AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಸಹೋದರಿ ಕೊರೊನಾಗೆ ಬಲಿ

ಕೆಲವು ದಿನಗಳ ಹಿಂದೆ, ಕೊರೊನಾದಿಂದ ವೇದ ತನ್ನ ತಾಯಿಯನ್ನು ಕಳೆದುಕೊಂಡಿದ್ದರು. ಇಂತಹ ಪರಿಸ್ಥಿತಿಯಲ್ಲಿ, ಕುಟುಂಬದ ಇನ್ನೊಬ್ಬ ಸದಸ್ಯರು ಈ ವೈರಸ್‌ನಿಂದ ಸಾವನ್ನಪ್ಪಿದ್ದಾರೆ.

ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಸಹೋದರಿ ಕೊರೊನಾಗೆ ಬಲಿ
ವೇದಾ ಕೃಷ್ಣಮೂರ್ತಿ
ಪೃಥ್ವಿಶಂಕರ
|

Updated on:May 06, 2021 | 4:27 PM

Share

ಕೊರೊನಾ ವೈರಸ್‌ನಿಂದಾಗಿ ಪ್ರತಿದಿನ ಮನಸಿಗೆ ತುಂಬಾ ವೇದನೆ ತರುವ ಸುದ್ದಿಗಳು ಹೊರಬರುತ್ತಿವೆ. ಈಗ ಅದೇ ರೀತಿಯ ಸುದ್ದಿಯೊಂದು ಬಂದಿದ್ದು, ಭಾರತೀಯ ಕ್ರಿಕೆಟ್​ನ ಮಹಿಳಾ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರ ಸಹೋದರಿ ಕೊರೊನಾದಿಂದ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ, ಕೊರೊನಾದಿಂದ ವೇದ ತನ್ನ ತಾಯಿಯನ್ನು ಕಳೆದುಕೊಂಡಿದ್ದರು. ಇಂತಹ ಪರಿಸ್ಥಿತಿಯಲ್ಲಿ, ಕುಟುಂಬದ ಇನ್ನೊಬ್ಬ ಸದಸ್ಯರು ಈ ವೈರಸ್‌ನಿಂದ ಸಾವನ್ನಪ್ಪಿದ್ದಾರೆ. ವೇದ ಸಹೋದರಿ ವತ್ಸಲಾ ಶಿವಕುಮಾರ್ ಕಳೆದ ಒಂದು ತಿಂಗಳಿನಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ವೇದಾ ಅವರ ಕೋಚ್ ಇರ್ಫಾನ್ ಸೈತ್ ಅವರು ವತ್ಸಲಾ ಸಾವಿನ ಬಗ್ಗೆ ಇನ್‌ಸ್ಟಾಗ್ರಾಮ್ ಮೂಲಕ ಮಾಹಿತಿ ನೀಡಿದ್ದಾರೆ.

ಇದಕ್ಕೂ ಮುನ್ನ ಏಪ್ರಿಲ್ 24 ರಂದು ವೇದಾ ಅವರ ತಾಯಿಯ ಸಾವಿನ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. ಆ ಸಮಯದಲ್ಲಿ ತನ್ನ ಸಹೋದರಿಯ ಚೇತರಿಕೆಗಾಗಿ ಪ್ರಾರ್ಥಿಸುವಂತೆ ಜನರನ್ನು ಕೇಳಿಕೊಂಡಿದ್ದರು. ಆದರೆ ಜನರ ಪ್ರಾರ್ಥನೆ ಪಲಿಸಲಿಲ್ಲ. ತಾಯಿಯ ನಿಧನಕ್ಕೆ ಸಂಬಂಧಿಸಿದಂತೆ ಬಂದ ಸಂದೇಶಗಳಿಗೆ ಎಲ್ಲ ಜನರಿಗೆ ಧನ್ಯವಾದಗಳು. ಕುಟುಂಬದಲ್ಲಿ ತಾಯಿಯಿಲ್ಲದಿರುವುದು ಏನು ಎಂದು ನೀವು ಎಲ್ಲರೂ ಅರ್ಥಮಾಡಿಕೊಳ್ಳಬಹುದು. ನಾವು ಈಗ ನಮ್ಮ ತಂಗಿಗಾಗಿ ಪ್ರಾರ್ಥಿಸುತ್ತಿದ್ದೇವೆ. ನನ್ನ ಪರೀಕ್ಷೆ ನೆಗೆಟಿವ್ ಬಂದಿದೆ ಮತ್ತು ನೀವು ನಮ್ಮ ಗೌಪ್ಯತೆಯನ್ನು ಗೌರವಿಸಿದರೆ ಅದು ಚೆನ್ನಾಗಿರುತ್ತದೆ ಎಂದು ತಾಯಿಯ ನಿಧನದ ಬಗ್ಗೆ ವೇದ ಹೀಗೆ ಹೇಳಿದ್ದರು.

ವೇದ ವೃತ್ತಿಜೀವನ ವೇದಾ ಕೃಷ್ಣಮೂರ್ತಿ ಇದುವರೆಗೆ ಭಾರತಕ್ಕಾಗಿ 48 ಏಕದಿನ ಪಂದ್ಯಗಳನ್ನು ಆಡಿದ್ದು, 25.90 ಸರಾಸರಿಯಲ್ಲಿ 829 ರನ್ ಗಳಿಸಿದ್ದಾರೆ. ಇದಲ್ಲದೆ, ಅವರು 76 ಟಿ 20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ, 18.61 ಸರಾಸರಿಯಲ್ಲಿ 875 ರನ್ ಗಳಿಸಿದ್ದಾರೆ. 2020 ರ ಮಾರ್ಚ್ 8 ರಂದು ನಡೆದ ಟಿ 20 ಮಹಿಳಾ ವಿಶ್ವಕಪ್‌ನ ಫೈನಲ್‌ನಲ್ಲಿ ವೇದಾ ಭಾರತಕ್ಕಾಗಿ ಕೊನೆಯ ಪಂದ್ಯವನ್ನು ಆಡಿದ್ದು, ಇದರಲ್ಲಿ ಆಸ್ಟ್ರೇಲಿಯಾ ಭಾರತವನ್ನು 85 ರನ್‌ಗಳಿಂದ ಸೋಲಿಸಿತು. ಆ ಪಂದ್ಯದಲ್ಲಿ ಭಾರತ ತಂಡ ಕೇವಲ 99 ರನ್‌ಗಳಿಗೆ ಆಲ್​ಔಟಾಯಿತು.

ಆ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬೌಲರ್ ಮೇಗನ್ ಪ್ರಮುಖ ಪಾತ್ರ ವಹಿಸಿ ಭಾರತವನ್ನು 99 ರನ್​ಗೆ ಆಲ್​ಔಟ್​ ಮಾಡಿದ್ದರು. ಬಲಗೈ ವೇಗದ ಬೌಲರ್ ಕೇವಲ 3.1 ಓವರ್‌ಗಳಲ್ಲಿ 4 ವಿಕೆಟ್ ಪಡೆದರು. ಆ ಟಿ 20 ಫೈನಲ್‌ನಲ್ಲಿ ವೇದಾ ಕೃಷ್ಣಮೂರ್ತಿ 19 ಎಸೆತಗಳನ್ನು ಎದುರಿಸಿ 24 ರನ್ ಬಾರಿಸಿದ್ದರು.

Published On - 4:25 pm, Thu, 6 May 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ