಉನಾಡ್ಕಟ್ ಅವರ ಬೌಲಿಂಗ್​ನಲ್ಲಿ ಸಿಕ್ಸರ್ ಮೇಲೆ ಸಿಕ್ಸರ್ ಬಾರಿಸಿ ಟೀಮಿಗೆ ಗೆಲುವು ತಂದುಕೊಡುತ್ತಿದ್ದರೆ, ಫಿಂಚ್ ಒಮ್ಮೆ ಹೊಗೆಯುಗುಳಿ ಮತ್ತೊಮ್ಮೆ ದಮ್ ಎಳೆಯುವುದನ್ನು ಒಬ್ಬ ಕೆಮೆರಾಮನ್ ಶೂಟ್ ಮಾಡಿದ್ದಾರೆ.

ಹಾಗೆ ನೋಡಿದರೆ, ವೇಪಿಂಗ್ ಮಾಡುವಾಗ ಸಿಕ್ಕಿಬಿದ್ದಿರುವವರಲ್ಲಿ ಫಿಂಚ್ ಮೊದಲನೆಯವರೇನಲ್ಲ. ಇದಕ್ಕೆ ಮೊದಲು ನ್ಯೂಜಿಲೆಂಡ್​ನ ಬ್ರೆಂಡನ್ ಮೆಕಲ್ಲಮ್ ಒಮ್ಮೆ ದಕ್ಷಿಣ ಆಫ್ರಿಕಾ ವಿರುದ್ಧ ಆಡುವಾಗ ಟಾಯ್ಲೆಟ್​ನಲ್ಲಿ ಸ್ಮೋಕ್ ಮಾಡಿರುವುದನ್ನು ಒಪ್ಪಿಕೊಂಡಿದ್ದರು.

2019 ರಲ್ಲಿ ಇಂಗ್ಲೆಂಡ್​ಗೆ ವಿಶ್ವಕಪ್ ಗೆದ್ದುಕೊಟ್ಟ ಬೆನ್ ಸ್ಟೋಕ್ಸ್ ಲಾರ್ಡ್ಸ್​ನಲ್ಲಿ ಪೈನಲ್ ಪಂದ್ಯ ಆಡುವಾಗ ವಾಷ್​ರೂಮಿನಲ್ಲಿ ವೇಪ್ ಮಾಡಿದ್ದಾಗಿ ಹೇಳಿದ್ದರು.

ಅದೇನೋ ಸರಿ; ಆದರೆ, ಈ ಮಹಾನ್ ಆಟಗಾರರು ನೆನಪಿಟ್ಟುಕೊಳ್ಳಬೇಕಾದ ಸಂಗತಿಯೇನೆಂದರೆ, ತಮ್ಮ ಲಕ್ಷಾಂತರ ಅಭಿಮಾನಿಗಳಿಗೆ ಅವರು ತಪ್ಪು ಸಂದೇಶವನ್ನು ರವಾನಿಸುತ್ತಿದ್ದಾರೆ.

Published On - 7:36 pm, Mon, 19 October 20

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ