AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy: ಸೆಮಿಫೈನಲ್​ನಲ್ಲಿ ಬಲಿಷ್ಠ ಕರ್ನಾಟಕಕ್ಕೆ ಅಜೇಯ ಮುಂಬೈ ಎದುರಾಳಿ

ಆರಂಭ ಆಟಗಾರರಾದ ನಾಯಕ ರವಿಕುಮಾರ್ ಸಮರ್ಥ್ ಮತ್ತು ಉತ್ಕೃಷ್ಟ ಫಾರ್ಮ್​​ನಲ್ಲಿರುವ ದೇವದತ್ ಪಡಿಕ್ಕಲ್ ಎದುರಾಳಿ ಬೌಲರ್​ಗಳನ್ನು ಗೋಳು ಹೊಯ್ದುಕೊಳ್ಳುತ್ತಿದ್ದಾರೆ. ಪಡಿಕ್ಕಲ್ ಸತತ 4 ಶತಕಗಳನ್ನು ಬಾರಿಸಿ ಲಿಸ್ಟ್ ಎ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಭಾರತದ ಮೊದಲ ಮತ್ತು ವಿಶ್ವದ ಕೇವಲ ಮೂರನೇ ಆಟಗಾರನೆಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

Vijay Hazare Trophy: ಸೆಮಿಫೈನಲ್​ನಲ್ಲಿ ಬಲಿಷ್ಠ ಕರ್ನಾಟಕಕ್ಕೆ ಅಜೇಯ ಮುಂಬೈ ಎದುರಾಳಿ
ದೇವದತ್ ಪಡಿಕ್ಕಲ್
ಅರುಣ್​ ಕುಮಾರ್​ ಬೆಳ್ಳಿ
|

Updated on:Mar 10, 2021 | 10:52 PM

Share

ದೆಹಲಿ: ವಿಜಯ ಹಜಾರೆ ಟ್ರೋಫಿ 2021 ಅಂತಿಮ ಹಂತವನ್ನು ತಲುಪಿದೆ. ನಾಳೆ ನಡೆಯಲಿರುವ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ, ಭರ್ಜರಿ ಫಾರ್ಮ್​ನಲ್ಲಿರುವ ಕರ್ನಾಟಕ ತಂಡವು ಟೂರ್ನಿಯಲ್ಲಿ ಅಜೇಯವಾಗಿ ಉಳಿದಿರುವ ಮುಂಬೈ ತಂಡವನ್ನು ಹಾಗೂ ಇನ್ನೊಂದು ಸೆಮಿಫೈನಲ್​ನಲ್ಲಿ ಗುಜರಾತ್ ತಂಡವು ಉತ್ತರ ಪ್ರದೇಶವನ್ನು ಎದುರಿಸಲಿವೆ. ಟೂರ್ನಮೆಂಟಿನ ಮೊದಲ ಪಂದ್ಯದಲ್ಲಿ ಅಲ್ಪ ಅಂತರದಿಂದ ಉತ್ತರ ಪ್ರದೇಶಕ್ಕೆ ಸೋತ ಕರ್ನಾಟಕ ನಂತರ ಗೆಲುವಿನ ನಾಗಾಲೋಟ ಶುರು ಮಾಡಿತು. ಆರಂಭ ಆಟಗಾರರಾದ ನಾಯಕ ರವಿಕುಮಾರ್ ಸಮರ್ಥ್ ಮತ್ತು ಉತ್ಕೃಷ್ಟ ಫಾರ್ಮ್​​ನಲ್ಲಿರುವ ದೇವದತ್ ಪಡಿಕ್ಕಲ್ ಎದುರಾಳಿ ಬೌಲರ್​ಗಳನ್ನು ಗೋಳು ಹೊಯ್ದುಕೊಳ್ಳುತ್ತಿದ್ದಾರೆ. ಪಡಿಕ್ಕಲ್ ಸತತ 4 ಶತಕಗಳನ್ನು ಬಾರಿಸಿ ಲಿಸ್ಟ್ ಎ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಭಾರತದ ಮೊದಲ ಮತ್ತು ವಿಶ್ವದ ಕೇವಲ ಮೂರನೇ ಆಟಗಾರನೆಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಕೇರಳ ವಿರುದ್ಧ ಆಡಿದ ಕ್ವಾರ್ಟರ್​ ಫೈನಲ್ ಪಂದ್ಯದಲ್ಲಿ ಸಮರ್ಥ (192) ಮತ್ತು ಪಡಿಕ್ಕಲ್ (101) ಬಾರಿಸಿ ತಮ್ಮ ಟೀಮಿಗೆ 80 ರನ್​ಗಳ ಸುಲಭ ಜಯ ಕೊಡಿಸಿದರು. 6 ಇನ್ನಿಂಗ್ಸಗಳಲ್ಲಿ ಇವರಿಬ್ಬರು ಇದುವರೆಗೆ 1,273 ರನ್ ಕಲೆ ಹಾಕಿದ್ದಾರೆ. ಈ ಸಾಲಿನ ಪಂದ್ಯಾವಳಿಯಲ್ಲಿ ಪಡಿಕ್ಕಲ್ ಅತಿ ಹೆಚ್ಚು ರನ್ (673) ಗಳಿಸಿರುವ ಆಟಗಾರ ಎನಿಸಿಕೊಂಡಿದ್ದಾರೆ. ರನ್ ಗಳಿಕೆಯಲ್ಲಿ ಅವರನನ್ನು ಹಿಂಬಾಲಿಸುತ್ತಿರುವ ಸಮರ್ಥ 605 ರನ್ ಶೇಖರಿಸಿದ್ದಾರೆ.

ಅತ್ತ, ಮುಂಬೈ ತಾನಾಡಿರುವ ಎಲ್ಲ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಕ್ವಾರ್ಟರ್​ ಫೈನಲ್​ನಲ್ಲಿ ಅದು ಸೌರಾಷ್ಟ್ರವನ್ನು 9 ವಿಕೆಟ್​​ಗಳಿಂದ ಸೋಲಿಸಿತು. ಟೆಸ್ಟ್​ಗಳಲ್ಲಿ ಭಾರತದ ಪರ ಇನ್ನಿಂಗ್ಸ್ ಆರಂಭಿಸುವ ಪೃಥ್ವಿ ಶಾ ಕೇವಲ 123 ಎಸೆತಗಳಲ್ಲಿ ಅಜೇಯ 185 ರನ್ ಬಾರಿಸಿದರು. 285 ರನ್​ಗಳ ಮೊತ್ತವನ್ನು ಮುಂಬೈ 42 ನೇ ಓವರ್​ನಲ್ಲಿಯೇ ದಾಟಿತು. ಮತ್ತೊಂದು ಗಮನಾರ್ಹ ಅಂಶವೆಂದರೆ ಅಡಿರುವ ಎಲ್ಲ ಪಂದ್ಯಗಳನ್ನು ಮುಂಬೈ ಭಾರಿ ಅಂತರದಿಂದ ಗೆದ್ದಿದೆ.

Prithvi Shaw

ಪೃಥ್ವಿ ಶಾ

ಕರ್ನಾಟಕ ಮತ್ತು ಮುಂಬೈ ನಡುವಿನ ಸೆಮಿಫೈನಲ್ ಗುರುವಾರದಂದು ದೆಹಲಿಯ ಪಾಲಂ ಎ ಮೈದಾನದಲ್ಲಿ ನಡೆಯಲಿದೆ. ಇಲ್ಲಿನ ಪಿಚ್ ಬ್ಯಾಟ್ಸ್​ಮನ್​ಗಳಿಗೆ ಸ್ವರ್ಗವಾಗಿರುವುದರಿಂದ ನಾಳಿನ ಪಂದ್ಯದಲ್ಲಿ ರನ್​ ಹೊಳೆಯನ್ನು ನಿರೀಕ್ಷಿಸಬಹುದು.

ಮತ್ತೊಂದು ಸೆಮಿಫೈನಲ್​ನಲ್ಲಿ ಗುಜರಾತ್ ಮತ್ತು ಉತ್ತರ ಪ್ರದೇಶ ಸೆಣಸಲಿವೆ. ಕ್ವಾರ್ಟರ್​ ಫೈನಲ್​ನಲ್ಲಿ ಉತ್ತರ ಪ್ರದೇಶವು ದೆಹಲಿಯನ್ನು 46ರನ್​ಗಳಿಂದ ಸೋಲಿಸಿತು. ಗುಜರಾತ್ ಸಹ ಈ ಸಾಲಿನ ಟೂರ್ನಿಯಲ್ಲಿ ಅಜೇಯವಾಗಿ ಉಳಿದಿದೆ. ಈ ತಂಡದ ಟಾಪ್ ಆರ್ಡರ್ ಪ್ರತಿ ಪಂದ್ಯದಲ್ಲಿ ಉತ್ತಮ ಪ್ರದರ್ಶನಗಳನ್ನು ನೀಡುತ್ತಿದೆ. ಕ್ವಾರ್ಟರ್​ ಫೈನಲ್​ನಲ್ಲಿ ತಂಡದ ನಾಯಕ ಪ್ರಿಯಾಂಕ್ ಪಾಂಚಾಲ್ 134 ರನ್​ಗಳ ಅಮೋಘ ಇನ್ನಿಂಗ್ಸ್ ಆಡಿದರು.

ಉತ್ತರ ಪ್ರದೇಶ ಸಹ ತನ್ನ ಟಾಪ್​ ಆರ್ಡರ್​ ಬ್ಯಾಟ್ಸ್​ಮನ್​ಗಳ ಹೆಚ್ಚು ಆತುಕೊಂಡಿದೆ. ಅನುಭವಿ ಬೌಲರ್ ಪಿಯುಶ್​ ಚಾವ್ಲಾ ಅವರಲ್ಲಿ ಈಗಲೂ ಪಂದ್ಯ ಗೆದ್ದು ಕೊಡುವ ಸಾಮರ್ಥ್ಯವಿದೆ. ಗುಜರಾತ್ ಮತ್ತು ಯುಪಿ ನಡುವಿನ ಸೆಮಿಫೈನಲ್ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಾಳೆ (ಗುರುವಾರ) ನಡೆಯಲಿದೆ.

ಇದನ್ನೂ ಓದಿ: ವಿಜಯ ಹಜಾರೆ ಟ್ರೋಫಿ: ಸತತ 4ನೇ ಶತಕ ದಾಖಲಿಸಿದ ದೇವದತ್ ಪಡಿಕ್ಕಲ್, ಈ ಸಾಧನೆಗೈದ ವಿಶ್ವದ 3ನೇ ಆಟಗಾರ

Published On - 10:51 pm, Wed, 10 March 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್