AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಕ್ರಿಕೆಟ್ ಆಟಗಾರ್ತಿ ತಾಯಿಯ ಕೋವಿಡ್ ಚಿಕಿತ್ಸೆಗೆ ನೆರವಾದ ಕ್ಯಾಪ್ಟನ್ ವಿರಾಟ್​ ಕೊಹ್ಲಿ; ಕೊಂಡಾಡಿದ ಶಿವಲಾಲ್​ ಯಾದವ್​ ಸಹೋದರಿ

Virat Kohli donates: ತಾರಾ ದಂಪತಿಯಾದ ವಿರಾಟ್​ ಕೊಹ್ಲಿ - ಅನುಷ್ಕಾ ಅವರು ಈ ಆಂದೋಲನದ ಮುಖಾಂತರ ಅಂದಾಜು 11 ಕೋಟಿ ರೂಪಾಯಿಗೂ ಹೆಚ್ಚು ಧನ ಸಂಗ್ರಹಿಸಿದರು. ಕೋವಿಡ್​ ಸೋಂಕಿತರಿಗೆ ನೆರವಾಗಲೆಂದು ಖುದ್ದಾಗಿ ವಿರಾಟ್​ ಕೊಹ್ಲಿ ದಂಪತಿ ಸಹ ಕೋಟಿ ರೂ ದೇಣಿಗೆ ನೀಡಿದ್ದಾರೆ.

ಮಾಜಿ ಕ್ರಿಕೆಟ್ ಆಟಗಾರ್ತಿ ತಾಯಿಯ ಕೋವಿಡ್ ಚಿಕಿತ್ಸೆಗೆ ನೆರವಾದ ಕ್ಯಾಪ್ಟನ್ ವಿರಾಟ್​ ಕೊಹ್ಲಿ; ಕೊಂಡಾಡಿದ ಶಿವಲಾಲ್​ ಯಾದವ್​ ಸಹೋದರಿ
ವಿರಾಟ್​ ಕೊಹ್ಲಿ
ಸಾಧು ಶ್ರೀನಾಥ್​
|

Updated on: May 20, 2021 | 12:16 PM

Share

ಶ್ರಾವಂತಿ ನಾಯ್ಡು ಭಾರತದ ಮಾಜಿ ಕ್ರಿಕೆಟ್ ಆಟಗಾರ್ತಿ. ಅವರ ತಾಯಿ ಇತ್ತೀಚೆಗೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಅದೇ ವೇಳೆಗೆ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್​ ಕೊಹ್ಲಿ ಅವರು ಮುಂದೂಡಲ್ಪಟ್ಟಿರುವ IPL 2021 ಟೂರ್ನಿಯಿಂದಾಗ ಮನೆ ಸೇರಿಕೊಂಡರು. ಸರಿಯಾಗಿ ಆ ವೇಳೆಯಲ್ಲೇ ಅವರ ತಾರಾ ಪತ್ನಿ ಅನುಷ್ಕಾ ಶರ್ಮಾ ಅವರು ಕೊವೀಡ್​ ಸೋಂಕಿತರಿಗೆ ನೆರವಾಗಬೇಕೆಂದು ತಮ್ಮ ನಿಧಿ ಸಂಗ್ರಹ ಕಾರ್ಯಕ್ಕೆ ಮುಂದಾದರು. ತಾರಾ ದಂಪತಿಯಾದ ವಿರಾಟ್​ ಕೊಹ್ಲಿ – ಅನುಷ್ಕಾ ಅವರು ಈ ಆಂದೋಲನದ ಮುಖಾಂತರ ಅಂದಾಜು 11 ಕೋಟಿ ರೂಪಾಯಿಗೂ ಹೆಚ್ಚು ಧನ ಸಂಗ್ರಹಿಸಿದರು. ಕೋವಿಡ್​ ಸೋಂಕಿತರಿಗೆ ನೆರವಾಗಲೆಂದು ಖುದ್ದಾಗಿ ವಿರಾಟ್​ ಕೊಹ್ಲಿ ದಂಪತಿ ಸಹ ಕೋಟಿ ರೂ ದೇಣಿಗೆ ನೀಡಿದ್ದಾರೆ.

ಈ ಮಧ್ಯೆ ನಿನ್ನೆ ಬುಧವಾರ ಕ್ಯಾಪ್ಟನ್ ವಿರಾಟ್​ ಕೊಹ್ಲಿ ತಮ್ಮ ಸಹೋದ್ಯೋಗಿ ಆಟಗಾರ್ತಿಗೆ ಆರ್ಥಿಕ ನೆರವು ನೀಡಿ, ಸತ್ಕಾರ್ಯ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಕೋವಿಡ್​ ಚಿಕಿತ್ಸೆ ಪಡೆಯುತ್ತಿರುವ ಭಾರತದ ಮಾಜಿ ಕ್ರಿಕೆಟ್ ಆಟಗಾರ್ತಿ ಶ್ರಾವಂತಿ ನಾಯ್ಡು ಅವರ ತಾಯಿ ಎಸ್​ ಕೆ ಸುಮನ್​ ಅವರ ಚಿಕಿತ್ಸೆಗೆಂದು ₹6.77 ಲಕ್ಷ ಆರ್ಥಿಕ ದೇಣಿಗೆ ನೀಡಿದ್ದಾರೆ.

ಮಾಜಿ ಸ್ಪಿನ್​ ಬೌಲರ್​ ಶಿವಲಾಲ್​ ಯಾದವ್​ ಅವರ ಸಹೋದರಿ, ಬಿಸಿಸಿಐ ದಕ್ಷಿಣ ವಲಯ ಸಂಯೋಜಕಿ ಎನ್​ ವಿದ್ಯಾ ಯಾದವ್​ ಅವರು ಶ್ರಾವಂತಿ ನಾಯ್ಡು ಅವರ ತಾಯಿಗೆ ಆರ್ಥಕ ನೆರವಿನ ಅಗತ್ಯವಿದೆ ಎಂದು ಟ್ವಿಟ್ಟರ್​ನಲ್ಲಿ ಗಮನ ಸೆಳೆದಿದ್ದರು. ಮತ್ತು ಆಟ ಟ್ವೀಟ್​ ಅನ್ನು ವಿರಾಟ್​ ಕೊಹ್ಲಿಗೆ ಟ್ಯಾಗ್​ ಮಾಡಿದ್ದರು. ಸುಮನ್​ ಅವರ ಕೋವಿಡ್ ಚಿಕಿತ್ಸೆಗೆಂದು ಅದಾಗಲೇ 16 ಲಕ್ಷ ರೂಪಾಯಿ ಖರ್ಚು ಮಡಲಾಗಿದೆ ಎಂದು ಟ್ವೀಟ್​ನಲ್ಲಿ ಉಲ್ಲೇಖಿಸಿದ್ದರು. ಇದನ್ನು ಕಂಡು ಕರಗಿದ ವಿರಾಟ್​ ಕೊಹ್ಲಿ ದಂಪತಿ ತಕ್ಷಣ ಶ್ರಾವಂತಿ ನಾಯ್ಡು ಅವರತ್ತ ನೆರವಿನಹಸ್ತ ಚಾಚಿದ್ದಾರೆ. ಈ ಸಕಾಲಿಕ, ಅಮೂಲ್ಯ ನೆರವನ್ನು ಕಂಡು ವಿರಾಟ್​ ಕೊಹ್ಲಿ ದಂಪತಿಯನ್ನು ವಿದ್ಯಾ ಯಾದವ್​ ಕೊಂಡಾಡಿದ್ದಾರೆ.

(Virat Kohli donates rs 6.77 lakh for covid 19 treatment of former women cricketer Sravanthi Naidu mother SK Suman)

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ