AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಗೆ 31ರ ಸಂಭ್ರಮ, ಹುಟ್ಟುಹಬ್ಬ ಆಚರಿಸಲು ಪತ್ನಿ ಜೊತೆ ಭೂತಾನ್ ಗೆ ಪಯಣ

ಬ್ಯಾಟಿಂಗ್​ ಸಾಮ್ರಾಟ, ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇವತ್ತು ತಮ್ಮ 31ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ರತೀ ಬಾರಿ ಡಿಫರೆಂಟ್ ಆಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ವಿರಾಟ್ ಈ ಬಾರಿ ಪತ್ನಿ ಅನುಷ್ಕಾ ಜೊತೆ ಭೂತಾನ್​ಗೆ ತೆರಳಿದ್ದಾರೆ. 2017ರಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಡ್ರೆಸ್ಸಿಂಗ್ ರೂಮ್​ನಲ್ಲಿ ಹುಟ್ಟು ಹಬ್ಬವನ್ನ ಆಚರಿಸಿಕೊಂಡಿದ್ರು. ಕಳೆದ ವರ್ಷ ವಿರಾಟ್ ಕೊಹ್ಲಿ ಹರಿದ್ವಾರದಲ್ಲಿರೋ ಅನಂತ್ ಧಾಮ ಆತ್ಮಬೋದ ಆಶ್ರಮದಲ್ಲಿ, ಪರಮ ಶಿವನಿಗೆ ಪೂಜೆ ಸಲ್ಲಿಸೋ ಮೂಲಕ ತಮ್ಮ ಹುಟ್ಟು […]

ವಿರಾಟ್ ಗೆ 31ರ ಸಂಭ್ರಮ, ಹುಟ್ಟುಹಬ್ಬ ಆಚರಿಸಲು ಪತ್ನಿ ಜೊತೆ ಭೂತಾನ್ ಗೆ ಪಯಣ
ಸಾಧು ಶ್ರೀನಾಥ್​
|

Updated on: Nov 06, 2019 | 10:52 AM

Share

ಬ್ಯಾಟಿಂಗ್​ ಸಾಮ್ರಾಟ, ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇವತ್ತು ತಮ್ಮ 31ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ರತೀ ಬಾರಿ ಡಿಫರೆಂಟ್ ಆಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ವಿರಾಟ್ ಈ ಬಾರಿ ಪತ್ನಿ ಅನುಷ್ಕಾ ಜೊತೆ ಭೂತಾನ್​ಗೆ ತೆರಳಿದ್ದಾರೆ.

2017ರಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಡ್ರೆಸ್ಸಿಂಗ್ ರೂಮ್​ನಲ್ಲಿ ಹುಟ್ಟು ಹಬ್ಬವನ್ನ ಆಚರಿಸಿಕೊಂಡಿದ್ರು. ಕಳೆದ ವರ್ಷ ವಿರಾಟ್ ಕೊಹ್ಲಿ ಹರಿದ್ವಾರದಲ್ಲಿರೋ ಅನಂತ್ ಧಾಮ ಆತ್ಮಬೋದ ಆಶ್ರಮದಲ್ಲಿ, ಪರಮ ಶಿವನಿಗೆ ಪೂಜೆ ಸಲ್ಲಿಸೋ ಮೂಲಕ ತಮ್ಮ ಹುಟ್ಟು ಹಬ್ಬವನ್ನ ಆಚರಿಸಿಕೊಂಡಿದ್ರು. ಹೀಗೆ ಪ್ರತಿ ಬಾರಿಯೂ ಡಿಫರೆಂಟ್ ಆಗಿ ಬರ್ತ್​ಡೇ ಸೆಲಬ್ರೇಷನ್ ಮಾಡೋ ವಿರಾಟ್ ಈ ವರ್ಷದ ಹುಟ್ಟುಹಬ್ಬವನ್ನ ಭೂತಾನ್​ನಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ.

ಬಾಂಗ್ಲಾ ವಿರುದ್ಧದ ಟಿಟ್ವೆಂಟಿ ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿರುವ ವಿರಾಟ್, ಪತ್ನಿ ಅನುಷ್ಕಾ ಶರ್ಮಾ ಜೊತೆ ಭೂತಾನ್​ನಲ್ಲಿ ಜಾಲಿ ಟ್ರಿಪ್ ಮಾಡುತ್ತಿದ್ದಾರೆ. ಭೂತಾನ್​ನ ಪ್ರೇಕ್ಷಣಿಯ ಸ್ಥಳಗಳಿಗೆ ಭೇಟಿ ಕೊಡ್ತೀರೋ ಈ ಜೋಡಿ, ಅಲ್ಲಿ ತಗೆದುಕೊಂಡ ಫೋಟೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ.

ಇಂದಿಗೆ 31ನೇ ವಸಂತಕ್ಕೆ ಕಾಲಿಟ್ಟಿರುವ ವಿರಾಟ್ ಈಗಲೇ ದಿಗ್ಗಜ, ಕ್ರಿಕೆಟಿಗ ಅಂತಾ ಕರೆಸಿಕೊಂಡಿದ್ದಾರೆ. 2008ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಕೊಹ್ಲಿ ಮತ್ತೆಂದೂ ಹಿಂತಿರುಗಿ ನೋಡಲಿಲ್ಲ. ಆವತ್ತಿಗ ಸಚಿನ್ ತೆಂಡುಲ್ಕರ್ ದಾಖಲೆ ಬರೆಯೋದೇ ನನ್ನ ಜಾಯಮಾನ ಅಂತಾ ಘರ್ಜಿಸಿದ್ರೆ, ಇವತ್ತಿಗೆ ವಿರಾಟ್ ದಾಖಲೆ ಮುರಿಯೋದೇ ನನ್ನ ಜಾಯಮಾನ ಅಂತಾ ರನ್ ವೀರನಾಗಿ ಹೋರಹೊಮ್ಮಿದ್ದಾನೆ.

ಟೆಸ್ಟ್, ಏಕದಿನ ಮತ್ತು ಟಿಟ್ವೆಂಟಿ ಈ ಮೂರು ಫಾರ್ಮೆಟ್​ನಲ್ಲಿ ನಾಯಕನಾಗಿ ಟೀಮ್ ಇಂಡಿಯಾವನ್ನ ಯಶಸ್ಸಿನ ಉತ್ತುಂಗಕ್ಕೇರಿಸಿರುವ ವಿರಾಟ್​ಗೆ, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿದೆ. ಇತ್ತ ಅಭಿಮಾನಿಗಳೇ ದೇವರು ಅನ್ನೋ ವಿರಾಟ್, ಎಲ್ಲಾ ನಿಮ್ಮ ಹಾರೈಕೆ ಪ್ರೀತಿ ಅಂತಾ ಧನ್ಯವಾದಗಳನ್ನ ಹೇಳುತ್ತಿದ್ದಾರೆ.

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ