AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಸಹೋದರಿ ಕೊರೊನಾಗೆ ಬಲಿ

ಕೆಲವು ದಿನಗಳ ಹಿಂದೆ, ಕೊರೊನಾದಿಂದ ವೇದ ತನ್ನ ತಾಯಿಯನ್ನು ಕಳೆದುಕೊಂಡಿದ್ದರು. ಇಂತಹ ಪರಿಸ್ಥಿತಿಯಲ್ಲಿ, ಕುಟುಂಬದ ಇನ್ನೊಬ್ಬ ಸದಸ್ಯರು ಈ ವೈರಸ್‌ನಿಂದ ಸಾವನ್ನಪ್ಪಿದ್ದಾರೆ.

ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಸಹೋದರಿ ಕೊರೊನಾಗೆ ಬಲಿ
ವೇದಾ ಕೃಷ್ಣಮೂರ್ತಿ
ಪೃಥ್ವಿಶಂಕರ
|

Updated on:May 06, 2021 | 4:27 PM

Share

ಕೊರೊನಾ ವೈರಸ್‌ನಿಂದಾಗಿ ಪ್ರತಿದಿನ ಮನಸಿಗೆ ತುಂಬಾ ವೇದನೆ ತರುವ ಸುದ್ದಿಗಳು ಹೊರಬರುತ್ತಿವೆ. ಈಗ ಅದೇ ರೀತಿಯ ಸುದ್ದಿಯೊಂದು ಬಂದಿದ್ದು, ಭಾರತೀಯ ಕ್ರಿಕೆಟ್​ನ ಮಹಿಳಾ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರ ಸಹೋದರಿ ಕೊರೊನಾದಿಂದ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ, ಕೊರೊನಾದಿಂದ ವೇದ ತನ್ನ ತಾಯಿಯನ್ನು ಕಳೆದುಕೊಂಡಿದ್ದರು. ಇಂತಹ ಪರಿಸ್ಥಿತಿಯಲ್ಲಿ, ಕುಟುಂಬದ ಇನ್ನೊಬ್ಬ ಸದಸ್ಯರು ಈ ವೈರಸ್‌ನಿಂದ ಸಾವನ್ನಪ್ಪಿದ್ದಾರೆ. ವೇದ ಸಹೋದರಿ ವತ್ಸಲಾ ಶಿವಕುಮಾರ್ ಕಳೆದ ಒಂದು ತಿಂಗಳಿನಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ವೇದಾ ಅವರ ಕೋಚ್ ಇರ್ಫಾನ್ ಸೈತ್ ಅವರು ವತ್ಸಲಾ ಸಾವಿನ ಬಗ್ಗೆ ಇನ್‌ಸ್ಟಾಗ್ರಾಮ್ ಮೂಲಕ ಮಾಹಿತಿ ನೀಡಿದ್ದಾರೆ.

ಇದಕ್ಕೂ ಮುನ್ನ ಏಪ್ರಿಲ್ 24 ರಂದು ವೇದಾ ಅವರ ತಾಯಿಯ ಸಾವಿನ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. ಆ ಸಮಯದಲ್ಲಿ ತನ್ನ ಸಹೋದರಿಯ ಚೇತರಿಕೆಗಾಗಿ ಪ್ರಾರ್ಥಿಸುವಂತೆ ಜನರನ್ನು ಕೇಳಿಕೊಂಡಿದ್ದರು. ಆದರೆ ಜನರ ಪ್ರಾರ್ಥನೆ ಪಲಿಸಲಿಲ್ಲ. ತಾಯಿಯ ನಿಧನಕ್ಕೆ ಸಂಬಂಧಿಸಿದಂತೆ ಬಂದ ಸಂದೇಶಗಳಿಗೆ ಎಲ್ಲ ಜನರಿಗೆ ಧನ್ಯವಾದಗಳು. ಕುಟುಂಬದಲ್ಲಿ ತಾಯಿಯಿಲ್ಲದಿರುವುದು ಏನು ಎಂದು ನೀವು ಎಲ್ಲರೂ ಅರ್ಥಮಾಡಿಕೊಳ್ಳಬಹುದು. ನಾವು ಈಗ ನಮ್ಮ ತಂಗಿಗಾಗಿ ಪ್ರಾರ್ಥಿಸುತ್ತಿದ್ದೇವೆ. ನನ್ನ ಪರೀಕ್ಷೆ ನೆಗೆಟಿವ್ ಬಂದಿದೆ ಮತ್ತು ನೀವು ನಮ್ಮ ಗೌಪ್ಯತೆಯನ್ನು ಗೌರವಿಸಿದರೆ ಅದು ಚೆನ್ನಾಗಿರುತ್ತದೆ ಎಂದು ತಾಯಿಯ ನಿಧನದ ಬಗ್ಗೆ ವೇದ ಹೀಗೆ ಹೇಳಿದ್ದರು.

ವೇದ ವೃತ್ತಿಜೀವನ ವೇದಾ ಕೃಷ್ಣಮೂರ್ತಿ ಇದುವರೆಗೆ ಭಾರತಕ್ಕಾಗಿ 48 ಏಕದಿನ ಪಂದ್ಯಗಳನ್ನು ಆಡಿದ್ದು, 25.90 ಸರಾಸರಿಯಲ್ಲಿ 829 ರನ್ ಗಳಿಸಿದ್ದಾರೆ. ಇದಲ್ಲದೆ, ಅವರು 76 ಟಿ 20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ, 18.61 ಸರಾಸರಿಯಲ್ಲಿ 875 ರನ್ ಗಳಿಸಿದ್ದಾರೆ. 2020 ರ ಮಾರ್ಚ್ 8 ರಂದು ನಡೆದ ಟಿ 20 ಮಹಿಳಾ ವಿಶ್ವಕಪ್‌ನ ಫೈನಲ್‌ನಲ್ಲಿ ವೇದಾ ಭಾರತಕ್ಕಾಗಿ ಕೊನೆಯ ಪಂದ್ಯವನ್ನು ಆಡಿದ್ದು, ಇದರಲ್ಲಿ ಆಸ್ಟ್ರೇಲಿಯಾ ಭಾರತವನ್ನು 85 ರನ್‌ಗಳಿಂದ ಸೋಲಿಸಿತು. ಆ ಪಂದ್ಯದಲ್ಲಿ ಭಾರತ ತಂಡ ಕೇವಲ 99 ರನ್‌ಗಳಿಗೆ ಆಲ್​ಔಟಾಯಿತು.

ಆ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬೌಲರ್ ಮೇಗನ್ ಪ್ರಮುಖ ಪಾತ್ರ ವಹಿಸಿ ಭಾರತವನ್ನು 99 ರನ್​ಗೆ ಆಲ್​ಔಟ್​ ಮಾಡಿದ್ದರು. ಬಲಗೈ ವೇಗದ ಬೌಲರ್ ಕೇವಲ 3.1 ಓವರ್‌ಗಳಲ್ಲಿ 4 ವಿಕೆಟ್ ಪಡೆದರು. ಆ ಟಿ 20 ಫೈನಲ್‌ನಲ್ಲಿ ವೇದಾ ಕೃಷ್ಣಮೂರ್ತಿ 19 ಎಸೆತಗಳನ್ನು ಎದುರಿಸಿ 24 ರನ್ ಬಾರಿಸಿದ್ದರು.

Published On - 4:25 pm, Thu, 6 May 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್