AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನಿದು! 2020ರ ಅಂತ್ಯಕ್ಕೆ ಅಪಖ್ಯಾತಿಗೆ ತುತ್ತಾದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ?

2008ರಲ್ಲಿ ವಿರಾಟ್​ ಕೊಹ್ಲಿ ಏಕದಿನ ಕ್ರಿಕೆಟ್​ಗೆ ಕಾಲಿಟ್ಟಿದ್ದರು. ಅಲ್ಲಿಂದ ಇಲ್ಲಿಯವರೆಗೂ ಪ್ರತಿ ವರ್ಷ ಸಾಕಷ್ಟು ಶತಕಗಳು ಅವರ ಬ್ಯಾಟ್​ನಿಂದ ಸಿಡಿದಿವೆ.

ಏನಿದು! 2020ರ ಅಂತ್ಯಕ್ಕೆ ಅಪಖ್ಯಾತಿಗೆ ತುತ್ತಾದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ?
ವಿರಾಟ್ ಕೊಹ್ಲಿ
shruti hegde
| Edited By: |

Updated on: Dec 02, 2020 | 6:13 PM

Share

2020 ಅನೇಕರ ಪಾಲಿಗೆ ಕೆಟ್ಟ ವರ್ಷವಾಗಿದೆ. ಇದಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಕೂಡ ಹೊರತಾಗಿಲ್ಲ. ಪ್ರತಿ ವರ್ಷ ದಾಖಲೆಯ ಮೇಲೆ ದಾಖಲೆ ಬರೆಯುತ್ತಿದ್ದ ಅವರನ್ನು ಈ ಬಾರಿ ಅಪಖ್ಯಾತಿ ಸುತ್ತಿಕೊಂಡಿದೆ.

ಈ ಬಾರಿಯ ಐಪಿಎಲ್​ನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿ ಕೊನೆಯಲ್ಲಿ ಎಡವಿತ್ತು. ಇದಕ್ಕೆ ವಿರಾಟ್​ ಕೊಹ್ಲಿ ಕಳಪೆ ನಾಯಕತ್ವವೇ ಕಾರಣ ಎನ್ನುವ ಮಾತು ಕೇಳಿ ಬಂದಿತ್ತು. ಅಲ್ಲದೆ, ಟೀಂ ಇಂಡಿಯಾಕ್ಕೆ ಟಿ20 ನಾಯಕನಾಗಿ ರೋಹಿತ್​ ಶರ್ಮಾ ನೇಮಕಗೊಳ್ಳಬೇಕು ಎನ್ನುವ ಆಗ್ರಹ ಕೂಡ ಕೇಳಿ ಬಂದಿತ್ತು. ಈ ಪರ-ವಿರೋಧ ಚರ್ಚೆ ನಡೆಯುತ್ತಿರುವಾಗಲೇ ಕೊಹ್ಲಿ ಒಂದೂ ಶತಕ ಬಾರಿಸದೆ 2020ಅನ್ನು ಪೂರ್ಣಗೊಳಿಸಿದ್ದಾರೆ.

ಅವರ ಬ್ಯಾಟಿನಿಂದ ಒಂದೂ ಏಕದಿನ ಶತಕ ಸಿಡಿಯಲಿಲ್ಲ ಈ ಬಾರಿ! 2008ರಲ್ಲಿ ವಿರಾಟ್​ ಕೊಹ್ಲಿ ಏಕದಿನ ಕ್ರಿಕೆಟ್​ಗೆ ಕಾಲಿಟ್ಟಿದ್ದರು. ಅಲ್ಲಿಂದ ಇಲ್ಲಿಯವರೆಗೂ ಪ್ರತಿ ವರ್ಷ ಸಾಕಷ್ಟು ಶತಕಗಳು ಅವರ ಬ್ಯಾಟ್​ನಿಂದ ಸಿಡಿದಿವೆ. ಆದರೆ, ಇದೇ ವರ್ಷ ಅವರು ಏಕದಿನ ಪಂದ್ಯದಲ್ಲಿ ಯಾವುದೇ ಶತಕ ಸಿಡಿಸಿಲ್ಲ. ಅವರ 12 ವರ್ಷಗಳ ಕ್ರಿಕೆಟ್​ ಬದುಕಿನಲ್ಲಿ ಈ ರೀತಿ ಆಗಿದ್ದು ಇದೇ ಮೊದಲು.

ಕೊರೋನಾ ವೈರಸ್​ ಸೋಂಕಿನಿಂದ ಜಗತ್ತಿನ ಹಲವು ದೇಶಗಳಲ್ಲಿ ಲಾಕ್​ಡೌನ್​ ಘೋಷಣೆಯಾದ ಹಿನ್ನೆಲೆಯಲ್ಲಿ ಟೀಂ ಇಂಡಿಯಾದ ಸಾಕಷ್ಟು ಪ್ರವಾಸಗಳು ರದ್ದಾಗಿದ್ದವು. ಹೀಗಾಗಿ ಕೊಹ್ಲಿ ಈ ಬಾರಿ ಆಡಿದ್ದು ಕೇವಲ 9 ಏಕದಿನ ಪಂದ್ಯಗಳು.

ಈ ಪೈಕಿ ಅವರು ಐದು ಅರ್ಧಶತಕ ಸೇರಿ 431 ರನ್​ ಸಿಡಿಸಿದ್ದಾರೆ. ಸರಾಸರಿ ರನ್​ ಪ್ರಮಾಣ 47.88 ಇದೆ. ಈ ವರ್ಷದ ಕೊನೆಯ ಏಕದಿನ ಪಂದ್ಯ ಇಂದು ಆಸ್ಟ್ರೇಲಿಯಾದ ಕ್ಯಾನ್​ಬೆರಾದಲ್ಲಿ ಬುಧವಾರ ನಡೆಯಿತು. ಪಂದ್ಯದಲ್ಲಿ ಕೊಹ್ಲಿ 63 ರನ್​ ಸಿಡಿಸಿದ್ದಾರೆ.

ವಿರಾಟ್​ ಕೊಹ್ಲಿ 2017ರಲ್ಲಿ 6, 2018ರಲ್ಲಿ 6 ಹಾಗೂ 2019ರಲ್ಲಿ 5 ಏಕದಿನ ಶತಕ ಸಿಡಿಸಿದ್ದರು.

ಸಚಿನ್​ ತೆಂಡೂಲ್ಕರ್​​ ದಾಖಲೆಯನ್ನು ಹಿಂದಿಕ್ಕಿದ ವಿರಾಟ್​ ಕೊಹ್ಲಿ!

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು