AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಇನ್ನೂ ಸರಿಯಾಗಿಲ್ಲ ವಿರಾಟ್​ ಕೊಹ್ಲಿ ಕಣ್ಣು; ಟಾಸ್​ ವೇಳೆ ಬಹಿರಂಗವಾಯ್ತು ವಿಚಾರ

18ನೇ ಓವರ್​ನ ಮೊದಲ ಬಾಲ್​ನಲ್ಲಿ ಕೃನಾಲ್​ ಪಾಂಡ್ಯ ಹೊಡೆದ ಶಾಟ್​ ವಿರಾಟ್​ ಕೊಹ್ಲಿ ಬಳಿ ಹೋಗಿತ್ತು. ಈ ಕ್ಯಾಚ್​ ಹಿಡಿಯೋಕೆ ಹೋದಾಗ ಬಾಲ್​ ನೇರವಾಗಿ ಕಣ್ಣಿನ ಮೇಲೆ ಬಿದ್ದಿತ್ತು.

Virat Kohli: ಇನ್ನೂ ಸರಿಯಾಗಿಲ್ಲ ವಿರಾಟ್​ ಕೊಹ್ಲಿ ಕಣ್ಣು; ಟಾಸ್​ ವೇಳೆ ಬಹಿರಂಗವಾಯ್ತು ವಿಚಾರ
ರಾಜೇಶ್ ದುಗ್ಗುಮನೆ
|

Updated on: Apr 14, 2021 | 7:34 PM

Share

ಮುಂಬೈ ವಿರುದ್ಧದ ಮ್ಯಾಚ್​ನಲ್ಲಿ ಕ್ಯಾಚ್​ ಹಿಡಿಯಲು ಹೋಗಿ ವಿರಾಟ್​ ಕೊಹ್ಲಿ ಕಣ್ಣಿಗೆ ಬಾಲ್​ ಬಡಿದಿತ್ತು. ಅವರ ಕಣ್ಣು ಸ್ವಲ್ಪ ಊದಿಕೊಂಡಿತ್ತು. ಈ ಮ್ಯಾಚ್​ ಪೂರ್ಣಗೊಂಡು ಐದು ದಿನ ಕಳೆದರೂ ವಿರಾಟ್​ ಕೊಹ್ಲಿ ಕಣ್ಣು ಸರಿ ಹೋದಂತೆ ಕಾಣುತ್ತಿಲ್ಲ. ಸನ್​ ರೈಸರ್ಸ್​ ಹೈದರಾಬಾದ್​ ವಿರುದ್ಧದ ಮ್ಯಾಚ್​ನ  ಟಾಸ್​ ವೇಳೆ ಈ ವಿಚಾರ ಗೊತ್ತಾಗಿದೆ. ಏಪ್ರಿಲ್​ 9ರಂದು ನಡೆದ ಮೊದಲ ಪಂದ್ಯದಲ್ಲಿ ಆರ್​ಸಿಬಿ ಮುಂಬೈ ಇಂಡಿಯನ್ಸ್​ ತಂಡವನ್ನು ಎದುರಿಸಿತ್ತು. ಮುಂಬೈ ಮೊದಲು ಬ್ಯಾಟಿಂಗ್​ಗೆ ಇಳಿದಿತ್ತು. 18ನೇ ಓವರ್​ನ ಮೊದಲ ಬಾಲ್​ನಲ್ಲಿ ಕೃನಾಲ್​ ಪಾಂಡ್ಯ ಹೊಡೆದ ಶಾಟ್​ ವಿರಾಟ್​ ಕೊಹ್ಲಿ ಬಳಿ ಹೋಗಿತ್ತು. ಈ ಕ್ಯಾಚ್​ ಹಿಡಿಯೋಕೆ ಹೋದಾಗ ಬಾಲ್​ ನೇರವಾಗಿ ಕಣ್ಣಿನ ಮೇಲೆ ಬಿದ್ದಿತ್ತು. ಕೊಹ್ಲಿ ಕಣ್ಣು ಉಬ್ಬಿದಂತೆ ಕಂಡಿತ್ತು. ಆದಾಗ್ಯೂ, ಅವರು ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್​ಗೆ ಇಳಿದಿದ್ದರು.

ಕೊಹ್ಲಿ ಕ್ಯಾಚ್​ ಬಿಟ್ಟ ಬಗ್ಗೆ ಎಲ್ಲರೂ ಅಪಸ್ವರ ತೆಗೆದಿದ್ದರು. ಆದರೆ, ಪಂದ್ಯ ಮುಗಿದ ನಂತರ ಕೊಹ್ಲಿ ಮಾತನಾಡೋಕೆ ಬಂದಾಗ ಕಣ್ಣು ಊದಿಕೊಂಡಿದ್ದು ಸರಿಯಾಗಿ ಕಾಣಿಸಿತ್ತು. ಈ ಬಗ್ಗೆ ಸಾಕಷ್ಟು ಜನರು ಬೇಸರ ಹೊರ ಹಾಕಿದ್ದರು.

ಇಂದು ಸನ್​ ರೈಸರ್ಸ್​ ಹೈದರಾಬಾದ್ ತಂಡವನ್ನು ರಾಯಲ್​ ಚಾಲೆಂಜರ್ಸ್​ ತಂಡ ಎದುರಿಸುತ್ತಿದೆ. ಟಾಸ್​ ಮಾಡೋಕೆ ಕೊಹ್ಲಿ ಬಂದಾಗ ಎಲ್ಲರ ಗಮನ ನೆಟ್ಟಿದ್ದು ಅವರ ಕಣ್ಣಿನ ಮೇಲೆ. ಅವರ ಬಲಗಣ್ಣು ಇನ್ನೂ ಊದಿಕೊಂಡೆ ಇದೆ. ಇದನ್ನು ನೋಡಿದ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಬೇಸರ ಹೊರಹಾಕಿದ್ದಾರೆ. ಇನ್ನೂ ಕೆಲವರು, ಕೊಹ್ಲಿ ಕ್ರೀಡಾಸ್ಫೂರ್ತಿಗೆ ಮೆಚ್ಚುಗೆ ಹೊರ ಹಾಕಿದ್ದಾರೆ.

ಇದನ್ನೂ ಓದಿ: Suresh Raina IPL 2021 CSK Team Player: ಕೊಹ್ಲಿ, ರೋಹಿತ್​ಗೂ ಮೊದಲು ಐಪಿಎಲ್​ನಲ್ಲಿ ಎಲ್ಲರ ಹೃದಯ ಗೆದ್ದ ಆಟಗಾರನೆಂದರೆ ಅದು ಸುರೇಶ್​ ರೈನಾ!

IPL 2021: ಕ್ಯಾಚ್​ ಬಿಟ್ಟು ಟ್ರೋಲಾದ ಕೊಹ್ಲಿ! ಮೊದಲ ಪಂದ್ಯದಲ್ಲೇ ಆರ್​ಸಿಬಿ ಬಿಟ್ಟಿದ್ದು ಬರೋಬ್ಬರಿ 5 ಕ್ಯಾಚ್

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?