AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇಲಿಂಗ್ ಸ್ಪರ್ಧೆ: ಟೋಕಿಯೋ ಒಲಂಪಿಕ್ಸ್​ನಲ್ಲಿ ಬಾಗವಹಿಸುವ ಅವಕಾಶ ಗಿಟ್ಟಿಸಿದ ಬೆಂಗಳೂರು ಎಂ​ಇಜಿಯ ಸುಬೇದಾರ್ ವಿಷ್ಣು ಸರವಣನ್

ಎಂ​ಇಜಿಯಲ್ಲಿ ಹೆಸರನ್ನು ನೋಂದಾಯಿಸಿದ ನಂತರ ವಿಷ್ಣು ಸುಬೇದಾರ್ 2018ರಲ್ಲಿ ಸೀನಿಯರ್ ರಾಷ್ಟ್ರೀಯ ಚಾಂಪಿಯನ್​ಸಿಪ್​ನಲ್ಲಿ ತನ್ನ ಮೊದಲ ಚಿನ್ನದ ಪದಕವನ್ನು ಗೆದ್ದರು. ಅದಾದ ನಂತರವೇ ಅವರು ಹಲವಾರು ಅಂತರರಾಷ್ಟ್ರೀಯ ಈವೆಂಟ್​ಗಳಲ್ಲಿ ಭಾಗವಹಿಸಿ ಗಮನ ಸೆಳೆದರು.

ಸೇಲಿಂಗ್ ಸ್ಪರ್ಧೆ: ಟೋಕಿಯೋ ಒಲಂಪಿಕ್ಸ್​ನಲ್ಲಿ ಬಾಗವಹಿಸುವ ಅವಕಾಶ ಗಿಟ್ಟಿಸಿದ ಬೆಂಗಳೂರು ಎಂ​ಇಜಿಯ ಸುಬೇದಾರ್ ವಿಷ್ಣು ಸರವಣನ್
ಸುಬೇದಾರ್ ವಿಷ್ಣು ಸರವಣನ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: |

Updated on: Apr 09, 2021 | 10:56 PM

Share

ಬೆಂಗಳೂರು: ಭಾರತೀಯ ಸೇನೆಯ ಭಾಗವಾಗಿರುವ ಬೆಂಗಳೂರು ನೆಲೆಯ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್​ನಲ್ಲಿ ಅಧಿಕಾರಿಯಾಗಿರುವ ಸುಬೇದಾರ್ ವಿಷ್ಣು ಸರವಣನ್ ಅವರು ಟೊಕಿಯೊ ಒಲಂಪಿಕ್ಸ್​ನಲ್ಲಿ ಭಾಗವಹಿಸಲು ಅರ್ಹತೆ ಗಿಟ್ಟಿಸಿರುವ ನಾಲ್ವರು ಭಾರತೀಯ ಸೇಲರ್​ಗಳಲ್ಲಿ ಒಬ್ಬರಾಗಿದ್ದಾರೆ.ಭಾರತೀಯ ರಕ್ಷಣಾ ಇಲಾಖೆಯ ಸಾರ್ವಜನಿಕ ಸಂಪರ್ಕಾಧಿಕಾರಿಯೊಬ್ಬರ ಹೇಳಿಕೆ ಪ್ರಕಾರ, ಇತ್ತೀಚಿಗೆ ಓಮನ್​ನಲ್ಲಿ ನಡೆದ ಏಷ್ಯನ್​ ಅರ್ಹತಾ ಸುತ್ತಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ವಿಷ್ಣು ಒಲಂಪಿಕ್ಸ್​ಗೆ ಅರ್ಹತೆ ಗಿಟ್ಟಿಸಿದ್ದಾರೆ. 2015ರಲ್ಲಿ ಸರವಣನ್ ಎಂ​ಇಜಿ ಬಾಯ್ಸ್ ಸ್ಪೋರ್ಟ್ಸ್ ಕಂಪನಿ ಸೇರಿದ ನಂತರ ಅವರ ಪ್ರದರ್ಶನದಲ್ಲಿ ಬಹಳಷ್ಟು ಸುಧಾರಣೆಯಾಗಿದೆ ಎಂದು ಪಿಆರ್​ಒ ಹೇಳಿಕೆ ತಿಳಿಸಯತ್ತದೆ.

‘ಸುಬೇದಾರ್ ವಿಷ್ಣು ಸರವಣನ್ ಅವರು 2015ರಲ್ಲಿ ಎಮ್​ಇಜಿಯ ಬಾಯ್ಸ್ ಸ್ಪೋರ್ಟ್ಸ್​ ಕಂಪನಿಯಲ್ಲಿ ಬಾಯ್ಸ್ ಸ್ಪೋರ್ಟ್ಸ್ ಕೆಡೆಟ್ ಆಗಿ ತಮ್ಮ ಹೆಸರನ್ನು ನೋಂದಾಯಿಸಿದರು. ಅವರ ತಂದೆ ಸುಬೇದಾರ್ ಸರವಣನ್ ಅವರು ಮದ್ರಾಸ್ ಸ್ಯಾಪರ್ಸ್​ನಲ್ಲಿ ಸೇಲರ್ ಅಗಿದ್ದರು. ಎಮ್​ಇಜಿಯ ಬಾಯ್ಸ್ ಸ್ಪೋರ್ಟ್ಸ್​ ಕಂಪನಿ ಸೇರಿದ ಅಲ್ಪಾವಧಿಯಲ್ಲೇ ವಿಷ್ಣು ಸರವಣನ್ ಅವರು ಅಪಾರ ಬದ್ಧತೆ ಮತ್ತು ಎಮ್​ಇಜಿಯ ಸಹಕಾರದೊಂದಿಗೆ ರಾಷ್ಟ್ರೀಯ ಜ್ಯೂನಿಯರ್ ಮತ್ತು ಯುವ ನ್ಯಾಷನಲ್ ಚಾಂಪಿಯನ್​ಶಿಪ್​ಗಳಲ್ಲಿ ಭಾಗವಹಿಸಿ ಪದಕಗಳನ್ನು ಗೆದ್ದಿದ್ದಾರೆ. ಇಲ್ಲಿಯವರೆಗೆ 30 ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ಬಾಗವಹಿಸಿರುವ ಅವರು ಹದಿಮೂರು ಸಲ ಟಾಪ್​ ಮೂವರಲ್ಲಿ ಒಬ್ಬರಾಗಿದ್ದಾರೆ,’ ಎಂದು ಎಮ್​ಇಜಿ ಬಿಡುಗಡೆ ಮಾಡಿರುವ ಹೇಳಿಕೆ ತಿಳಿಸುತ್ತದೆ.

ಎಮ್​ಇಜಿಯಲ್ಲಿ ಹೆಸರನ್ನು ನೋಂದಾಯಿಸಿದ ನಂತರ ವಿಷ್ಣು ಸುಬೇದಾರ್ 2018ರಲ್ಲಿ ಸೀನಿಯರ್ ರಾಷ್ಟ್ರೀಯ ಚಾಂಪಿಯನ್​ಸಿಪ್​ನಲ್ಲಿ ತನ್ನ ಮೊದಲ ಚಿನ್ನದ ಪದಕವನ್ನು ಗೆದ್ದರು. ಅದಾದ ನಂತರವೇ ಅವರು ಹಲವಾರು ಅಂತರರಾಷ್ಟ್ರೀಯ ಈವೆಂಟ್​ಗಳಲ್ಲಿ ಭಾಗವಹಿಸಿ ಗಮನ ಸೆಳೆದರು.

ಯುರೋಪಿನ ಕ್ರೊವೇಶಿಯಾದಲ್ಲಿ 2019ರಲ್ಲಿ ನಡೆದ ಲೇಸರ್ ಅಂಡರ್-21 ವಿಶ್ವ ಸೇಲಿಂಗ್ ಚಾಂಪಿಯನ್​ಶಿಪ್​ನಲ್ಲಿ ವಿಷ್ಣು ಬಾಗವಹಿಸಿ ಕಂಚಿನ ಪದಕ ಗೆದ್ದರು. ಈ ಚಾಂಪಿಯನ್​ಶಿಪ್​ನಲ್ಲಿ 41 ರಾಷ್ಟ್ರಗಳ 144 ಸ್ಪರ್ಧಿಗಳು ಭಾಗವಹಿಸಿದ್ದರು. ಏತನ್ಮಧ್ಯೆ, ನೆಹ್ರಾ ಕುಮಾನನ್ ಅವರು ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದ ಮೊದಲ ಭಾರತೀಯ ಮಹಿಳೆಯ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ, ಗಣಪತಿ ಚೆಂಗಪ್ಪ ಮತ್ತು ವರುಣ ಠಕ್ಕರ್ ಅವರ ಜೋಡಿಯು ಒಲಂಪಿಕ್ಸ್​ನ ಸೇಲಿಂಗ್ಈವೆಂಟ್​ನಲ್ಲಿ ಭಾಗವಹಿಸಲು ಅರ್ಹತೆ ಗಿಟ್ಟಿಸಿದೆ.

ಇದನ್ನೂ ಓದಿ: Tokyo Olympics: ಫೆನ್ಸಿಂಗ್‌ ವಿಭಾಗದಲ್ಲಿ ಟೋಕಿಯೊ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಮೊದಲ ಭಾರತೀಯ ಮಹಿಳೆ ಭವಾನಿ ದೇವಿ!

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?