AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಮನೀಶ್​ ಪಾಂಡೆ ಔಟ್ ಆದಾಗ ಕವಿಯಾ ಮಾರನ್ ರಿಯಾಕ್ಟ್ ಮಾಡಿದ್ದು ಹೀಗೆ; ವಿಡಿಯೋ ವೈರಲ್​

ಶಹಬಾಜ್​ ವಿಕೆಟ್​ ಆದದ್ದನ್ನು ವೀಕ್ಷಿಸುತ್ತಿದ್ದ ಎಸ್​ಆರ್​ಹೆಚ್​ ಸಿಇಒ ಕವಿಯಾ ಮಾರನ್ ತಲೆಮೇಲೆ ಕೈಹೊತ್ತ ವಿಡಿಯೋ ಇದೀಗ ವೈರಲ್​ ಆಗಿದೆ.

IPL 2021: ಮನೀಶ್​ ಪಾಂಡೆ ಔಟ್ ಆದಾಗ ಕವಿಯಾ ಮಾರನ್ ರಿಯಾಕ್ಟ್ ಮಾಡಿದ್ದು ಹೀಗೆ; ವಿಡಿಯೋ ವೈರಲ್​
ಎಸ್​ಆರ್​ಹೆಚ್​ ಸಿಇಒ ಕವಿಯಾ ಮಾರನ್
shruti hegde
| Edited By: |

Updated on:Apr 15, 2021 | 6:07 PM

Share

ಐಪಿಎಲ್​ 2021 ರಲ್ಲಿ ಸನ್​ರೈಸರ್ಸ್ ಹೈದರಾಬಾದ್​ ವರ್ಸಸ್​ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದ 17ನೇ ಓವರ್​ನಲ್ಲಿ ಶಹಬಾಜ್​ ಅಹ್ಮದ್ ವಿಕೆಟ್​ ಕಬಳಿಸಿ ಇಡೀ ಪಂದ್ಯದ ದಿಕ್ಕನ್ನೇ ಬದಲಾಯಿಸಿದರು. ಶಹಬಾಜ್​ ಸಾಲುಸಾಲಾಗಿ ವಿಕೆಟ್​ ಪಡೆದದ್ದನ್ನು ವೀಕ್ಷಿಸುತ್ತಿದ್ದ ಸನ್​ರೈಸರ್ಸ್ ಹೈದರಾಬಾದ್​ ಸಿಇಒ ಕವಿಯಾ ಮಾರನ್ ತಲೆಮೇಲೆ ಕೈಹೊತ್ತ ವಿಡಿಯೋ ಇದೀಗ ವೈರಲ್​ ಆಗಿದೆ.

ಪಂದ್ಯದ ಕೊನೆಯಲ್ಲಿ ಹೈದರಾಬಾದ್​ಗೆ 24 ಎಸೆತದಲ್ಲಿ 35 ರನ್​ ಬೇಕಿತ್ತು. ಮನೀಶ್​ ಪಾಂಡೆ ಮತ್ತು ಜಾನಿ ಬೈರ್​ಸ್ಟೋ ಕ್ರಿಸ್​ನಲ್ಲಿ ನಿಂತಿದ್ದರು. 17ನೇ ಓವರ್​ನಲ್ಲಿ ಶಹಬಾಜ್​ ಅಹ್ಮದ್ ಬಂದು ಅವರಿಬ್ಬರನ್ನೂ ಔಟ್​ ಮಾಡಿದರು. ಜೊತೆಗೆ ಅಬ್ದುಲ್​ ಸಮದ್​ ಅವರ ವಿಕೆಟ್​ ಕೂಡಾ ಪಡೆದರು. ಮನೀಶ್​ ಪಾಂಡೆ ವಿಕೆಟ್​ ಕಳೆದುಕೊಂಡದ್ದನ್ನು ಕಂಡ ಸನ್​ರೈಸರ್ಸ್ ಹೈದರಾಬಾದ್​​ ಸಿಇಒ ಕವಿಯಾ ಮಾರನ್​ ಆಶ್ಚರ್ಯಚಕಿತರಾದರು. ಮನೀಶ್​ ಪಾಂಡೆ ಔಟ್​ ಆಗಿರುವುದನ್ನು ಕಂಡ ಸಿಇಒ ತಲೆಮೇಲೆ ಕೈಹೊತ್ತು ಕೂತ ವಿಡಿಯೋ ಇದೀಗ ವೈರಲ್​ ಆಗಿದೆ.

ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿಗದಿತ 20 ಓವರ್​ಗಳ ಅಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 149 ರನ್ ದಾಖಲಿಸಿತ್ತು. ಈ ಮೂಲಕ ಸನ್​ರೈಸರ್ಸ್ ಹೈದರಾಬಾದ್​ಗೆ ಗೆಲ್ಲಲು 150 ರನ್​ಗಳ ಸುಲಭ ಟಾರ್ಗೆಟ್ ನೀಡಿತ್ತು. ನಂತರ, ಹೈದರಾಬಾದ್ ತಂಡದ ಪರ ನಾಯಕ ಡೇವಿಡ್ ವಾರ್ನೆರ್ ಹಾಗೂ ಮನೀಶ್ ಪಾಂಡೆ ಉತ್ತಮ ಆಟವಾಡಿ ಗೆಲ್ಲುವ ಸೂಚನೆ ನೀಡಿದ್ದರು. ಆದರೆ, ಅವರಿಬ್ಬರು ಔಟ್ ಆದ ಬಳಿಕ ಕ್ರೀಸ್​ಗೆ ಇಳಿದ ಆಟಗಾರರು ತಂಡವನ್ನು ಮುನ್ನಡೆಸುವ ಮನಮಾಡಲಿಲ್ಲ. ಆರ್​ಸಿಬಿ ಬೌಲರ್​ಗಳು ಡೆತ್ ಓವರ್​ಗಳಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದರು. ಸನ್​ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್ ಲೈನ್​ಅಪ್ ಧೂಳಿಪಟ ಮಾಡಿದರು. ಆರ್​ಸಿಬಿ ಪರ ಶಹಬಾಜ್ ಅಹ್ಮದ್ 2 ಓವರ್ ಬೌಲ್ ಮಾಡಿ ಕೇವಲ 7 ರನ್ ಬಿಟ್ಟುಕೊಟ್ಟು 3 ವಿಕೆಟ್ ಕಬಳಿಸಿದರು. ಒಂದೇ ಓವರ್​ನಲ್ಲಿ ಶಹಬಾಜ್ 3 ವಿಕೆಟ್ ಪಡೆದಿದ್ದು ಪಂದ್ಯದ ದಿಕ್ಕನ್ನೇ ಬದಲಿಸಿತು.

ಈ ಮೂಲಕ, ಆರ್​ಸಿಬಿ-ಎಸ್​ಆರ್​ಎಚ್ ನಡುವಿನ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ರನ್​ಗಳ ರೋಚಕ ಗೆಲುವು ದಾಖಲಿಸಿದೆ. ಆರ್​ಸಿಬಿ ಪರ ನಾಯಕ ವಿರಾಟ್ ಕೊಹ್ಲಿ 33(29) ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ 59(41) ಹೊರತುಪಡಿಸಿ ಉಳಿದ ಆಟಗಾರರು ಇನ್ನಿಂಗ್ಸ್ ಕಟ್ಟುವ ಆಟ ಆಡಿಲ್ಲ. ಸನ್​ರೈಸರ್ಸ್ ಹೈದರಾಬಾದ್ ಪರ ಬೌಲರ್​ಗಳು ಅತ್ಯುತ್ತಮ ಪ್ರದರ್ಶನ ತೋರಿದ್ದರು. ರಶೀದ್ ಖಾನ್ 4 ಓವರ್​ನಲ್ಲಿ 18 ರನ್ ಬಿಟ್ಟುಕೊಟ್ಟು 2 ವಿಕೆಟ್ ಕಬಳಿಸಿದ್ದರು. ಜೇಸನ್ ಹೋಲ್ಡರ್ 4 ಓವರ್​ನಲ್ಲಿ 30 ರನ್ ನೀಡಿ 3 ವಿಕೆಟ್ ಪಡೆದಿದ್ದರು.

ಇದನ್ನೂ ಓದಿ: SRH vs RCB, IPL 2021 Match 6 Result: ಶಹಬಾಜ್ ಅಹ್ಮದ್ ಮ್ಯಾಜಿಕ್! ರೋಚಕ ಪಂದ್ಯದಲ್ಲಿ ಗೆದ್ದ ಆರ್​ಸಿಬಿ; ಸನ್​ರೈಸರ್ಸ್​ಗೆ ಮತ್ತೆ ಸೋಲು

ಇದನ್ನೂ ಓದಿ: SRH vs RCB: ಕೈತಪ್ಪಿ ಹೋಗಿದ್ದ ಪಂದ್ಯಕ್ಕೆ ಟರ್ನ್​ ನೀಡಿದ್ದು ಶಹಬಾಜ್​ ಮಾಡಿದ ಆ ಒಂದು ಓವರ್​!

Published On - 6:06 pm, Thu, 15 April 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ