AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಪರಿಣಿತ ಹೇಳಿದ್ದನ್ನು ನಾವು ಪ್ರಶ್ನಿಸುವಂತಿರಲಿಲ್ಲ: ಆರನ್ ಫಿಂಚ್

ಕನ್ಕಶನ್ ಸಬ್​ಸ್ಟಿಟ್ಯೂಟ್ ವಿಷಯ ಚರ್ಚೆಗೊಳಗಾಗಿದೆ. ರವೀಂದ್ರ ಜಡೇಜಾ ಅವರ ಸ್ಥಾನದಲ್ಲಿ ಯುಜ್ವೇಂದ್ರ ಚಹಲ್ ಅವರನ್ನು ಕನ್ಕಶನ್ ಸಬ್ ಆಗಿ ಉಪಯೋಗಿಸಿದ್ದನ್ನುಅಸ್ಟ್ರೇಲಿಯನ್ನರು ವಿರೋಧಿಸುತ್ತಿದ್ದಾರೆ. ಆದರೆ ಭಾರತೀಯರು ನಿಯಮದನುಸಾರ ಆಡಿಸಲಾಗಿದೆ ಎಂದು ಹೇಳುತ್ತಿದ್ದಾರೆ.

ವೈದ್ಯಕೀಯ ಪರಿಣಿತ ಹೇಳಿದ್ದನ್ನು ನಾವು ಪ್ರಶ್ನಿಸುವಂತಿರಲಿಲ್ಲ: ಆರನ್ ಫಿಂಚ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Dec 04, 2020 | 8:52 PM

Share

ತೊಡೆನೋವಿನಿಂದ ಬಳಲುತ್ತಿರುವ ರವೀಂದ್ರ ಜಡೇಜಾ

ಟೀಮ್ ಇಂಡಿಯ ಮೊದಲ ಟಿ20ಐ ಪಂದ್ಯದಲ್ಲಿ ಕನ್ಕಶನ್ ಸಬ್​ಸ್ಟಿಟ್ಯೂಟ್ ಆಗಿ ಯುಜ್ವೇಂದ್ರ ಚಹಲ್ ಅವರನ್ನು ಉಪಯೋಗಿಸಿದ್ದು ಭಾರೀ ಚರ್ಚೆಗೊಳಗಾಗಿದೆ. ಇಂದು ನಡೆದ ಪಂದ್ಯದಲ್ಲಿ ಆಸ್ಸೀ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಅವರ ಬೌನ್ಸರೊಂದು ರವೀಂದ್ರ ಜಡೇಜಾ ಅವರ ಹೆಲ್ಮೆಟ್​ಗೆ ಅಪ್ಪಳಿಸಿತು. ಭಾರತೀಯ ಬ್ಯಾಟ್ಸ್​ಮನ್ ಕುಸಿದು ಬಿದ್ದರಾದರೂ ಕೂಡಲೇ ಚೇತರಿಸಿಕೊಂಡು ಬ್ಯಾಟಿಂಗ್ ಮುಂದುವರಿಸಿದರು. ಅವರು ಕೇವಲ 23 ಎಸೆತಗಳಲ್ಲಿ ಅಜೇಯ 44 ರನ್ ಬಾರಿಸಿದ್ದು, ಭಾರತದ ಗೆಲುವಿನಲ್ಲಿ ದೊಡ್ಡ ಕಾಣಿಕೆ ಎನಿಸಿತು. ಹಾಗೆಯೇ ಅವರು ತೊಡೆನೋವಿನಿಂದ ಬಳಲುತ್ತಿದ್ದಿದ್ದು ಸ್ಪಷ್ಟವಾಗಿ ಗೋಚರಿಸುತ್ತಿತ್ತು ಹಾಗಾಗಿ, ಆಸ್ಟ್ರೇಲಿಯ ಬ್ಯಾಟ್ ಮಾಡುವಾಗ ಜಡೇಜಾ ಫೀಲ್ಡ್​ಗೆ ಬರಲಿಲ್ಲ.

ಅವರ ಸ್ಥಾನದಲ್ಲಿ ಮೈದಾನಕ್ಕಿಳಿದ ಯುಜ್ವೇಂದ್ರ ಚಹಲ್ ಅಮೋಘ ಬೌಲಿಂಗ್ ಪ್ರದರ್ಶನ ನೀಡಿ ಭಾರತಕ್ಕೆ ಗೆಲುವು ದಕ್ಕಲು ನೆರವಾದರು. ಆದರೆ ಅವರಿಗೆ ಆಡಲು ಅವಕಾಶ ನೀಡಿದ್ದು ಆಸ್ಟ್ರೇಲಿಯನ್ನರಿಗೆ ಅದರಲ್ಲೂ ವಿಶೇಷವಾಗಿ ಟೀಮಿನ ಕೋಚ್ ಜಸ್ಟಿನ್ ಲ್ಯಾಂಗರ್ ಅವರಿಗೆ ಸರಿಯೆನಿಸಲಿಲ್ಲ. ಅವರು ಬಹಳ ಹೊತ್ತಿನವರೆಗೆ ಮ್ಯಾಚ್ ರೆಫರಿ ಡೇವಿಡ್ ಬೂನ್ ಅವರೊಂದಿಗೆ ಬಹಳ ಗಹನವಾಗಿ ವಿಷಯವನ್ನು ಚರ್ಚಿಸಿದ್ದು ಟಿವಿಯಲ್ಲಿ ತೋರಿಸಲಾಯಿತು.

ಲ್ಯಾಂಗರ್, ಬೌಂಡರಿ ಲೈನ್ ಬಳಿ ಬೂನ್ ಅವರೊಂದಿಗೆ ಏನನ್ನು ಚರ್ಚಿಸಿದರು ಎಂದು ಪಂದ್ಯ ಮುಗಿದ ನಂತರ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಆಸ್ಟ್ರೇಲಿಯ ಟೀಮಿನ ನಾಯಕ ಆರನ್ ಫಿಂಚ್, ‘‘ಜಡೇಜಾ ಕನ್ಕಶನ್ ಒಳಗಾಗಿದ್ದಾರೆಂದು ಭಾರತೀಯರು ನಮಗೆ ಹೇಳಿದರು, ಅದನ್ನೇ ಲ್ಯಾಂಗರ್ ಚರ್ಚಿಸಿದರು. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ನಾವು ಮೆಡಿಕಲ್ ಎಕ್ಸ್​ಪರ್ಟ್​ನನ್ನು ಪ್ರಶ್ನಿಸುವಂತಿಲ್ಲ’’ ಎಂದರು.

ಹಾಗೆಯೇ ಪಂದ್ಯದ ಫಲಿತಾಂಶದ ಬಗ್ಗೆ ಕೇಳಿದಾಗ ಫಿಂಚ್, ‘‘ಕೊನೆಯ ಓವರ್​ಗಳಲ್ಲಿ ಜಾಸ್ತಿ ರನ್​ಗಳನ್ನು ಸೋರಿಸಿದ್ದು ನಮಗೆ ಮಾರಕವಾಯಿತು. ಹಾಗೆಯೇ ನಾವು ಬ್ಯಾಟ್​ ಮಾಡುವಾಗ ಮಧ್ಯದ ಓವರ್​ಗಳ ಹಂತದಲ್ಲಿ ಮತ್ತು ಕೊನೆಯಲ್ಲಿ ನಾವು ಹೆಚ್ಚು ಬೌಂಡರಿಗಳನ್ನು ಬಾರಿಸಲಿಲ್ಲ,’’ ಎಂದರು.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ