AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಗೆ 31ರ ಸಂಭ್ರಮ, ಹುಟ್ಟುಹಬ್ಬ ಆಚರಿಸಲು ಪತ್ನಿ ಜೊತೆ ಭೂತಾನ್ ಗೆ ಪಯಣ

ಬ್ಯಾಟಿಂಗ್​ ಸಾಮ್ರಾಟ, ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇವತ್ತು ತಮ್ಮ 31ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ರತೀ ಬಾರಿ ಡಿಫರೆಂಟ್ ಆಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ವಿರಾಟ್ ಈ ಬಾರಿ ಪತ್ನಿ ಅನುಷ್ಕಾ ಜೊತೆ ಭೂತಾನ್​ಗೆ ತೆರಳಿದ್ದಾರೆ. 2017ರಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಡ್ರೆಸ್ಸಿಂಗ್ ರೂಮ್​ನಲ್ಲಿ ಹುಟ್ಟು ಹಬ್ಬವನ್ನ ಆಚರಿಸಿಕೊಂಡಿದ್ರು. ಕಳೆದ ವರ್ಷ ವಿರಾಟ್ ಕೊಹ್ಲಿ ಹರಿದ್ವಾರದಲ್ಲಿರೋ ಅನಂತ್ ಧಾಮ ಆತ್ಮಬೋದ ಆಶ್ರಮದಲ್ಲಿ, ಪರಮ ಶಿವನಿಗೆ ಪೂಜೆ ಸಲ್ಲಿಸೋ ಮೂಲಕ ತಮ್ಮ ಹುಟ್ಟು […]

ವಿರಾಟ್ ಗೆ 31ರ ಸಂಭ್ರಮ, ಹುಟ್ಟುಹಬ್ಬ ಆಚರಿಸಲು ಪತ್ನಿ ಜೊತೆ ಭೂತಾನ್ ಗೆ ಪಯಣ
ಸಾಧು ಶ್ರೀನಾಥ್​
|

Updated on: Nov 06, 2019 | 10:52 AM

Share

ಬ್ಯಾಟಿಂಗ್​ ಸಾಮ್ರಾಟ, ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇವತ್ತು ತಮ್ಮ 31ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ರತೀ ಬಾರಿ ಡಿಫರೆಂಟ್ ಆಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ವಿರಾಟ್ ಈ ಬಾರಿ ಪತ್ನಿ ಅನುಷ್ಕಾ ಜೊತೆ ಭೂತಾನ್​ಗೆ ತೆರಳಿದ್ದಾರೆ.

2017ರಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಡ್ರೆಸ್ಸಿಂಗ್ ರೂಮ್​ನಲ್ಲಿ ಹುಟ್ಟು ಹಬ್ಬವನ್ನ ಆಚರಿಸಿಕೊಂಡಿದ್ರು. ಕಳೆದ ವರ್ಷ ವಿರಾಟ್ ಕೊಹ್ಲಿ ಹರಿದ್ವಾರದಲ್ಲಿರೋ ಅನಂತ್ ಧಾಮ ಆತ್ಮಬೋದ ಆಶ್ರಮದಲ್ಲಿ, ಪರಮ ಶಿವನಿಗೆ ಪೂಜೆ ಸಲ್ಲಿಸೋ ಮೂಲಕ ತಮ್ಮ ಹುಟ್ಟು ಹಬ್ಬವನ್ನ ಆಚರಿಸಿಕೊಂಡಿದ್ರು. ಹೀಗೆ ಪ್ರತಿ ಬಾರಿಯೂ ಡಿಫರೆಂಟ್ ಆಗಿ ಬರ್ತ್​ಡೇ ಸೆಲಬ್ರೇಷನ್ ಮಾಡೋ ವಿರಾಟ್ ಈ ವರ್ಷದ ಹುಟ್ಟುಹಬ್ಬವನ್ನ ಭೂತಾನ್​ನಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ.

ಬಾಂಗ್ಲಾ ವಿರುದ್ಧದ ಟಿಟ್ವೆಂಟಿ ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿರುವ ವಿರಾಟ್, ಪತ್ನಿ ಅನುಷ್ಕಾ ಶರ್ಮಾ ಜೊತೆ ಭೂತಾನ್​ನಲ್ಲಿ ಜಾಲಿ ಟ್ರಿಪ್ ಮಾಡುತ್ತಿದ್ದಾರೆ. ಭೂತಾನ್​ನ ಪ್ರೇಕ್ಷಣಿಯ ಸ್ಥಳಗಳಿಗೆ ಭೇಟಿ ಕೊಡ್ತೀರೋ ಈ ಜೋಡಿ, ಅಲ್ಲಿ ತಗೆದುಕೊಂಡ ಫೋಟೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ.

ಇಂದಿಗೆ 31ನೇ ವಸಂತಕ್ಕೆ ಕಾಲಿಟ್ಟಿರುವ ವಿರಾಟ್ ಈಗಲೇ ದಿಗ್ಗಜ, ಕ್ರಿಕೆಟಿಗ ಅಂತಾ ಕರೆಸಿಕೊಂಡಿದ್ದಾರೆ. 2008ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಕೊಹ್ಲಿ ಮತ್ತೆಂದೂ ಹಿಂತಿರುಗಿ ನೋಡಲಿಲ್ಲ. ಆವತ್ತಿಗ ಸಚಿನ್ ತೆಂಡುಲ್ಕರ್ ದಾಖಲೆ ಬರೆಯೋದೇ ನನ್ನ ಜಾಯಮಾನ ಅಂತಾ ಘರ್ಜಿಸಿದ್ರೆ, ಇವತ್ತಿಗೆ ವಿರಾಟ್ ದಾಖಲೆ ಮುರಿಯೋದೇ ನನ್ನ ಜಾಯಮಾನ ಅಂತಾ ರನ್ ವೀರನಾಗಿ ಹೋರಹೊಮ್ಮಿದ್ದಾನೆ.

ಟೆಸ್ಟ್, ಏಕದಿನ ಮತ್ತು ಟಿಟ್ವೆಂಟಿ ಈ ಮೂರು ಫಾರ್ಮೆಟ್​ನಲ್ಲಿ ನಾಯಕನಾಗಿ ಟೀಮ್ ಇಂಡಿಯಾವನ್ನ ಯಶಸ್ಸಿನ ಉತ್ತುಂಗಕ್ಕೇರಿಸಿರುವ ವಿರಾಟ್​ಗೆ, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿದೆ. ಇತ್ತ ಅಭಿಮಾನಿಗಳೇ ದೇವರು ಅನ್ನೋ ವಿರಾಟ್, ಎಲ್ಲಾ ನಿಮ್ಮ ಹಾರೈಕೆ ಪ್ರೀತಿ ಅಂತಾ ಧನ್ಯವಾದಗಳನ್ನ ಹೇಳುತ್ತಿದ್ದಾರೆ.

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು