AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಶರ್ಮಾ- ವಿರಾಟ್ ಕೊಹ್ಲಿ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಒಂದೇ ದಿನದಲ್ಲಿ ಹರಿದು ಬಂದ ಮೊತ್ತವೆಷ್ಟು ಗೊತ್ತಾ?

ಕೊಹ್ಲಿ ಹಾಗೂ ಅನುಷ್ಕಾ ಅವರ ಈ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದ್ದು, ಇಂದು ಒಂದೇ 3.6 ಕೋಟಿಗೂ ಹೆಚ್ಚಿನ ದೇಣಿಗೆ ಸಂಗ್ರಹವಾಗಿದೆ.

ಅನುಷ್ಕಾ ಶರ್ಮಾ- ವಿರಾಟ್ ಕೊಹ್ಲಿ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಒಂದೇ ದಿನದಲ್ಲಿ ಹರಿದು ಬಂದ ಮೊತ್ತವೆಷ್ಟು ಗೊತ್ತಾ?
ಅನುಷ್ಕಾ ಶರ್ಮಾ - ವಿರಾಟ್ ಕೊಯ್ಲಿ
ಪೃಥ್ವಿಶಂಕರ
|

Updated on: May 08, 2021 | 4:35 PM

Share

ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಮೇ 7 ರ ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಹಂಚಿಕೊಂಡಿದ್ದು, ಕೋವಿಡ್ -19 ಪರಿಹಾರಕ್ಕಾಗಿ ನಿಧಿ ಸಂಗ್ರಹವನ್ನು ಪ್ರಾರಂಭಿಸಿದ್ದೇವೆ ಎಂದು ಘೋಷಿಸಿದ್ದರು. ಸ್ವತಃ 2 ಕೋಟಿ ರೂ. ದೇಣಿಗೆ ನೀಡಿದ ನಂತರ, ಅವರು ತಮ್ಮ ಅಭಿಮಾನಿಗಳಿಗೆ ಅದೇ ರೀತಿ ದೇಣಿಗೆ ನೀಡಲು ಮತ್ತು ಕೊರೊನಾ ವೈರಸ್ ವಿರುದ್ಧ ಹೋರಾಡಲು ಸಹಾಯ ಮಾಡುವಂತೆ ಒತ್ತಾಯಿಸಿದರು. ಕೊಹ್ಲಿ ಹಾಗೂ ಅನುಷ್ಕಾ ಅವರ ಈ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದ್ದು, ಇಂದು ಒಂದೇ 3.6 ಕೋಟಿಗೂ ಹೆಚ್ಚಿನ ದೇಣಿಗೆ ಸಂಗ್ರಹವಾಗಿದೆ. ಈ ಕಾರಣಕ್ಕೆ ಸಹಾಯ ಮಾಡಿದ ಅಭಿಮಾನಿಗಳಿಗೆ ಅನುಷ್ಕಾ ಮತ್ತು ವಿರಾಟ್ ಧನ್ಯವಾದ ಅರ್ಪಿಸಿದರು.

3.6 ಕೋಟಿಗೂ ಹೆಚ್ಚು ಹಣ ಸಂಗ್ರಹವಾಗಿದೆ ಮೇ 8, ಶನಿವಾರ, ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು 3.6 ಕೋಟಿಗೂ ಹೆಚ್ಚು ಹಣ ಸಂಗ್ರಹವಾಗಿದೆ ಎಂದು ಅಭಿಮಾನಿಗಳಿಗೆ ಮಾಹಿತಿ ನೀಡಿದರು ಮತ್ತು ಕೊಡುಗೆ ನೀಡಿದ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಇಲ್ಲಿಯವರೆಗೆ ದೇಣಿಗೆ ನೀಡಿದ ಎಲ್ಲರಿಗೂ ಕೃತಜ್ಞತೆ. ನಿಮ್ಮ ಕೊಡುಗೆಗೆ ಧನ್ಯವಾದಗಳು. ನಾವು ಅರ್ಧ ದಾರಿಯನ್ನು ದಾಟಿದ್ದೇವೆ, ಮುಂದುವರಿಯೋಣ ಎಂದು ಅನುಷ್ಕಾ ಹೇಳಿಕೊಂಡಿದ್ದಾರೆ.

ಎರಡು ಕೋಟಿ ರೂಪಾಯಿ ದೇಣಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ನಿನ್ನೆ ಎರಡು ಕೋಟಿ ರೂಪಾಯಿ ದೇಣಿಗೆ ನೀಡಿವುದರ ಜೊತೆಗೆ ಕೋವಿಡ್ -19 ಪರಿಹಾರಕ್ಕಾಗಿ ಹಣವನ್ನು ಸಂಗ್ರಹಿಸಲು ಅನುಷ್ಕಾ ಮತ್ತು ನಾನು (ವಿರಾಟ್) ಕೆಟ್ಟೊದಲ್ಲಿ ಅಭಿಯಾನವನ್ನು (campaign on Ketto) ಪ್ರಾರಂಭಿಸಿದ್ದೇವೆ ಮತ್ತು ನಿಮ್ಮ ಬೆಂಬಲಕ್ಕೆ ನಾವು ಕೃತಜ್ಞರಾಗಿರುತ್ತೇವೆ. ಜೀವ ಉಳಿಸಲು ಯಾವುದೇ ಪ್ರಮಾಣವು ತುಂಬಾ ಚಿಕ್ಕದಲ್ಲ. ಈ ಹೋರಾಟದಲ್ಲಿ ನಿಮ್ಮ ಸಹಾಯ ಅತ್ಯಗತ್ಯ. ನಮ್ಮ ಈ ಅಭಿಯಾನದಲ್ಲಿ ನೀವು ಕೈಜೋಡಿಸಿ. ನಮ್ಮ ದೇಶವನ್ನು ಸುರಕ್ಷಿತವಾಗಿ ಮತ್ತು ಸದೃಢವಾಗಿಡಲು ನಮ್ಮ ಕೈಲಾದದ್ದನ್ನು ಮಾಡೋಣ ಎಂದು ವಿರಾಟ್ ಕೊಹ್ಲಿ ಸಾರ್ವಜನಿಕರಿಗೆ ಮನವಿ ಮಾಡಿದ್ದರು.

ನಿಧಿಸಂಗ್ರಹವು ಏಳು ದಿನಗಳವರೆಗೆ ನಡೆಯಲ್ಲಿದ್ದು ಸಂಗ್ರಹಿಸಿದ ದೇಣಿಗೆಯನ್ನು ಸಾಂಕ್ರಾಮಿಕ ಸಮಯದಲ್ಲಿ ಆಮ್ಲಜನಕ, ವೈದ್ಯಕೀಯ ಮಾನವಶಕ್ತಿ, ವ್ಯಾಕ್ಸಿನೇಷನ್ ಜಾಗೃತಿ ಮತ್ತು ಟೆಲಿಮೆಡಿಸಿನ್ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸಿಟಿ ಅನುದಾನಕ್ಕೆ ನೀಡಲಾಗುವುದು. ಭಾರತವು ಪ್ರಸ್ತುತ ಕೋವಿಡ್ -19 ರ ಎರಡನೇ ಅಲೆಯ ಮಧ್ಯದಲ್ಲಿದೆ. ದೇಶದಲ್ಲಿ ಶುಕ್ರವಾರ 4.14 ಲಕ್ಷ ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?